<p><strong>ಮೀರತ್</strong>: ಉತ್ತರ ಪ್ರದೇಶದ ಪೊಲೀಸ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ಕಾರ್ಯಪಡೆಯು(ಎಸ್ಟಿಎಫ್) ಮೀರತ್ ಮತ್ತು ದೆಹಲಿಯಲ್ಲಿ 7 ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಬಂಧಿತರು ಪೊಲೀಸ್ ನೇಮಕಾತಿ ಮತ್ತು ಬಡ್ತಿ ಮಂಡಳಿ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಗ್ಯಾಂಗ್ನ ಸದಸ್ಯರಾಗಿದ್ದಾರೆ ಎಂದು ಆರೋಪಿಸಲಾಗಿದೆ. </p><p>ಪ್ರಶ್ನೆಪತ್ರಿಕೆ ಸೋರಿಕೆಯ ಭಾರಿ ಅಕ್ರಮದ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿತ್ತು. ಪ್ರಕರಣ ಸಂಬಂಧ ಈ ತಿಂಗಳ ಆರಂಭದಲ್ಲಿ ಕೆಲವರನ್ನು ಬಂಧಿಸಲಾಗಿತ್ತು. </p><p>ಮೀರತ್ ಜಿಲ್ಲೆಯ ನಿವಾಸಿಗಳಾದ ದೀಪಕ್, ಬಿಟ್ಟು, ಪ್ರವೀಣ್, ರೋಹಿತ್, ನವೀನ್, ಸಾಹಿಲ್ ಅವರನ್ನು ಮಂಗಳವಾರ ರಾತ್ರಿ ಕಂಕೇರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಗೌತಮ ಬುದ್ಧ ನಗರದ ಪ್ರಮೋದ್ ಪಾಠಕ್ ಎಂಬ ಮತ್ತೊಬ್ಬ ಆರೋಪಿಯನ್ನು ದೆಹಲಿಯ ಮುಖರ್ಜಿ ನಗರದಲ್ಲಿ ಬಂಧಿಸಲಾಗಿದೆ.</p><p>ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಕೊಡುವುದು ಮತ್ತು ಪ್ರಶ್ನೆಗಳಿಗೆ ಉತ್ತರ ಹುಡುಕಿಕೊಡುವ ನುರಿತರನ್ನು ವ್ಯವಸ್ಥೆ ಮಾಡುವ ಕೆಲಸವನ್ನು ಈ ಗ್ಯಾಂಗ್ ಮಾಡುತ್ತಿತ್ತು ಎಂದು ಪ್ರಕಟಣೆ ತಿಳಿಸಿದೆ.</p><p> 2024ರ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ, ಉತ್ತರ ಸಿದ್ಧಪಡಿಸಲಾಗಿರುವ ಪ್ರಶ್ನೆಪತ್ರಿಕೆ, ಹಲವು ಮೊಬೈಲ್ ಪೋನ್ ಮತ್ತು ನಗದನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದೂ ಅದು ತಿಳಿಸಿದೆ.</p><p> ಆರೋಪಿಗಳು ಅಭ್ಯರ್ಥಿಗಳಿಂದ ಪ್ರಶ್ನೆಪತ್ರಿಕೆಗೆ ಸುಮಾರು ₹8 ಲಕ್ಷದಿಂದ ₹10 ಲಕ್ಷ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.</p><p>ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೀರತ್</strong>: ಉತ್ತರ ಪ್ರದೇಶದ ಪೊಲೀಸ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಶೇಷ ಕಾರ್ಯಪಡೆಯು(ಎಸ್ಟಿಎಫ್) ಮೀರತ್ ಮತ್ತು ದೆಹಲಿಯಲ್ಲಿ 7 ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಬಂಧಿತರು ಪೊಲೀಸ್ ನೇಮಕಾತಿ ಮತ್ತು ಬಡ್ತಿ ಮಂಡಳಿ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಗ್ಯಾಂಗ್ನ ಸದಸ್ಯರಾಗಿದ್ದಾರೆ ಎಂದು ಆರೋಪಿಸಲಾಗಿದೆ. </p><p>ಪ್ರಶ್ನೆಪತ್ರಿಕೆ ಸೋರಿಕೆಯ ಭಾರಿ ಅಕ್ರಮದ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿತ್ತು. ಪ್ರಕರಣ ಸಂಬಂಧ ಈ ತಿಂಗಳ ಆರಂಭದಲ್ಲಿ ಕೆಲವರನ್ನು ಬಂಧಿಸಲಾಗಿತ್ತು. </p><p>ಮೀರತ್ ಜಿಲ್ಲೆಯ ನಿವಾಸಿಗಳಾದ ದೀಪಕ್, ಬಿಟ್ಟು, ಪ್ರವೀಣ್, ರೋಹಿತ್, ನವೀನ್, ಸಾಹಿಲ್ ಅವರನ್ನು ಮಂಗಳವಾರ ರಾತ್ರಿ ಕಂಕೇರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಗೌತಮ ಬುದ್ಧ ನಗರದ ಪ್ರಮೋದ್ ಪಾಠಕ್ ಎಂಬ ಮತ್ತೊಬ್ಬ ಆರೋಪಿಯನ್ನು ದೆಹಲಿಯ ಮುಖರ್ಜಿ ನಗರದಲ್ಲಿ ಬಂಧಿಸಲಾಗಿದೆ.</p><p>ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಕೊಡುವುದು ಮತ್ತು ಪ್ರಶ್ನೆಗಳಿಗೆ ಉತ್ತರ ಹುಡುಕಿಕೊಡುವ ನುರಿತರನ್ನು ವ್ಯವಸ್ಥೆ ಮಾಡುವ ಕೆಲಸವನ್ನು ಈ ಗ್ಯಾಂಗ್ ಮಾಡುತ್ತಿತ್ತು ಎಂದು ಪ್ರಕಟಣೆ ತಿಳಿಸಿದೆ.</p><p> 2024ರ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ, ಉತ್ತರ ಸಿದ್ಧಪಡಿಸಲಾಗಿರುವ ಪ್ರಶ್ನೆಪತ್ರಿಕೆ, ಹಲವು ಮೊಬೈಲ್ ಪೋನ್ ಮತ್ತು ನಗದನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದೂ ಅದು ತಿಳಿಸಿದೆ.</p><p> ಆರೋಪಿಗಳು ಅಭ್ಯರ್ಥಿಗಳಿಂದ ಪ್ರಶ್ನೆಪತ್ರಿಕೆಗೆ ಸುಮಾರು ₹8 ಲಕ್ಷದಿಂದ ₹10 ಲಕ್ಷ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.</p><p>ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>