ಜಾರ್ಖಂಡ್ನ ಲೋಹಾರ್ದಾಗಾದಲ್ಲಿ ನಡೆದ ಗಲಭೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು 12 ಜನರು ಗಾಯಗೊಂಡಿದ್ದಾರೆ.ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಗಲಭೆ ಸಂಬಂಧ 77 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.ಭಾನುವಾರ ರಾಮ ನವಮಿ ಉತ್ಸವದ ದಿನ ನಡೆದ ಗಲಾಟೆಯಲ್ಲಿ ಆರು ಪೊಲೀಸರು ಸೇರಿ 24 ಜನರಿಗೆ ಗಾಯಗಳಾಗಿವೆ. ಖಾರ್ಗೋನ್ನ ಪೊಲೀಸ್ ಅಧೀಕ್ಷಕ ಸಿದ್ಧಾರ್ಥ್ ಚೌಧರಿ ಅವರಿಗೆ ಗುಂಡು ತಗುಲಿದೆ.