<p><strong>ನವದೆಹಲಿ: </strong>ಜಮ್ಮು ಮತ್ತು ಕಾಶ್ಮೀರದಲ್ಲಿ 1989ರಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಆರಂಭವಾದಾಗಿನಿಂದ 5,800ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ತಿಳಿಸಲಾಗಿದೆ.</p>.<p>ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾದಕರ ಹಿಂಸಾಚಾರಕ್ಕೆ ನಲುಗಿದೆ. ಈ ಕೃತ್ಯಗಳನ್ನು ಗಡಿಯಾಚೆಯಿಂದ ಪ್ರಾಯೋಜಿಸಲಾಗುತ್ತಿದೆ, ಬೆಂಬಲಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲೋಕಸಭೆಯಲ್ಲಿ ಹೇಳಿದರು.</p>.<p>‘ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ ಈ ವರೆಗೆ (ಆಗಸ್ಟ್ 5, 1989ರಿಂದ , 2019ರವರೆಗೆ– 30 ವರ್ಷ) ಅಲ್ಲಿ, 5,886 ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದರು.</p>.<p>ಜಮ್ಮು ಕಾಶ್ಮೀರದಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿಯಾದರೂ ಉಗ್ರರ ವಿರುದ್ಧ ಎನ್ಕೌಂಟರ್ಗಳು, ಪೊಲೀಸ್–ಸೇನೆ ಕಾರ್ಯಾಚರಣೆಗಳು ನಡೆಯುತ್ತಲೇ ಇರುತ್ತವೆ. ಇಂಥ ಕಾರ್ಯಾಚಾರಣೆಗಳಲ್ಲಿ ಭದ್ರತಾ ಸಿಬ್ಬಂದಿ, ಪೊಲೀಸರು ಮೃತಪಟ್ಟ ಎಷ್ಟೋ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಜಮ್ಮು ಮತ್ತು ಕಾಶ್ಮೀರದಲ್ಲಿ 1989ರಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಆರಂಭವಾದಾಗಿನಿಂದ 5,800ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ತಿಳಿಸಲಾಗಿದೆ.</p>.<p>ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾದಕರ ಹಿಂಸಾಚಾರಕ್ಕೆ ನಲುಗಿದೆ. ಈ ಕೃತ್ಯಗಳನ್ನು ಗಡಿಯಾಚೆಯಿಂದ ಪ್ರಾಯೋಜಿಸಲಾಗುತ್ತಿದೆ, ಬೆಂಬಲಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಲೋಕಸಭೆಯಲ್ಲಿ ಹೇಳಿದರು.</p>.<p>‘ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ ಈ ವರೆಗೆ (ಆಗಸ್ಟ್ 5, 1989ರಿಂದ , 2019ರವರೆಗೆ– 30 ವರ್ಷ) ಅಲ್ಲಿ, 5,886 ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದರು.</p>.<p>ಜಮ್ಮು ಕಾಶ್ಮೀರದಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿಯಾದರೂ ಉಗ್ರರ ವಿರುದ್ಧ ಎನ್ಕೌಂಟರ್ಗಳು, ಪೊಲೀಸ್–ಸೇನೆ ಕಾರ್ಯಾಚರಣೆಗಳು ನಡೆಯುತ್ತಲೇ ಇರುತ್ತವೆ. ಇಂಥ ಕಾರ್ಯಾಚಾರಣೆಗಳಲ್ಲಿ ಭದ್ರತಾ ಸಿಬ್ಬಂದಿ, ಪೊಲೀಸರು ಮೃತಪಟ್ಟ ಎಷ್ಟೋ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>