ಮುಜಾಫರ್ನಗರ: ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿನ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ಟ್ರಕ್ಗೆ ಕಾರು ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿದ್ದಾರೆ.
ದೆಹಲಿಯಿಂದ ಹರಿದ್ವಾರಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಮುಂದೆ ಹೋಗುತ್ತಿದ್ದ ಟ್ರಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದವರೆಲ್ಲ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರೆಲ್ಲ ದೆಹಲಿಯ ಶಾಹ್ದಾರ ಜಿಲ್ಲೆಯವರು ಎನ್ನಲಾಗಿದೆ.
ಟ್ರಕ್ ಅಡಿಯಲ್ಲಿ ಸಿಲುಕಿದ್ದ ಕಾರನ್ನು ಹೊರತೆಗೆಯಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.