<p><strong>ಇಂಫಾಲ</strong>: ಇತ್ತೀಚೆಗೆ ಬಿಹಾರ ಮೂಲದ ಇಬ್ಬರು ವಲಸೆ ಕಾರ್ಮಿಕರ ಹತ್ಯೆಗೆ ಸಂಬಂಧಿಸಿದಂತೆ ನಿಷೇಧಿತ ಉಗ್ರಗಾಮಿ ಸಂಘಟನೆ ಕಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಪೀಪಲ್ಸ್ ವಾರ್ ಗ್ರೂಪ್) ಎಂಟು ಸದಸ್ಯರನ್ನು ಮಣಿಪುರದ ಕಾಕ್ಚಿಂಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಾರ್ಮಿಕರ ಹತ್ಯೆಯಲ್ಲಿ ಭಾಗಿಯಾದವರನ್ನು ಬಂಧಿಸಲು ಡಿಸೆಂಬರ್ 14ರಂದು ಮಣಿಪುರದಾದ್ಯಂತ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಲಾಯಿತು. ಈ ವೇಳೆ ನಿಷೇಧಿತ ಸಂಘಟನೆಯ ಸಕ್ರಿಯ ಸದಸ್ಯನನ್ನು ಕಾಕ್ಚಿಂಗ್ ಲಾಮ್ಖೈ ಪ್ರದೇಶದಿಂದ ಬಂಧಿಸಲಾಯಿತು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.</p><p>ಆರೋಪಿ ನೀಡಿದ ಮಾಹಿತಿ ಮೇರೆಗೆ ಕಾಕ್ಚಿಂಗ್ ಮಮಾಂಗ್ ಚಿಂಗ್ ಲೈಫಾಮ್ ಲೋಕನುಂಗ್ ಪ್ರದೇಶದಲ್ಲಿ ನೆಲೆಗೊಂಡಿರುವ ಶಿಬಿರದ ಮೇಲೆ ಪೊಲೀಸರ ತಂಡ ದಾಳಿ ಮಾಡಿತ್ತು. ಅಲ್ಲಿ ಕೆಸಿಪಿಯ (ಪಿಡಬ್ಲ್ಯುಜಿ) ಇತರ ಏಳು ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಂಧಿತರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಹಾಗೂ 10 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p> .ಮಣಿಪುರ ಬಿಕ್ಕಟ್ಟು–ಶಾಶ್ವತ ಪರಿಹಾರಕ್ಕೆ ಸಮಯ ಬೇಕು: ಬಿರೇನ್ ಸಿಂಗ್.ಮಣಿಪುರ: ಶಸ್ರ್ರಾಸ್ತ್ರ, ಮದ್ದುಗುಂಡು ಜಪ್ತಿ.ಜನಾಂಗೀಯ ಹಿಂಸಾಚಾರ: ವಿವರ ನೀಡುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ</strong>: ಇತ್ತೀಚೆಗೆ ಬಿಹಾರ ಮೂಲದ ಇಬ್ಬರು ವಲಸೆ ಕಾರ್ಮಿಕರ ಹತ್ಯೆಗೆ ಸಂಬಂಧಿಸಿದಂತೆ ನಿಷೇಧಿತ ಉಗ್ರಗಾಮಿ ಸಂಘಟನೆ ಕಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಪೀಪಲ್ಸ್ ವಾರ್ ಗ್ರೂಪ್) ಎಂಟು ಸದಸ್ಯರನ್ನು ಮಣಿಪುರದ ಕಾಕ್ಚಿಂಗ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಕಾರ್ಮಿಕರ ಹತ್ಯೆಯಲ್ಲಿ ಭಾಗಿಯಾದವರನ್ನು ಬಂಧಿಸಲು ಡಿಸೆಂಬರ್ 14ರಂದು ಮಣಿಪುರದಾದ್ಯಂತ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಲಾಯಿತು. ಈ ವೇಳೆ ನಿಷೇಧಿತ ಸಂಘಟನೆಯ ಸಕ್ರಿಯ ಸದಸ್ಯನನ್ನು ಕಾಕ್ಚಿಂಗ್ ಲಾಮ್ಖೈ ಪ್ರದೇಶದಿಂದ ಬಂಧಿಸಲಾಯಿತು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.</p><p>ಆರೋಪಿ ನೀಡಿದ ಮಾಹಿತಿ ಮೇರೆಗೆ ಕಾಕ್ಚಿಂಗ್ ಮಮಾಂಗ್ ಚಿಂಗ್ ಲೈಫಾಮ್ ಲೋಕನುಂಗ್ ಪ್ರದೇಶದಲ್ಲಿ ನೆಲೆಗೊಂಡಿರುವ ಶಿಬಿರದ ಮೇಲೆ ಪೊಲೀಸರ ತಂಡ ದಾಳಿ ಮಾಡಿತ್ತು. ಅಲ್ಲಿ ಕೆಸಿಪಿಯ (ಪಿಡಬ್ಲ್ಯುಜಿ) ಇತರ ಏಳು ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಂಧಿತರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಹಾಗೂ 10 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p> .ಮಣಿಪುರ ಬಿಕ್ಕಟ್ಟು–ಶಾಶ್ವತ ಪರಿಹಾರಕ್ಕೆ ಸಮಯ ಬೇಕು: ಬಿರೇನ್ ಸಿಂಗ್.ಮಣಿಪುರ: ಶಸ್ರ್ರಾಸ್ತ್ರ, ಮದ್ದುಗುಂಡು ಜಪ್ತಿ.ಜನಾಂಗೀಯ ಹಿಂಸಾಚಾರ: ವಿವರ ನೀಡುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>