ಘಟನೆಯಲ್ಲಿ ಇನ್ನೂ ಮೂವರು ವಿದ್ಯಾರ್ಥಿಗಳು ಹಾಗೂ ಬೊಲೆರೊದ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಗುವಾಹಟಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮೃತರನ್ನು ಕೌಶಿಕ್ ಬರುವಾ, ಕೌಶಿಕ್ ಮೋಹನ್, ರಾಜ್ ಕಿರಣ್ ಭೂಯಾನ್, ಇಮೋನ್ ಬರುವಾ, ಅರಿಂದಮ್ ಭೋವಲ್, ಉಪಾಂಶು ಶರ್ಮಾ, ನಿಯಾರ್ ದೇಕಾ ಎಂದು ಗುರುತಿಸಲಾಗಿದೆ. ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.