<p><strong>ನವದೆಹಲಿ</strong>: ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ಯತ್ನಿಸುತ್ತಿರುವ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ನಡೆಯನ್ನು 56 ನಿವೃತ್ತ ನ್ಯಾಯಮೂರ್ತಿಗಳು ಶುಕ್ರವಾರ ಖಂಡಿಸಿದ್ದಾರೆ.</p>.<p>ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇದು ನ್ಯಾಯಮೂರ್ತಿಗಳನ್ನು ಬೆದರಿಸುವ ಪ್ರಯತ್ನ’ ಎಂದು ಟೀಕಿಸಿದ್ದಾರೆ.</p>.<p>ಮದುರೈ ಬಳಿಯ ತಿರುಪರನ್ಕುಂಡ್ರಂ ಬೆಟ್ಟದ ಮೇಲಿರುವ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅವಕಾಶ ನೀಡಿ ಮದ್ರಾಸ್ ಹೈಕೋರ್ಟ್ನ ಮದುರೈ ಪೀಠದ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಆದೇಶಿಸಿದ್ದರು.</p>.<p>‘ಕಾರ್ತಿಕ ದೀಪ ಬೆಳಗುವುದರಿಂದ, ಬೆಟ್ಟದಲ್ಲಿಯೇ ಇರುವ ದರ್ಗಾ ಅನುಯಾಯಿಗಳ ಅಥವಾ ಮುಸ್ಲಿಂ ಸಮುದಾಯದ ಹಕ್ಕುಗಳಿಗೆ ಚ್ಯುತಿ ಉಂಟಾಗುವುದಿಲ್ಲ’ ಎಂದೂ ಹೇಳಿದ್ದರು.</p>.<p>ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಲೋಕಸಭೆ ಸ್ಪೀಕರ್ಗೆ ಮಂಗಳವಾರ ನೋಟಿಸ್ ಸಲ್ಲಿಸಿದ್ದಾರೆ. </p>.<p>‘ಸಮಾಜದ ನಿರ್ದಿಷ್ಟ ವರ್ಗದ ಸೈದ್ಧಾಂತಿಕ ಮತ್ತು ರಾಜಕೀಯ ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳದ ನ್ಯಾಯಮೂರ್ತಿಗಳನ್ನು ಬೆದರಿಸುವ ಪ್ರಯತ್ನ ಇದಾಗಿದೆ. ಇಂತಹ ಪ್ರಯತ್ನಗಳಿಗೆ ಅವಕಾಶ ನೀಡಿದಲ್ಲಿ, ಅದು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಿದೆ’ ಎಂದು ನಿವೃತ್ತ ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಲು ಯತ್ನಿಸುತ್ತಿರುವ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ನಡೆಯನ್ನು 56 ನಿವೃತ್ತ ನ್ಯಾಯಮೂರ್ತಿಗಳು ಶುಕ್ರವಾರ ಖಂಡಿಸಿದ್ದಾರೆ.</p>.<p>ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇದು ನ್ಯಾಯಮೂರ್ತಿಗಳನ್ನು ಬೆದರಿಸುವ ಪ್ರಯತ್ನ’ ಎಂದು ಟೀಕಿಸಿದ್ದಾರೆ.</p>.<p>ಮದುರೈ ಬಳಿಯ ತಿರುಪರನ್ಕುಂಡ್ರಂ ಬೆಟ್ಟದ ಮೇಲಿರುವ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅವಕಾಶ ನೀಡಿ ಮದ್ರಾಸ್ ಹೈಕೋರ್ಟ್ನ ಮದುರೈ ಪೀಠದ ನ್ಯಾಯಮೂರ್ತಿ ಜಿ.ಆರ್.ಸ್ವಾಮಿನಾಥನ್ ಆದೇಶಿಸಿದ್ದರು.</p>.<p>‘ಕಾರ್ತಿಕ ದೀಪ ಬೆಳಗುವುದರಿಂದ, ಬೆಟ್ಟದಲ್ಲಿಯೇ ಇರುವ ದರ್ಗಾ ಅನುಯಾಯಿಗಳ ಅಥವಾ ಮುಸ್ಲಿಂ ಸಮುದಾಯದ ಹಕ್ಕುಗಳಿಗೆ ಚ್ಯುತಿ ಉಂಟಾಗುವುದಿಲ್ಲ’ ಎಂದೂ ಹೇಳಿದ್ದರು.</p>.<p>ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಲೋಕಸಭೆ ಸ್ಪೀಕರ್ಗೆ ಮಂಗಳವಾರ ನೋಟಿಸ್ ಸಲ್ಲಿಸಿದ್ದಾರೆ. </p>.<p>‘ಸಮಾಜದ ನಿರ್ದಿಷ್ಟ ವರ್ಗದ ಸೈದ್ಧಾಂತಿಕ ಮತ್ತು ರಾಜಕೀಯ ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳದ ನ್ಯಾಯಮೂರ್ತಿಗಳನ್ನು ಬೆದರಿಸುವ ಪ್ರಯತ್ನ ಇದಾಗಿದೆ. ಇಂತಹ ಪ್ರಯತ್ನಗಳಿಗೆ ಅವಕಾಶ ನೀಡಿದಲ್ಲಿ, ಅದು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಿದೆ’ ಎಂದು ನಿವೃತ್ತ ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>