ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಸೋಮವಾರ ರಾತ್ರಿ ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕ ಪ್ರಕಾಶ್ ಜರ್ವಾಲ್ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲಹೆಗಾರ ವಿ.ಕೆ. ಜೈನ್ ಅವರನ್ನು ಬುಧವಾರ ಪೊಲಿಸರು ಬಂಧಿಸಿದ್ದಾರೆ.