<p class="title"><strong>ಝಾನ್ಸಿ, ಉತ್ತರ ಪ್ರದೇಶ: </strong>ಸಹಪಾಠಿಯಾಗಿದ್ದ ಬಾಲಕಿಗೆ ಬೆದರಿಕೆವೊಡ್ಡಿ, ಅತ್ಯಾಚಾರ ಎಸಗಿದ ಆರೋಪದಡಿ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಇವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>‘ಬಂಧಿತರ ಪೈಕಿ ಒಬ್ಬ ಅತ್ಯಾಚಾರ ಎಸಗಿದ್ದಾನೆ. ಇತರರು ಹೊರಗಡೆ ಕಾಯುತ್ತಿದ್ದರು. ಆ ಸಂದರ್ಭದಲ್ಲಿ ಕ್ಯಾಂಪಸ್ನಲ್ಲಿ ಪರೀಕ್ಷೆ ನಡೆಯತ್ತಿದ್ದು, ಉಪನ್ಯಾಸಕರು ಪರೀಕ್ಷೆ ಕಾರ್ಯ ದಲ್ಲಿ ನಿರತರಾಗಿದ್ದರು’ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ.</p>.<p class="title">ಕೃತ್ಯ ನಡೆದ ಹಾಸ್ಟೆಲ್ ಕಾಲೇಜು ಕಟ್ಟಡಕ್ಕಿಂತಲೂ ದೂರ ಇದ್ದ ಕಾರಣ ಈ ಕೃತ್ಯ ಯಾರ ಗಮನಕ್ಕೂ ಬಂದಿಲ್ಲ. ವಿದ್ಯಾರ್ಥಿಗಳು ಬೆದರಿಕೆಯೊಡ್ಡಿ ಬಾಲಕಿಯಿಂದ ₹ 3000 ಸುಲಿಗೆ ಮಾಡಿದ್ದಾರೆ. ಬಂಧಿತರ ವಿರುದ್ಧ ಬಾಲಕಿಯೇ ದೂರು ನೀಡಿದ್ದಾಳೆ ಎಂದು ತಿಳಿಸಿದ್ದಾರೆ.</p>.<p class="title">ಎಲ್ಲ ಎಂಟು ಮಂದಿಯನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. ಇವರ ವಿರುದ್ಧ ಐಪಿಸಿ ಮತ್ತು ಪೋಕ್ಸೊ ಅನ್ವಯ ಮೊಕದ್ದಮೆ ದಾಖಲಿಸಲಾಗುವುದು. ಹಾಸ್ಟೆಲ್ ಮುಚ್ಚಿದ್ದರೂ ವಿದ್ಯಾರ್ಥಿಗಳು ಅಲ್ಲಿಗೆ ತೆರಳಿದ್ದಾದರೂ ಹೇಗೆ ಎಂಬ ಬಗ್ಗೆಯೂ ತನಿಖೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.</p>.<p class="title">ಜಿಲ್ಲಾಧಿಕಾರಿ ಎ.ವಂಶಿ ಅವರು, ಎಲ್ಲ ಆರೋಪಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರ ಹಾಕುವಂತೆಯೂ ಆದೇಶಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಝಾನ್ಸಿ, ಉತ್ತರ ಪ್ರದೇಶ: </strong>ಸಹಪಾಠಿಯಾಗಿದ್ದ ಬಾಲಕಿಗೆ ಬೆದರಿಕೆವೊಡ್ಡಿ, ಅತ್ಯಾಚಾರ ಎಸಗಿದ ಆರೋಪದಡಿ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಇವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>‘ಬಂಧಿತರ ಪೈಕಿ ಒಬ್ಬ ಅತ್ಯಾಚಾರ ಎಸಗಿದ್ದಾನೆ. ಇತರರು ಹೊರಗಡೆ ಕಾಯುತ್ತಿದ್ದರು. ಆ ಸಂದರ್ಭದಲ್ಲಿ ಕ್ಯಾಂಪಸ್ನಲ್ಲಿ ಪರೀಕ್ಷೆ ನಡೆಯತ್ತಿದ್ದು, ಉಪನ್ಯಾಸಕರು ಪರೀಕ್ಷೆ ಕಾರ್ಯ ದಲ್ಲಿ ನಿರತರಾಗಿದ್ದರು’ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ.</p>.<p class="title">ಕೃತ್ಯ ನಡೆದ ಹಾಸ್ಟೆಲ್ ಕಾಲೇಜು ಕಟ್ಟಡಕ್ಕಿಂತಲೂ ದೂರ ಇದ್ದ ಕಾರಣ ಈ ಕೃತ್ಯ ಯಾರ ಗಮನಕ್ಕೂ ಬಂದಿಲ್ಲ. ವಿದ್ಯಾರ್ಥಿಗಳು ಬೆದರಿಕೆಯೊಡ್ಡಿ ಬಾಲಕಿಯಿಂದ ₹ 3000 ಸುಲಿಗೆ ಮಾಡಿದ್ದಾರೆ. ಬಂಧಿತರ ವಿರುದ್ಧ ಬಾಲಕಿಯೇ ದೂರು ನೀಡಿದ್ದಾಳೆ ಎಂದು ತಿಳಿಸಿದ್ದಾರೆ.</p>.<p class="title">ಎಲ್ಲ ಎಂಟು ಮಂದಿಯನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. ಇವರ ವಿರುದ್ಧ ಐಪಿಸಿ ಮತ್ತು ಪೋಕ್ಸೊ ಅನ್ವಯ ಮೊಕದ್ದಮೆ ದಾಖಲಿಸಲಾಗುವುದು. ಹಾಸ್ಟೆಲ್ ಮುಚ್ಚಿದ್ದರೂ ವಿದ್ಯಾರ್ಥಿಗಳು ಅಲ್ಲಿಗೆ ತೆರಳಿದ್ದಾದರೂ ಹೇಗೆ ಎಂಬ ಬಗ್ಗೆಯೂ ತನಿಖೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.</p>.<p class="title">ಜಿಲ್ಲಾಧಿಕಾರಿ ಎ.ವಂಶಿ ಅವರು, ಎಲ್ಲ ಆರೋಪಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರ ಹಾಕುವಂತೆಯೂ ಆದೇಶಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>