ತಮ್ಮ ಅಧಿಕಾರ ಅವಧಿಯಲ್ಲಿ ಕೈಗೊಂಡ ಸುಧಾರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ನಗರಾಭಿವೃದ್ಧಿ ಸಚಿವಾಲಯದ ನೆರವಿನಿಂದ ಕಾರಾಗೃಹದಲ್ಲಿ ಕೌಶಲ ಅಭಿವೃದ್ಧಿ ಕಾರ್ಯಕ್ರಮ ಆರಂಭಿಸಿದ್ದೇವೆ. ಇದರಡಿ 700 ಕೈದಿಗಳು ಹೋಟೆಲ್ ಉದ್ಯಮದಲ್ಲಿ ಉದ್ಯೋಗ ಪಡೆದಿದ್ದಾರೆ. 1,200 ಮಂದಿ ಆಸ್ಪತ್ರೆಗಳಲ್ಲಿ ಉದ್ಯೋಗ ಮಾಡಲು ತರಬೇತಿ ಪಡೆಯುತ್ತಿದ್ದಾರೆ’ ಎಂದರು.