<p><strong>ನವದೆಹಲಿ (ಪಿಟಿಐ):</strong> ಏಳು ಬ್ಯಾಂಕ್ಗಳಿಗೆ ಸಾಲ ಮರುಪಾವತಿ ಮಾಡದೆ ವಂಚಿಸಿದ ಆರೋಪ ಎದುರಿಸುತ್ತಿರುವ ರೊಟೊಮ್ಯಾಕ್ ಪೆನ್ ತಯಾರಿಕಾ ಕಂಪನಿಯ ನಿರ್ದೇಶಕ ವಿಕ್ರಮ್ ಕೊಠಾರಿ ಮತ್ತು ಅವರ ಪುತ್ರ ರಾಹುಲ್ ಕೊಠಾರಿಯನ್ನು ಸಿಬಿಐ ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆ ಇದೆ.</p>.<p>ಕಾನ್ಪುರದಿಂದ ತಂದೆ, ಮಗನನ್ನು ಬುಧವಾರ ದೆಹಲಿಯ ಸಿಬಿಐ ಪ್ರಧಾನ ಕಚೇರಿಗೆ ಕರೆ ತಂದಿರುವ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ಆರೋಪಿಗಳನ್ನು ದೆಹಲಿಗೆ ಕರೆತಂದ ಕಾರಣವನ್ನು ಸಿಬಿಐ ಬಹಿರಂಗಪಡಿಸಿಲ್ಲ. ಆದರೆ, ಬಂಧಿಸುವ ಉದ್ದೇಶದಿಂದಲೇ ಇಬ್ಬರನ್ನೂ ದೆಹಲಿ ಕರೆತರಲಾಗಿದೆ ಎಂದು ಹೇಳಲಾಗಿದೆ.</p>.<p>ಇದಕ್ಕೂ ಮೊದಲು ಕೊಠಾರಿ ಮನೆ ಮತ್ತು ಕಚೇರಿಗಳಿರುವ ಕಾನ್ಪುರದಲ್ಲೇ ಸಿಬಿಐ ಅಧಿಕಾರಿಗಳುವಿಚಾರಣೆ ನಡೆಸಿದ್ದರು.</p>.<p>ರೊಟೊಮ್ಯಾಕ್ ಕಂಪನಿ ತನ್ನಿಂದ ಪಡೆದ ₹ 800 ಕೋಟಿ ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಬ್ಯಾಂಕ್ ಆಫ್ ಬರೋಡಾ ಸಿಬಿಐಗೆ ದೂರು ನೀಡಿತ್ತು.</p>.<p>ದೂರನ್ನು ಆಧರಿಸಿ ತನಿಖೆ ಆರಂಭಿಸಿದ ಸಿಬಿಐ, ರೊಟೊಮ್ಯಾಕ್ ಕಂಪನಿ ಒಟ್ಟು ಏಳು ಕಂಪೆನಿಗಳಿಂದ ₹ 2,919 ಕೋಟಿ ಸಾಲ ಪಡೆದಿರುವುದನ್ನು ಪತ್ತೆ ಮಾಡಿತ್ತು. ಸಾಲ ಮತ್ತು ಬಡ್ಡಿ ಸೇರಿ ಕಂಪನಿಯು ಒಟ್ಟು ₹ 3,695 ಕೋಟಿ ಬಾಕಿ ಉಳಿಸಿಕೊಂಡಿದೆ.</p>.<p>ಕೊಠಾರಿ, ಅವರ ಪತ್ನಿ ಸಾಧನಾ, ಮಗ ರಾಹುಲ್ ಮತ್ತು ರೊಟೊಮ್ಯಾಕ್ನ ಎಲ್ಲಾ ನಿರ್ದೇಶಕರು ಕಂಪನಿಗೆಂದು ಪಡೆದ ಸಾಲವನ್ನು ಬೇರೆ ಉದ್ದೇಶಕ್ಕೆ ಬಳಸಿದ ಆರೋಪ ಎದುರಿಸುತ್ತಿದ್ದಾರೆ.</p>.