<p><strong>ರತ್ನಗಿರಿ:</strong> ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ರತ್ನಗಿರಿ ಜಿಲ್ಲೆಯಲ್ಲಿರುವತಿವಾರೆ ಅಣೆಕಟ್ಟು ಒಡೆದ ಪರಿಣಾಮ12 ಮನೆಗಳು ಕೊಚ್ಚಿಹೋಗಿದ್ದು 6 ಜನರು ಮೃತಪಟ್ಟಿದ್ದಾರೆ.</p>.<p>ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಿವಾರೆ ಅಣೆಕಟ್ಟು ಒಡೆದಿದೆ. ಇದರ ಸಮೀಪದಲ್ಲಿದ್ದ 12 ಮನೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ನಾಪತ್ತೆಯಾದವರ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಎನ್ಡಿಆರ್ಎಫ್ ತಂಡದ ಸದಸ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಮುಂಬೈ, ಪುಣೆ, ರತ್ನಗಿರಿ, ನಾಸಿಕ್, ಠಾಣೆ ಸೇರಿದಂತೆ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು ಇಲ್ಲಿಯವರೆಗೂ35 ಮಂದಿ ಮೃತಪಟ್ಟಿದ್ದಾರೆ.ಮುಂಬೈನಲ್ಲಿ 21 ಮಂದಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.</p>.<p>ಸೋಮವಾರ ರಾತ್ರಿ ಆರಂಭವಾದ ಮಳೆ ಮಂಗಳವಾರ ಬೆಳಗ್ಗಿನವರೆಗೆ ನಿಲ್ಲಲೇ ಇಲ್ಲ. ಹಾಗಾಗಿ ರೈಲು, ರಸ್ತೆ ಮತ್ತು ವಿಮಾನ ಸಂಚಾರ ಬಹುತೇಕ ಸ್ಥಗಿತವಾಗಿದೆ. ಬುಧವಾರವೂ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p>.<p>ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಪಡ್ನಾವೀಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರತ್ನಗಿರಿ:</strong> ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ರತ್ನಗಿರಿ ಜಿಲ್ಲೆಯಲ್ಲಿರುವತಿವಾರೆ ಅಣೆಕಟ್ಟು ಒಡೆದ ಪರಿಣಾಮ12 ಮನೆಗಳು ಕೊಚ್ಚಿಹೋಗಿದ್ದು 6 ಜನರು ಮೃತಪಟ್ಟಿದ್ದಾರೆ.</p>.<p>ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಿವಾರೆ ಅಣೆಕಟ್ಟು ಒಡೆದಿದೆ. ಇದರ ಸಮೀಪದಲ್ಲಿದ್ದ 12 ಮನೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ನಾಪತ್ತೆಯಾದವರ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಎನ್ಡಿಆರ್ಎಫ್ ತಂಡದ ಸದಸ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<p>ಮುಂಬೈ, ಪುಣೆ, ರತ್ನಗಿರಿ, ನಾಸಿಕ್, ಠಾಣೆ ಸೇರಿದಂತೆ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು ಇಲ್ಲಿಯವರೆಗೂ35 ಮಂದಿ ಮೃತಪಟ್ಟಿದ್ದಾರೆ.ಮುಂಬೈನಲ್ಲಿ 21 ಮಂದಿ ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.</p>.<p>ಸೋಮವಾರ ರಾತ್ರಿ ಆರಂಭವಾದ ಮಳೆ ಮಂಗಳವಾರ ಬೆಳಗ್ಗಿನವರೆಗೆ ನಿಲ್ಲಲೇ ಇಲ್ಲ. ಹಾಗಾಗಿ ರೈಲು, ರಸ್ತೆ ಮತ್ತು ವಿಮಾನ ಸಂಚಾರ ಬಹುತೇಕ ಸ್ಥಗಿತವಾಗಿದೆ. ಬುಧವಾರವೂ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p>.<p>ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಪಡ್ನಾವೀಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>