ಕರೀಂನಗರ, ತೆಲಂಗಾಣ: ಮಂಚೇರಿಯಲ್ ಜಿಲ್ಲೆಯ ವೆಂಕಟಾಪುರ ಗ್ರಾಮದ ಚಿಕ್ಕ ಹೆಂಚಿನ ಮನೆಯೊಂದಕ್ಕೆ ಶನಿವಾರ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಜೀವ ದಹನಗೊಂಡಿದ್ದಾರೆ.
ಮೃತರಲ್ಲಿ ಒಬ್ಬರನ್ನು ಗ್ರಾಮ ಕಂದಾಯ ಸಹಾಯಕ ಮಾಸು ಶಿವಯ್ಯ(50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ತನಿಖೆಯ ಬಳಿಕವೇ ನಿಖರ ಕಾರಣ ತಿಳಿದು ಬರಬೇಕಿದೆ ಎಂದು ಡಿಸಿಪಿ ಅಖಿಲ್ ಮಹಾಜನ್ ತಿಳಿಸಿದ್ದಾರೆ.