<p><strong>ನವದೆಹಲಿ:</strong> ಸ್ವಾತಂತ್ರ್ಯೋತ್ಸವದ 75ನೇ ವರ್ಷವನ್ನು ಹಳ್ಳಿಗಳ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಆಚರಿಸುವಂತೆ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು ಚರ್ಚೆಗೆ ಸಿದ್ಧವಿದೆ. ಆದರೆ ಪ್ರತಿಪಕ್ಷಗಳು ಅದಕ್ಕೆ ತಯಾರಿಲ್ಲ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡುವಂತೆಯೂ ಪ್ರಧಾನಿಯವರು ಪಕ್ಷದ ಸಂಸದರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p><strong>ಓದಿ:</strong><a href="https://www.prajavani.net/karnataka-news/congress-leaders-praises-bs-yediyurappa-and-attacks-on-modi-amit-shah-851911.html" itemprop="url">ಬಿಎಸ್ವೈ ಹೊಗಳಿಕೆ, ಮೋದಿ–ಶಾ ವಿರುದ್ಧ ಟೀಕೆ: ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆ</a></p>.<p>ಸ್ವಾತಂತ್ರೋತ್ಸವದ 75ನೇ ವರ್ಷಾಚರಣೆ ಕೇವಲ ಸರ್ಕಾರದ ಕಾರ್ಯಕ್ರಮವಾಗಿ ಇರಬಾರದು. ಅದು ಜನರನ್ನೊಳಗೊಂಡ ಕಾರ್ಯಕ್ರಮವಾಗಿರಬೇಕು ಎಂದು ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಹೇಳಿದ್ದಾಗಿ ಮೇಘವಾಲ್ ತಿಳಿಸಿದ್ದಾರೆ.</p>.<p>ಪ್ರತಿ ಕ್ಷೇತ್ರದಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರನ್ನು ಒಳಗೊಂಡಂತೆ ತಂಡವನ್ನು ರಚಿಸಲು ಸಂಸದರಿಗೆ ಪ್ರಧಾನಿ ಸೂಚಿಸಿದ್ದಾರೆ. ಈ ತಂಡವು ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ 2047 ರ ವೇಳೆಗೆ, ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆಗೆ ಭಾರತವು ಹೇಗಿರಬೇಕು ಎಂಬ ಕುರಿತು ಅಭಿಪ್ರಾಯ ಸಂಗ್ರಹಿಸುವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.</p>.<p>ಇಬ್ಬರು ಕಾರ್ಯಕರ್ತರು ತಂಡವು ಹಳ್ಳಿಗಳಿಗೆ ಭೇಟಿ ನೀಡಿ ಗಂಟೆಗಳಷ್ಟು ಕಾಲ ಜನರಿಗೆ ಬೆರೆಯುವಂತೆ ನೋಡಿಕೊಳ್ಳಬೇಕು ಎಂದು ಸಂಸದರಿಗೆ ತಿಳಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/district/chitradurga/independence-day-celebration-in-chitradurga-812709.html" itemprop="url">ಸ್ವಾತಂತ್ರ್ಯದ 75 ವರ್ಷಗಳ ಸ್ಮರಣೆ, ಕೋಟೆ ನಗರಿಯಲ್ಲಿ ಅಮೃತ ಮಹೋತ್ಸವ</a></p>.<p>ಸ್ಥಳೀಯ ಮಟ್ಟದ ಕ್ರೀಡಾಕೂಟಗಳು ಮತ್ತು ಸ್ವಚ್ಛತಾ ಅಭಿಯಾನಗಳ ಮೂಲಕವೂ ಸ್ವಾತಂತ್ರ್ಯೋತ್ಸವದ ವರ್ಷಾಚರಣೆ ಆಯೋಜಿಸುವಂತೆಯೂ ಮೋದಿ ಸಲಹೆ ನೀಡಿದ್ದಾರೆ.