<p>ರಾಯಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆ ಸೇರಿದಂತೆ 10 ನಕ್ಸಲರು ಹತ್ಯೆಗೀಡಾಗಿದ್ದಾರೆ. </p>.<p>ಜಿಲ್ಲೆಯ ಲೆಂದ್ರಾ ಬಳಿಯ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ, ಸುದೀರ್ಘಾವಧಿ ಗುಂಡಿನ ಚಕಮಕಿ ನಡೆಯಿತು ಎಂದು ಐಜಿಪಿ ಸುಂದರರಾಜ್ ತಿಳಿಸಿದ್ದಾರೆ.</p>.<p>ಗುಂಡಿನ ಚಕಮಕಿಯ ಬಳಿಕ ಮೊದಲಿಗೆ ನಾಲ್ವರು ನಕ್ಸಲರ ಶವಗಳು ಕಂಡುಬಂದವು. ಶೋಧ ಮುಂದುವರಿಸಿದಾಗ ಮತ್ತೆ ಆರು ನಕ್ಸಲರ ಶವಗಳು ಪತ್ತೆಯಾದವು ಎಂದು ಅವರು ತಿಳಿಸಿದ್ದಾರೆ.</p>.<p>ಮಷಿನ್ ಗನ್, ಪಾಯಿಂಟ್ 303 ರೈಫಲ್, 12 ಬೋರ್ ಗನ್, ಗ್ರನೇಡ್ ಲಾಂಚರ್ ಮತ್ತು ಶೆಲ್ಗಳು ಹಾಗೂ ಇತರೆ ಶಸ್ತ್ರಾಸ್ತ್ರಗಳನ್ನು ಚಕಮಕಿ ನಡೆದ ಸ್ಥಳದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಶೋಧ ಕಾರ್ಯ ಮುಂದುವರಿದಿದೆ. ಮೃತ ನಕ್ಸಲರ ಗುರುತು ಪತ್ತೆಯಾಗಿಲ್ಲ. ಇವರು, ಮಾವೋವಾದಿಗಳ ಪೀಪಲ್ಸ್ ಲಿಬರೇಷನ್ ಗೆರಿಲ್ಲಾ ಪಡೆಯ ಸದಸ್ಯರು ಎಂದು ಮೇಲ್ಕೋಟಕ್ಕೆ ಗೊತ್ತಾಗಿದೆ ಎಂದು ತಿಳಿಸಿದ್ದಾರೆ.</p>.<p>ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಅದರ ಕೋಬ್ರಾ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ಐಜಿಪಿ ಮಾಹಿತಿ ನೀಡಿದರು.</p>.<p>ನಕ್ಸಲ್ ಬಾಧಿತ ಪ್ರದೇಶವಾದ ಬಿಜಾಪುರ್ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರಲಿದೆ. ಈ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏ.19ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ನಕ್ಸಲರ ಕಾರ್ಯಾಚರಣೆ ಚುರುಕಾಗಿತ್ತು. ಏಕಕಾಲದಲ್ಲಿ ಹತ್ತು ನಕ್ಸಲರ ಹತ್ಯೆ ಮಾಡಿರುವುದು ಇತ್ತೀಚಿನ ಕಾರ್ಯಾಚರಣೆಯಲ್ಲಿ ಪ್ರಮುಖ ಬೆಳವಣಿಗೆ ಎನಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆ ಸೇರಿದಂತೆ 10 ನಕ್ಸಲರು ಹತ್ಯೆಗೀಡಾಗಿದ್ದಾರೆ. </p>.<p>ಜಿಲ್ಲೆಯ ಲೆಂದ್ರಾ ಬಳಿಯ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ, ಸುದೀರ್ಘಾವಧಿ ಗುಂಡಿನ ಚಕಮಕಿ ನಡೆಯಿತು ಎಂದು ಐಜಿಪಿ ಸುಂದರರಾಜ್ ತಿಳಿಸಿದ್ದಾರೆ.</p>.<p>ಗುಂಡಿನ ಚಕಮಕಿಯ ಬಳಿಕ ಮೊದಲಿಗೆ ನಾಲ್ವರು ನಕ್ಸಲರ ಶವಗಳು ಕಂಡುಬಂದವು. ಶೋಧ ಮುಂದುವರಿಸಿದಾಗ ಮತ್ತೆ ಆರು ನಕ್ಸಲರ ಶವಗಳು ಪತ್ತೆಯಾದವು ಎಂದು ಅವರು ತಿಳಿಸಿದ್ದಾರೆ.</p>.<p>ಮಷಿನ್ ಗನ್, ಪಾಯಿಂಟ್ 303 ರೈಫಲ್, 12 ಬೋರ್ ಗನ್, ಗ್ರನೇಡ್ ಲಾಂಚರ್ ಮತ್ತು ಶೆಲ್ಗಳು ಹಾಗೂ ಇತರೆ ಶಸ್ತ್ರಾಸ್ತ್ರಗಳನ್ನು ಚಕಮಕಿ ನಡೆದ ಸ್ಥಳದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಶೋಧ ಕಾರ್ಯ ಮುಂದುವರಿದಿದೆ. ಮೃತ ನಕ್ಸಲರ ಗುರುತು ಪತ್ತೆಯಾಗಿಲ್ಲ. ಇವರು, ಮಾವೋವಾದಿಗಳ ಪೀಪಲ್ಸ್ ಲಿಬರೇಷನ್ ಗೆರಿಲ್ಲಾ ಪಡೆಯ ಸದಸ್ಯರು ಎಂದು ಮೇಲ್ಕೋಟಕ್ಕೆ ಗೊತ್ತಾಗಿದೆ ಎಂದು ತಿಳಿಸಿದ್ದಾರೆ.</p>.<p>ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಅದರ ಕೋಬ್ರಾ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ಐಜಿಪಿ ಮಾಹಿತಿ ನೀಡಿದರು.</p>.<p>ನಕ್ಸಲ್ ಬಾಧಿತ ಪ್ರದೇಶವಾದ ಬಿಜಾಪುರ್ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರಲಿದೆ. ಈ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏ.19ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ನಕ್ಸಲರ ಕಾರ್ಯಾಚರಣೆ ಚುರುಕಾಗಿತ್ತು. ಏಕಕಾಲದಲ್ಲಿ ಹತ್ತು ನಕ್ಸಲರ ಹತ್ಯೆ ಮಾಡಿರುವುದು ಇತ್ತೀಚಿನ ಕಾರ್ಯಾಚರಣೆಯಲ್ಲಿ ಪ್ರಮುಖ ಬೆಳವಣಿಗೆ ಎನಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>