<p><strong>ನವದೆಹಲಿ:</strong> 2015ರವರೆಗೆ ಸರ್ಕಾರಿ ಯೋಜನೆಗಳು 25 ಕೋಟಿಗಿಂತ ಕಡಿಮೆ ಜನರನ್ನು ತಲುಪುತ್ತಿದ್ದವು. ಆದರೆ ಇಂದು ದೇಶದ ಸುಮಾರು 95 ಕೋಟಿ ಜನ ಒಂದಲ್ಲ ಒಂದು ರೀತಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p>.<p>ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಯ (ಐಎಲ್ಒ) ವರದಿಯನ್ನು ಉಲ್ಲೇಖಿಸಿದ್ದಾರೆ. ಭಾರತದ ಜನಸಂಖ್ಯೆಯ ಶೇ 64ಕ್ಕಿಂತ ಹೆಚ್ಚು ಜನ ಈಗ ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.</p>.<p>ಆರೋಗ್ಯದಿಂದ ಸಾಮಾಜಿಕ ಭದ್ರತೆಯವರೆಗೆ.. ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸುತ್ತಿದೆ. ಇದು ಸಾಮಾಜಿಕ ನ್ಯಾಯದ ಒಂದು ಉತ್ತಮ ಚಿತ್ರಣವೂ ಆಗಿದೆ. ಈ ಯಶಸ್ಸು ಮುಂಬರುವ ದಿನಗಳು ಉತ್ತಮವಾಗಿರುತ್ತವೆ ಎಂಬ ನಂಬಿಕೆಯನ್ನು ಹುಟ್ಟುಹಾಕಿದೆ. ಭಾರತ ಪ್ರತಿ ಹಂತದಲ್ಲೂ ಇನ್ನಷ್ಟು ಬಲಿಷ್ಠವಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಭಾರತವನ್ನು ಟ್ರಾಕೋಮಾ(ಕಣ್ಣಿನ ಕಾಯಿಲೆ) ಮುಕ್ತ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿರುವುದನ್ನು ಮೈಲಿಗಲ್ಲು ಎಂದ ಪ್ರಧಾನಿ ಈ ಯಶಸ್ಸಿಗೆ ಆರೋಗ್ಯ ಕಾರ್ಯಕರ್ತರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಸೋಂಕು ನಿರ್ಮೂಲನೆಗೆ 'ಸ್ವಚ್ಛ ಭಾರತ ಅಭಿಯಾನ' ಮತ್ತು 'ಜಲ ಜೀವನ್ ಮಿಷನ್' ಕೊಡುಗೆ ನೀಡಿವೆ ಎಂದೂ ಹೇಳಿದ್ದಾರೆ.</p>.ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದವರನ್ನು ಸ್ಮರಿಸಲಾಗುವುದು: ಪ್ರಧಾನಿ ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2015ರವರೆಗೆ ಸರ್ಕಾರಿ ಯೋಜನೆಗಳು 25 ಕೋಟಿಗಿಂತ ಕಡಿಮೆ ಜನರನ್ನು ತಲುಪುತ್ತಿದ್ದವು. ಆದರೆ ಇಂದು ದೇಶದ ಸುಮಾರು 95 ಕೋಟಿ ಜನ ಒಂದಲ್ಲ ಒಂದು ರೀತಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.</p>.<p>ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಯ (ಐಎಲ್ಒ) ವರದಿಯನ್ನು ಉಲ್ಲೇಖಿಸಿದ್ದಾರೆ. ಭಾರತದ ಜನಸಂಖ್ಯೆಯ ಶೇ 64ಕ್ಕಿಂತ ಹೆಚ್ಚು ಜನ ಈಗ ಒಂದಲ್ಲ ಒಂದು ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.</p>.<p>ಆರೋಗ್ಯದಿಂದ ಸಾಮಾಜಿಕ ಭದ್ರತೆಯವರೆಗೆ.. ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸುತ್ತಿದೆ. ಇದು ಸಾಮಾಜಿಕ ನ್ಯಾಯದ ಒಂದು ಉತ್ತಮ ಚಿತ್ರಣವೂ ಆಗಿದೆ. ಈ ಯಶಸ್ಸು ಮುಂಬರುವ ದಿನಗಳು ಉತ್ತಮವಾಗಿರುತ್ತವೆ ಎಂಬ ನಂಬಿಕೆಯನ್ನು ಹುಟ್ಟುಹಾಕಿದೆ. ಭಾರತ ಪ್ರತಿ ಹಂತದಲ್ಲೂ ಇನ್ನಷ್ಟು ಬಲಿಷ್ಠವಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಭಾರತವನ್ನು ಟ್ರಾಕೋಮಾ(ಕಣ್ಣಿನ ಕಾಯಿಲೆ) ಮುಕ್ತ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿರುವುದನ್ನು ಮೈಲಿಗಲ್ಲು ಎಂದ ಪ್ರಧಾನಿ ಈ ಯಶಸ್ಸಿಗೆ ಆರೋಗ್ಯ ಕಾರ್ಯಕರ್ತರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಸೋಂಕು ನಿರ್ಮೂಲನೆಗೆ 'ಸ್ವಚ್ಛ ಭಾರತ ಅಭಿಯಾನ' ಮತ್ತು 'ಜಲ ಜೀವನ್ ಮಿಷನ್' ಕೊಡುಗೆ ನೀಡಿವೆ ಎಂದೂ ಹೇಳಿದ್ದಾರೆ.</p>.ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದವರನ್ನು ಸ್ಮರಿಸಲಾಗುವುದು: ಪ್ರಧಾನಿ ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>