<p><strong>ನವದೆಹಲಿ:</strong> ಕೋವಿಡ್-19 ಹರಡದಿರಲು ಮಾರ್ಚ್ 24ರಿಂದ ದೇಶದಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದು, ಅಂದಿನಿಂದ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರವು ಸುಮಾರು 8.31 ಕೋಟಿ ಫಲಾನುಭವಿ ರೈತರಿಗೆ ₹16,621 ಕೋಟಿ ವಿತರಿಸಿದೆ.</p>.<p>ಕಳೆದ ವರ್ಷದ ಬಾಕಿ ಉಳಿಸಿದ್ದ 83.77 ಲಕ್ಷ ರೈತರಿಗೆ ಒಟ್ಟು ₹ 1,674.43 ಕೋಟಿ ಹಣವನ್ನು ಪಾವತಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.</p>.<p>ಏಪ್ರಿಲ್ 1 ರಿಂದ ಪ್ರಾರಂಭವಾದ 2020-21ರ ಆರ್ಥಿಕ ವರ್ಷದಲ್ಲಿ ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ಮೊದಲ ಕಂತಿನಲ್ಲಿ ₹ 14,945 ಕೋಟಿಗಳನ್ನು 7.47 ಕೋಟಿ ರೈತರಿಗೆ ಬಿಡುಗಡೆ ಮಾಡಲಾಗಿದೆ.</p>.<p>ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರವು ವರ್ಷಕ್ಕೆ ₹ 6,000 ಗಳಂತೆ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ. ಇದು ಹೆಚ್ಚಿನ ಆದಾಯ ಹೊಂದಿರುವುದಕ್ಕೆ ಸಂಬಂಧಿಸಿದಂತೆ ಕೆಲವು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟಿರುತ್ತದೆ.</p>.<p>ರಾಷ್ಟ್ರವ್ಯಾಪಿ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣದ ಪರಿಹಾರವನ್ನು ಒದಗಿಸಲು ಈ ಯೋಜನೆಯಡಿ 8.69 ಕೋಟಿ ಫಲಾನುಭವಿಗಳಿಗೆ ಮೊದಲ ಕಂತಿನಲ್ಲಿ ₹ 2,000 ಗಳನ್ನು ಏಪ್ರಿಲ್ ಮೊದಲ ವಾರದಲ್ಲಿ ಖಾತೆಗೆ ವರ್ಗಾಯಿಸುವುದಾಗಿ ಮಾರ್ಚ್.27ರಂದು ಸರ್ಕಾರ ಭರವಸೆ ನೀಡಿತ್ತು.</p>.<p>ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂ-ಜಿಕೆವೈ) ಅಡಿಯಲ್ಲಿ ಪಿಡಿಎಸ್ ಫಲಾನುಭವಿಗಳಿಗೆ ಉಚಿತ ವಿತರಣೆಗಾಗಿ 3,985 ಟನ್ ದ್ವಿದಳ ಧಾನ್ಯಗಳನ್ನು ರವಾನಿಸಿದೆ ಎಂದು ಕೇಂದ್ರ ತಿಳಿಸಿದೆ.</p>.<p>ಇದಲ್ಲದೆ ಕೇಂದ್ರ ಕೃಷಿ ಸಚಿವಾಲಯವು ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಅಡಿಯಲ್ಲಿ ಈಶಾನ್ಯ, ಗುಡ್ಡಗಾಡು ಪ್ರದೇಶಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಿಗೆ ಮಾತ್ರ ಎಲ್ಲ ಬೆಳೆಗಳಿಗೆ ಸಬ್ಸಿಡಿಯಲ್ಲಿ 'ಟ್ರೂತ್ಫುಲ್ ಲೇಬಲ್ ಸೀಡ್ಸ್ಗಳನ್ನು' ನೀಡಲು ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್-19 ಹರಡದಿರಲು ಮಾರ್ಚ್ 24ರಿಂದ ದೇಶದಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದು, ಅಂದಿನಿಂದ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರವು ಸುಮಾರು 8.31 ಕೋಟಿ ಫಲಾನುಭವಿ ರೈತರಿಗೆ ₹16,621 ಕೋಟಿ ವಿತರಿಸಿದೆ.</p>.<p>ಕಳೆದ ವರ್ಷದ ಬಾಕಿ ಉಳಿಸಿದ್ದ 83.77 ಲಕ್ಷ ರೈತರಿಗೆ ಒಟ್ಟು ₹ 1,674.43 ಕೋಟಿ ಹಣವನ್ನು ಪಾವತಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.</p>.<p>ಏಪ್ರಿಲ್ 1 ರಿಂದ ಪ್ರಾರಂಭವಾದ 2020-21ರ ಆರ್ಥಿಕ ವರ್ಷದಲ್ಲಿ ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ಮೊದಲ ಕಂತಿನಲ್ಲಿ ₹ 14,945 ಕೋಟಿಗಳನ್ನು 7.47 ಕೋಟಿ ರೈತರಿಗೆ ಬಿಡುಗಡೆ ಮಾಡಲಾಗಿದೆ.</p>.<p>ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರವು ವರ್ಷಕ್ಕೆ ₹ 6,000 ಗಳಂತೆ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ. ಇದು ಹೆಚ್ಚಿನ ಆದಾಯ ಹೊಂದಿರುವುದಕ್ಕೆ ಸಂಬಂಧಿಸಿದಂತೆ ಕೆಲವು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟಿರುತ್ತದೆ.</p>.<p>ರಾಷ್ಟ್ರವ್ಯಾಪಿ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣದ ಪರಿಹಾರವನ್ನು ಒದಗಿಸಲು ಈ ಯೋಜನೆಯಡಿ 8.69 ಕೋಟಿ ಫಲಾನುಭವಿಗಳಿಗೆ ಮೊದಲ ಕಂತಿನಲ್ಲಿ ₹ 2,000 ಗಳನ್ನು ಏಪ್ರಿಲ್ ಮೊದಲ ವಾರದಲ್ಲಿ ಖಾತೆಗೆ ವರ್ಗಾಯಿಸುವುದಾಗಿ ಮಾರ್ಚ್.27ರಂದು ಸರ್ಕಾರ ಭರವಸೆ ನೀಡಿತ್ತು.</p>.<p>ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂ-ಜಿಕೆವೈ) ಅಡಿಯಲ್ಲಿ ಪಿಡಿಎಸ್ ಫಲಾನುಭವಿಗಳಿಗೆ ಉಚಿತ ವಿತರಣೆಗಾಗಿ 3,985 ಟನ್ ದ್ವಿದಳ ಧಾನ್ಯಗಳನ್ನು ರವಾನಿಸಿದೆ ಎಂದು ಕೇಂದ್ರ ತಿಳಿಸಿದೆ.</p>.<p>ಇದಲ್ಲದೆ ಕೇಂದ್ರ ಕೃಷಿ ಸಚಿವಾಲಯವು ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಅಡಿಯಲ್ಲಿ ಈಶಾನ್ಯ, ಗುಡ್ಡಗಾಡು ಪ್ರದೇಶಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಿಗೆ ಮಾತ್ರ ಎಲ್ಲ ಬೆಳೆಗಳಿಗೆ ಸಬ್ಸಿಡಿಯಲ್ಲಿ 'ಟ್ರೂತ್ಫುಲ್ ಲೇಬಲ್ ಸೀಡ್ಸ್ಗಳನ್ನು' ನೀಡಲು ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>