<p><strong>ಅಮರಾವತಿ</strong>: 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಮಹಿಳೆಯು ಮಾಟಮಂತ್ರ ಮಾಡುತ್ತಾರೆಂದು ಶಂಕಿಸಿ ಈ ಕೃತ್ಯವೆಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಡಿಸೆಂಬರ್ 30ರಂದು ಕೃತ್ಯ ನಡೆದಿದ್ದು, ಸಂತ್ರಸ್ತೆಯ ಮಗ ಮತ್ತು ಸೊಸೆ ಈ ತಿಂಗಳ ಆರಂಭದಲ್ಲೇ ಪೊಲೀಸರಿಗೆ ದೂರು ನೀಡಿದ್ದರು. ಆದಾಗ್ಯೂ, ಶುಕ್ರವಾರ ಮೇಲಾಧಿಕಾರಿಗಳನ್ನು ಭೇಟಿಯಾಗಿ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಸಂತ್ರಸ್ತೆಯು ಚಿಖಲ್ದಾರ ತಾಲ್ಲೂಕಿನ ರೆತ್ಯಖೇಡ ಗ್ರಾಮದವರು.</p><p>ದೂರುದಾರರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ, ಸಂತ್ರಸ್ತೆಯು ಡಿಸೆಂಬರ್ 30ರಂದು ಮನೆಯಲ್ಲಿ ಒಬ್ಬರೇ ಇದ್ದರು. ಆಗ ಮನೆಗೆ ನುಗ್ಗಿದ ನೆರೆಹೊರೆಯವರು ಬಲವಂತವಾಗಿ ಅವರನ್ನು ಹಿಡಿದು, ಮಾಟಮಂತ್ರ ಮಾಡುತ್ತಿರುವೆ ಎಂದು ಆರೋಪಿಸಿ ಥಳಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.</p><p>ಮಹಿಳೆ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಿ, ಕೈ–ಕಾಲುಗಳ ಮೇಲೆ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸಿ, ನಾಯಿಯ ಮಲ ತಿನ್ನಿಸಿ, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ ಎಂದೂ ದೂರಲಾಗಿದೆ.</p><p>ಕೆಲಸದ ನಿಮಿತ್ತ ಬೇರೆ ಕಡೆ ಹೋಗಿದ್ದ ಸಂತ್ರಸ್ತೆಯ ಮಗ ಮತ್ತು ಸೊಸೆ, ವಿಷಯ ತಿಳಿಯುತ್ತಿದ್ದಂತೆ ಜನವರಿ 5ರಂದು ಪೊಲೀಸರಿಗೆ ದೂರು ನೀಡಿದ್ದರು.</p><p>ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಅಮರಾವತಿ ಎಸ್ಪಿ ವಿಶಾಲ್ ಆನಂದ್, ಇದು ಗಂಭೀರವಾದ ವಿಚಾರ. ದೂರುದಾರರು ಶುಕ್ರವಾರ ತಮ್ಮನ್ನು ಭೇಟಿ ಮಾಡಿದ್ದಾರೆ. ಘಟನೆ ನಡೆದಿರುವ ಗ್ರಾಮವು ಕಾಡಂಚಿನಲ್ಲಿದ್ದು, ಪರಿಶೀಲನೆ ಸಲುವಾಗಿ ಪೊಲೀಸ್ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಅದರಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p><p>ದೂರು ದಾಖಲಾಗಿರುವ ಠಾಣೆಯ ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಮಹಿಳೆಯು ಮಾಟಮಂತ್ರ ಮಾಡುತ್ತಾರೆಂದು ಶಂಕಿಸಿ ಈ ಕೃತ್ಯವೆಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಡಿಸೆಂಬರ್ 30ರಂದು ಕೃತ್ಯ ನಡೆದಿದ್ದು, ಸಂತ್ರಸ್ತೆಯ ಮಗ ಮತ್ತು ಸೊಸೆ ಈ ತಿಂಗಳ ಆರಂಭದಲ್ಲೇ ಪೊಲೀಸರಿಗೆ ದೂರು ನೀಡಿದ್ದರು. ಆದಾಗ್ಯೂ, ಶುಕ್ರವಾರ ಮೇಲಾಧಿಕಾರಿಗಳನ್ನು ಭೇಟಿಯಾಗಿ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಸಂತ್ರಸ್ತೆಯು ಚಿಖಲ್ದಾರ ತಾಲ್ಲೂಕಿನ ರೆತ್ಯಖೇಡ ಗ್ರಾಮದವರು.</p><p>ದೂರುದಾರರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ, ಸಂತ್ರಸ್ತೆಯು ಡಿಸೆಂಬರ್ 30ರಂದು ಮನೆಯಲ್ಲಿ ಒಬ್ಬರೇ ಇದ್ದರು. ಆಗ ಮನೆಗೆ ನುಗ್ಗಿದ ನೆರೆಹೊರೆಯವರು ಬಲವಂತವಾಗಿ ಅವರನ್ನು ಹಿಡಿದು, ಮಾಟಮಂತ್ರ ಮಾಡುತ್ತಿರುವೆ ಎಂದು ಆರೋಪಿಸಿ ಥಳಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.</p><p>ಮಹಿಳೆ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಿ, ಕೈ–ಕಾಲುಗಳ ಮೇಲೆ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸಿ, ನಾಯಿಯ ಮಲ ತಿನ್ನಿಸಿ, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ ಎಂದೂ ದೂರಲಾಗಿದೆ.</p><p>ಕೆಲಸದ ನಿಮಿತ್ತ ಬೇರೆ ಕಡೆ ಹೋಗಿದ್ದ ಸಂತ್ರಸ್ತೆಯ ಮಗ ಮತ್ತು ಸೊಸೆ, ವಿಷಯ ತಿಳಿಯುತ್ತಿದ್ದಂತೆ ಜನವರಿ 5ರಂದು ಪೊಲೀಸರಿಗೆ ದೂರು ನೀಡಿದ್ದರು.</p><p>ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಅಮರಾವತಿ ಎಸ್ಪಿ ವಿಶಾಲ್ ಆನಂದ್, ಇದು ಗಂಭೀರವಾದ ವಿಚಾರ. ದೂರುದಾರರು ಶುಕ್ರವಾರ ತಮ್ಮನ್ನು ಭೇಟಿ ಮಾಡಿದ್ದಾರೆ. ಘಟನೆ ನಡೆದಿರುವ ಗ್ರಾಮವು ಕಾಡಂಚಿನಲ್ಲಿದ್ದು, ಪರಿಶೀಲನೆ ಸಲುವಾಗಿ ಪೊಲೀಸ್ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಅದರಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p><p>ದೂರು ದಾಖಲಾಗಿರುವ ಠಾಣೆಯ ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>