<p>ಇವರ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ. ಕೊಠಾರಿ ಮತ್ತು ಕುಟುಂಬದವರು ದೇಶ ಬಿಟ್ಟು ಹೋಗದಂತೆ ಜಾರಿ ನಿರ್ದೇಶನಾಲಯ ಎಚ್ಚರವಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಏಳು ಬ್ಯಾಂಕ್ಗಳಿಗೆ ಸಾಲ ಮರುಪಾವತಿ ಮಾಡದೆ ವಂಚಿಸಿದ ಆರೋಪ ಎದುರಿಸುತ್ತಿರುವ ರೊಟೊಮ್ಯಾಕ್ ಪೆನ್ ತಯಾರಿಕಾ ಕಂಪನಿಯ ನಿರ್ದೇಶಕ ವಿಕ್ರಮ್ ಕೊಠಾರಿ ಮತ್ತು ಅವರ ಪುತ್ರ ರಾಹುಲ್ ಕೊಠಾರಿಯನ್ನು ಸಿಬಿಐ ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆ ಇದೆ.</p>.<p>ಕಾನ್ಪುರದಿಂದ ತಂದೆ, ಮಗನನ್ನು ಬುಧವಾರ ದೆಹಲಿಯ ಸಿಬಿಐ ಪ್ರಧಾನ ಕಚೇರಿಗೆ ಕರೆ ತಂದಿರುವ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ಆರೋಪಿಗಳನ್ನು ದೆಹಲಿಗೆ ಕರೆತಂದ ಕಾರಣವನ್ನು ಸಿಬಿಐ ಬಹಿರಂಗಪಡಿಸಿಲ್ಲ. ಆದರೆ, ಬಂಧಿಸುವ ಉದ್ದೇಶದಿಂದಲೇ ಇಬ್ಬರನ್ನೂ ದೆಹಲಿ ಕರೆತರಲಾಗಿದೆ ಎಂದು ಹೇಳಲಾಗಿದೆ.</p>.<p>ಇದಕ್ಕೂ ಮೊದಲು ಕೊಠಾರಿ ಮನೆ ಮತ್ತು ಕಚೇರಿಗಳಿರುವ ಕಾನ್ಪುರದಲ್ಲೇ ಸಿಬಿಐ ಅಧಿಕಾರಿಗಳುವಿಚಾರಣೆ ನಡೆಸಿದ್ದರು.</p>.<p>ರೊಟೊಮ್ಯಾಕ್ ಕಂಪನಿ ತನ್ನಿಂದ ಪಡೆದ ₹ 800 ಕೋಟಿ ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಬ್ಯಾಂಕ್ ಆಫ್ ಬರೋಡಾ ಸಿಬಿಐಗೆ ದೂರು ನೀಡಿತ್ತು.</p>.<p>ದೂರನ್ನು ಆಧರಿಸಿ ತನಿಖೆ ಆರಂಭಿಸಿದ ಸಿಬಿಐ, ರೊಟೊಮ್ಯಾಕ್ ಕಂಪನಿ ಒಟ್ಟು ಏಳು ಕಂಪೆನಿಗಳಿಂದ ₹ 2,919 ಕೋಟಿ ಸಾಲ ಪಡೆದಿರುವುದನ್ನು ಪತ್ತೆ ಮಾಡಿತ್ತು. ಸಾಲ ಮತ್ತು ಬಡ್ಡಿ ಸೇರಿ ಕಂಪನಿಯು ಒಟ್ಟು ₹ 3,695 ಕೋಟಿ ಬಾಕಿ ಉಳಿಸಿಕೊಂಡಿದೆ.</p>.<p>ಕೊಠಾರಿ, ಅವರ ಪತ್ನಿ ಸಾಧನಾ, ಮಗ ರಾಹುಲ್ ಮತ್ತು ರೊಟೊಮ್ಯಾಕ್ನ ಎಲ್ಲಾ ನಿರ್ದೇಶಕರು ಕಂಪನಿಗೆಂದು ಪಡೆದ ಸಾಲವನ್ನು ಬೇರೆ ಉದ್ದೇಶಕ್ಕೆ ಬಳಸಿದ ಆರೋಪ ಎದುರಿಸುತ್ತಿದ್ದಾರೆ.</p>.<p>ಇವರ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ. ಕೊಠಾರಿ ಮತ್ತು ಕುಟುಂಬದವರು ದೇಶ ಬಿಟ್ಟು ಹೋಗದಂತೆ ಜಾರಿ ನಿರ್ದೇಶನಾಲಯ ಎಚ್ಚರವಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>