<p><strong>ಇಟಾವಾ:</strong> ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಇಟಾವಾ ಜಿಲ್ಲೆಯಲ್ಲಿ 7 ಮಂದಿ, ಫಿರೋಜಾಬಾದ್ನಲ್ಲಿ ಇಬ್ಬರು ಹಾಗೂ ಬಲರಾಮ್ಪುರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ವಿವಿಧೆಡೆ ಸಿಡಿಲು ಬಡಿದು 11 ಮಂದಿ ಗಾಯಗೊಂಡಿದ್ದಾರೆ ಎಂದೂ ವಿವರಿಸಿದ್ದಾರೆ.</p>.<p>ಇಟಾವಾ ಜಿಲ್ಲೆಯ ಚಂದ್ರಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಮನೆಯ ಗೋಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೃಪಾಲ್ಪುರ ಗ್ರಾಮದಲ್ಲಿ ಪೆಟ್ರೋಲ್ ಬಂಕೊಂದರ ಗೋಡೆ ಕುಸಿದು ಇಬ್ಬರು ಹಾಗೂ ಚಕ್ರನಗರ ಪ್ರದೇಶದಲ್ಲಿ ಮನೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉತ್ತರಾಖಂಡದಲ್ಲಿ ಭಾರಿ ಮಳೆ (ಡೆಹ್ರಾಡೂನ್ ವರದಿ): ಉತ್ತರಾಖಂಡದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆ ಸುರಿದಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ.</p>.<p>ಉತ್ತರಕಾಶಿ ಜಿಲ್ಲೆಯ ಕುಮ್ರಾಡ ಗ್ರಾಮದಲ್ಲಿ ಮಳೆಗೆ ಮನೆಯೊಂದು ಕುಸಿದಿದ್ದು, ಅದರೊಳಗೆ ಸಿಲುಕಿಕೊಂಡಿರುವ ಮಹಿಳೆಯ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಭೂಕುಸಿತದ ಪರಿಣಾಮ ಹಲವು ಹೆದ್ದಾರಿಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದ 100ಕ್ಕೂ ಹೆಚ್ಚು ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಡೆಹ್ರಾಡೂನ್ನಲ್ಲಿ ಎರಡನೇ ದಿನವೂ ಭಾರಿ ಮಳೆ ಮುಂದುವರಿದಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ ಎಂದಿದ್ದಾರೆ.</p>.<p><strong>ದೆಹಲಿಯಲ್ಲೂ ಮಳೆ: </strong>ದೆಹಲಿಯಲ್ಲಿ ಗುರುವಾರವೂ ಸಾಧಾರಣ ಮಳೆಯಾಗಿದ್ದು, ನಗರದ ಕೆಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಟಾವಾ:</strong> ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಇಟಾವಾ ಜಿಲ್ಲೆಯಲ್ಲಿ 7 ಮಂದಿ, ಫಿರೋಜಾಬಾದ್ನಲ್ಲಿ ಇಬ್ಬರು ಹಾಗೂ ಬಲರಾಮ್ಪುರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ವಿವಿಧೆಡೆ ಸಿಡಿಲು ಬಡಿದು 11 ಮಂದಿ ಗಾಯಗೊಂಡಿದ್ದಾರೆ ಎಂದೂ ವಿವರಿಸಿದ್ದಾರೆ.</p>.<p>ಇಟಾವಾ ಜಿಲ್ಲೆಯ ಚಂದ್ರಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಮನೆಯ ಗೋಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೃಪಾಲ್ಪುರ ಗ್ರಾಮದಲ್ಲಿ ಪೆಟ್ರೋಲ್ ಬಂಕೊಂದರ ಗೋಡೆ ಕುಸಿದು ಇಬ್ಬರು ಹಾಗೂ ಚಕ್ರನಗರ ಪ್ರದೇಶದಲ್ಲಿ ಮನೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉತ್ತರಾಖಂಡದಲ್ಲಿ ಭಾರಿ ಮಳೆ (ಡೆಹ್ರಾಡೂನ್ ವರದಿ): ಉತ್ತರಾಖಂಡದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆ ಸುರಿದಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ.</p>.<p>ಉತ್ತರಕಾಶಿ ಜಿಲ್ಲೆಯ ಕುಮ್ರಾಡ ಗ್ರಾಮದಲ್ಲಿ ಮಳೆಗೆ ಮನೆಯೊಂದು ಕುಸಿದಿದ್ದು, ಅದರೊಳಗೆ ಸಿಲುಕಿಕೊಂಡಿರುವ ಮಹಿಳೆಯ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಭೂಕುಸಿತದ ಪರಿಣಾಮ ಹಲವು ಹೆದ್ದಾರಿಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದ 100ಕ್ಕೂ ಹೆಚ್ಚು ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಡೆಹ್ರಾಡೂನ್ನಲ್ಲಿ ಎರಡನೇ ದಿನವೂ ಭಾರಿ ಮಳೆ ಮುಂದುವರಿದಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ ಎಂದಿದ್ದಾರೆ.</p>.<p><strong>ದೆಹಲಿಯಲ್ಲೂ ಮಳೆ: </strong>ದೆಹಲಿಯಲ್ಲಿ ಗುರುವಾರವೂ ಸಾಧಾರಣ ಮಳೆಯಾಗಿದ್ದು, ನಗರದ ಕೆಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>