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಸಾಕ್ಷರತೆ ಮೂಡಿಸಲು ಒತ್ತು ನೀಡಬೇಕು. ಇದರಿಂದ ಗ್ರಾಮೀಣ ಪ್ರದೇಶದ ಜನರು ಸರ್ಕಾರದ ಸೌಲಭ್ಯಗಳ ಗರಿಷ್ಠ ಪ್ರಯೋಜನ ಪಡೆಯಬಹುದು ಎಂದೂ ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸ್ವಾತಂತ್ರ್ಯೋತ್ಸವದ 75ನೇ ವರ್ಷವನ್ನು ಹಳ್ಳಿಗಳ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಆಚರಿಸುವಂತೆ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು ಚರ್ಚೆಗೆ ಸಿದ್ಧವಿದೆ. ಆದರೆ ಪ್ರತಿಪಕ್ಷಗಳು ಅದಕ್ಕೆ ತಯಾರಿಲ್ಲ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡುವಂತೆಯೂ ಪ್ರಧಾನಿಯವರು ಪಕ್ಷದ ಸಂಸದರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p><strong>ಓದಿ:</strong><a href="https://www.prajavani.net/karnataka-news/congress-leaders-praises-bs-yediyurappa-and-attacks-on-modi-amit-shah-851911.html" itemprop="url">ಬಿಎಸ್ವೈ ಹೊಗಳಿಕೆ, ಮೋದಿ–ಶಾ ವಿರುದ್ಧ ಟೀಕೆ: ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆ</a></p>.<p>ಸ್ವಾತಂತ್ರೋತ್ಸವದ 75ನೇ ವರ್ಷಾಚರಣೆ ಕೇವಲ ಸರ್ಕಾರದ ಕಾರ್ಯಕ್ರಮವಾಗಿ ಇರಬಾರದು. ಅದು ಜನರನ್ನೊಳಗೊಂಡ ಕಾರ್ಯಕ್ರಮವಾಗಿರಬೇಕು ಎಂದು ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಹೇಳಿದ್ದಾಗಿ ಮೇಘವಾಲ್ ತಿಳಿಸಿದ್ದಾರೆ.</p>.<p>ಪ್ರತಿ ಕ್ಷೇತ್ರದಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರನ್ನು ಒಳಗೊಂಡಂತೆ ತಂಡವನ್ನು ರಚಿಸಲು ಸಂಸದರಿಗೆ ಪ್ರಧಾನಿ ಸೂಚಿಸಿದ್ದಾರೆ. ಈ ತಂಡವು ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ 2047 ರ ವೇಳೆಗೆ, ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆಗೆ ಭಾರತವು ಹೇಗಿರಬೇಕು ಎಂಬ ಕುರಿತು ಅಭಿಪ್ರಾಯ ಸಂಗ್ರಹಿಸುವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.</p>.<p>ಇಬ್ಬರು ಕಾರ್ಯಕರ್ತರು ತಂಡವು ಹಳ್ಳಿಗಳಿಗೆ ಭೇಟಿ ನೀಡಿ ಗಂಟೆಗಳಷ್ಟು ಕಾಲ ಜನರಿಗೆ ಬೆರೆಯುವಂತೆ ನೋಡಿಕೊಳ್ಳಬೇಕು ಎಂದು ಸಂಸದರಿಗೆ ತಿಳಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/district/chitradurga/independence-day-celebration-in-chitradurga-812709.html" itemprop="url">ಸ್ವಾತಂತ್ರ್ಯದ 75 ವರ್ಷಗಳ ಸ್ಮರಣೆ, ಕೋಟೆ ನಗರಿಯಲ್ಲಿ ಅಮೃತ ಮಹೋತ್ಸವ</a></p>.<p>ಸ್ಥಳೀಯ ಮಟ್ಟದ ಕ್ರೀಡಾಕೂಟಗಳು ಮತ್ತು ಸ್ವಚ್ಛತಾ ಅಭಿಯಾನಗಳ ಮೂಲಕವೂ ಸ್ವಾತಂತ್ರ್ಯೋತ್ಸವದ ವರ್ಷಾಚರಣೆ ಆಯೋಜಿಸುವಂತೆಯೂ ಮೋದಿ ಸಲಹೆ ನೀಡಿದ್ದಾರೆ.</p>.<p>ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಸಾಕ್ಷರತೆ ಮೂಡಿಸಲು ಒತ್ತು ನೀಡಬೇಕು. ಇದರಿಂದ ಗ್ರಾಮೀಣ ಪ್ರದೇಶದ ಜನರು ಸರ್ಕಾರದ ಸೌಲಭ್ಯಗಳ ಗರಿಷ್ಠ ಪ್ರಯೋಜನ ಪಡೆಯಬಹುದು ಎಂದೂ ಮೋದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>