<p><strong>ಅಮರಾವತಿ, ಮಹಾರಾಷ್ಟ್ರ:</strong> ವಾಮಾಚಾರ ನಡೆಸುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ವೃದ್ಧೆ ಮೇಲೆ ಹಲ್ಲೆ ನಡೆಸಿ, ನಂತರ ಅವರಿಗೆ ಮೂತ್ರ ಕುಡಿಸಿದ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.</p>.<p>ಸಂತ್ರಸ್ತೆಯು ಚಿಕಲಾದಾರ ತಾಲ್ಲೂಕಿನ ರೆತ್ಯಾಖೇಡಾ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಡಿ.30ರಂದೇ ಈ ಘಟನೆ ನಡೆದಿದೆ. ತಿಂಗಳ ಆರಂಭದಲ್ಲಿಯೇ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂತ್ರಸ್ತೆಯ ಮಗ ಹಾಗೂ ಅಳಿಯ ಶುಕ್ರವಾರ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p class="title">‘ಡಿ.30ರಂದು ತಾಯಿ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ವಾಮಾಚಾರ ಮಾಡಿದ್ದಾರೆ ಎಂದು ಆರೋಪಿಸಿ, ನೆರೆಹೊರೆಯವರು ಅವರನ್ನು ಹಿಡಿದು, ಮರದ ಬಡಿಗೆಯಿಂದ ಹೊಡೆದು, ಥಳಿಸಿದ್ದಾರೆ. ನಂತರ ಕಾದ ಕಬ್ಬಿಣದಿಂದ ಕೈ, ಕಾಲುಗಳ ಮೇಲೆ ಬರೆ ಎಳೆದಿದ್ದಾರೆ’ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಬರೆದ ಪತ್ರದಲ್ಲಿ ಅವರ ಪುತ್ರ ತಿಳಿಸಿದ್ದಾರೆ.</p>.<p class="title">‘ನಂತರ ಅವರ ಕತ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ, ಬಲವಂತದಿಂದ ಮೂತ್ರ ಕುಡಿಸಿದ್ದು, ನಾಯಿ ಮಲ ತಿನ್ನುವಂತೆ ಒತ್ತಾಯಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p class="title">ಘಟನೆ ನಡೆದ ವೇಳೆ ವೃದ್ಧೆಯ ಮಗ ಹಾಗೂ ಸೊಸೆ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಜ.5ರಂದು ಈ ವಿಷಯ ಅರಿವಿಗೆ ಬಂದಿದ್ದು, ತಕ್ಷಣವೇ ದೂರು ದಾಖಲಿಸಿದ್ದಾರೆ.</p>.<p class="title">‘ಘಟನೆ ಗಂಭೀರವಾಗಿದ್ದು, ದೂರುದಾರರ ಜೊತೆ ಮಾತನಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಆನಂದ್ ತಿಳಿಸಿದ್ದಾರೆ.</p>.<p class="title">‘ಘಟನೆ ನಡೆದ ಜಾಗವು ಅರಣ್ಯ ಪ್ರದೇಶದ ಒಳಭಾಗದಲ್ಲಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಘಟನೆ ನಡೆದ ಕುರಿತು ಪರಿಶೀಲಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ, ಮಹಾರಾಷ್ಟ್ರ:</strong> ವಾಮಾಚಾರ ನಡೆಸುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ವೃದ್ಧೆ ಮೇಲೆ ಹಲ್ಲೆ ನಡೆಸಿ, ನಂತರ ಅವರಿಗೆ ಮೂತ್ರ ಕುಡಿಸಿದ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.</p>.<p>ಸಂತ್ರಸ್ತೆಯು ಚಿಕಲಾದಾರ ತಾಲ್ಲೂಕಿನ ರೆತ್ಯಾಖೇಡಾ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಡಿ.30ರಂದೇ ಈ ಘಟನೆ ನಡೆದಿದೆ. ತಿಂಗಳ ಆರಂಭದಲ್ಲಿಯೇ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂತ್ರಸ್ತೆಯ ಮಗ ಹಾಗೂ ಅಳಿಯ ಶುಕ್ರವಾರ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p class="title">‘ಡಿ.30ರಂದು ತಾಯಿ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ವಾಮಾಚಾರ ಮಾಡಿದ್ದಾರೆ ಎಂದು ಆರೋಪಿಸಿ, ನೆರೆಹೊರೆಯವರು ಅವರನ್ನು ಹಿಡಿದು, ಮರದ ಬಡಿಗೆಯಿಂದ ಹೊಡೆದು, ಥಳಿಸಿದ್ದಾರೆ. ನಂತರ ಕಾದ ಕಬ್ಬಿಣದಿಂದ ಕೈ, ಕಾಲುಗಳ ಮೇಲೆ ಬರೆ ಎಳೆದಿದ್ದಾರೆ’ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಬರೆದ ಪತ್ರದಲ್ಲಿ ಅವರ ಪುತ್ರ ತಿಳಿಸಿದ್ದಾರೆ.</p>.<p class="title">‘ನಂತರ ಅವರ ಕತ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ, ಬಲವಂತದಿಂದ ಮೂತ್ರ ಕುಡಿಸಿದ್ದು, ನಾಯಿ ಮಲ ತಿನ್ನುವಂತೆ ಒತ್ತಾಯಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p class="title">ಘಟನೆ ನಡೆದ ವೇಳೆ ವೃದ್ಧೆಯ ಮಗ ಹಾಗೂ ಸೊಸೆ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಜ.5ರಂದು ಈ ವಿಷಯ ಅರಿವಿಗೆ ಬಂದಿದ್ದು, ತಕ್ಷಣವೇ ದೂರು ದಾಖಲಿಸಿದ್ದಾರೆ.</p>.<p class="title">‘ಘಟನೆ ಗಂಭೀರವಾಗಿದ್ದು, ದೂರುದಾರರ ಜೊತೆ ಮಾತನಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಆನಂದ್ ತಿಳಿಸಿದ್ದಾರೆ.</p>.<p class="title">‘ಘಟನೆ ನಡೆದ ಜಾಗವು ಅರಣ್ಯ ಪ್ರದೇಶದ ಒಳಭಾಗದಲ್ಲಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಘಟನೆ ನಡೆದ ಕುರಿತು ಪರಿಶೀಲಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>