<p>ಪಿಟಿಐ</p>.<p><strong>ಕಾಂಕೇರ್/ಸುಕ್ಮಾ:</strong> ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಇಬ್ಬರು ಸದಸ್ಯರು ಸೇರಿದಂತೆ ಸುಮಾರು 77 ನಕ್ಸಲರು ಛತ್ತೀಸಗಢದ ಕಾಂಕೇರ್ ಹಾಗೂ ಸುಕ್ಮಾ ಜಿಲ್ಲೆಗಳಲ್ಲಿ ಬುಧವಾರ ಶರಣಾದರು. ಈ ನಕ್ಸಲರ ಪೈಕಿ 42 ಮಹಿಳೆಯರೂ ಇದ್ದಾರೆ.</p>.<p>ಮಂಗಳವಾರವಷ್ಟೇ ನಕ್ಸಲರ ಪ್ರಮುಖ ನಾಯಕ ಮಲ್ಲೋಜುಲಾ ವೇಣುಗೋಪಾಲ್ ರಾವ್ ಅಲಿಯಾಸ್ ಭೂಪತಿ ಅಥವಾ ಸೋನು ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಶರಣಾಗಿದ್ದರು. ಇವರ ಜೊತೆ 60 ನಕ್ಸಲರೂ ಇದ್ದರು. ಇದು ನಕ್ಸಲ್ ಚಳವಳಿಯನ್ನು ಅಂತ್ಯಗೊಳಿಸುವ ಪ್ರಕ್ರಿಯೆಯಲ್ಲಿ ಸಾಧಿಸಿದ ಮೈಲಿಗಲ್ಲು ಎಂದೇ ಕರೆಯಲಾಗುತ್ತಿದೆ.</p>.<p>ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸೇರಿ 27 ನಕ್ಸಲರು ಶರಣಾದರು. ತಮ್ಮ ಶಸ್ತ್ರಾಸ್ತ್ರಗಳನ್ನೂ ಒಪ್ಪಿಸಿದರು. ಇವರ ಪೈಕಿ 16 ನಕ್ಸಲರನ್ನು ಹುಡುಕಿಕೊಟ್ಟವರಿಗೆ ₹50 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಕಾಂಕೇರ್ನಲ್ಲಿ 50 ನಕ್ಸಲರು ಚಳವಳಿಯನ್ನು ತ್ಯಜಿಸಿದ್ದಾರೆ. ಇವರಲ್ಲಿ 32 ಮಹಿಳೆಯರು ಇದ್ದಾರೆ.</p>.<p>ಕಾಂಕೇರ್ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯ ಗಡಿಯಲ್ಲಿಯೇ ಇದೆ. 2026ರ ಮಾರ್ಚ್ 31ರ ಒಳಗೆ ದೇಶವನ್ನು ನಕ್ಸಲ್ ಮುಕ್ತ ಮಾಡುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಪದೇ ಪದೇ ಹೇಳುತ್ತಲೇ ಬರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿಟಿಐ</p>.<p><strong>ಕಾಂಕೇರ್/ಸುಕ್ಮಾ:</strong> ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಇಬ್ಬರು ಸದಸ್ಯರು ಸೇರಿದಂತೆ ಸುಮಾರು 77 ನಕ್ಸಲರು ಛತ್ತೀಸಗಢದ ಕಾಂಕೇರ್ ಹಾಗೂ ಸುಕ್ಮಾ ಜಿಲ್ಲೆಗಳಲ್ಲಿ ಬುಧವಾರ ಶರಣಾದರು. ಈ ನಕ್ಸಲರ ಪೈಕಿ 42 ಮಹಿಳೆಯರೂ ಇದ್ದಾರೆ.</p>.<p>ಮಂಗಳವಾರವಷ್ಟೇ ನಕ್ಸಲರ ಪ್ರಮುಖ ನಾಯಕ ಮಲ್ಲೋಜುಲಾ ವೇಣುಗೋಪಾಲ್ ರಾವ್ ಅಲಿಯಾಸ್ ಭೂಪತಿ ಅಥವಾ ಸೋನು ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಶರಣಾಗಿದ್ದರು. ಇವರ ಜೊತೆ 60 ನಕ್ಸಲರೂ ಇದ್ದರು. ಇದು ನಕ್ಸಲ್ ಚಳವಳಿಯನ್ನು ಅಂತ್ಯಗೊಳಿಸುವ ಪ್ರಕ್ರಿಯೆಯಲ್ಲಿ ಸಾಧಿಸಿದ ಮೈಲಿಗಲ್ಲು ಎಂದೇ ಕರೆಯಲಾಗುತ್ತಿದೆ.</p>.<p>ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸೇರಿ 27 ನಕ್ಸಲರು ಶರಣಾದರು. ತಮ್ಮ ಶಸ್ತ್ರಾಸ್ತ್ರಗಳನ್ನೂ ಒಪ್ಪಿಸಿದರು. ಇವರ ಪೈಕಿ 16 ನಕ್ಸಲರನ್ನು ಹುಡುಕಿಕೊಟ್ಟವರಿಗೆ ₹50 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಕಾಂಕೇರ್ನಲ್ಲಿ 50 ನಕ್ಸಲರು ಚಳವಳಿಯನ್ನು ತ್ಯಜಿಸಿದ್ದಾರೆ. ಇವರಲ್ಲಿ 32 ಮಹಿಳೆಯರು ಇದ್ದಾರೆ.</p>.<p>ಕಾಂಕೇರ್ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯ ಗಡಿಯಲ್ಲಿಯೇ ಇದೆ. 2026ರ ಮಾರ್ಚ್ 31ರ ಒಳಗೆ ದೇಶವನ್ನು ನಕ್ಸಲ್ ಮುಕ್ತ ಮಾಡುವುದಾಗಿ ಗೃಹ ಸಚಿವ ಅಮಿತ್ ಶಾ ಅವರು ಪದೇ ಪದೇ ಹೇಳುತ್ತಲೇ ಬರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>