‘2019, ಆಗಸ್ಟ್ 5ರಂದು 370 ನೇ ವಿಧಿ ರದ್ದುಗೊಳಿಸಿದ ಬಳಿಕ ಯಾವುದೇ ಕಾಶ್ಮೀರಿ ಪಂಡಿತರು ಅಥವಾ ಹಿಂದೂಗಳನ್ನು ಸ್ಥಳಾಂತರಿಸಲಾಗಿಲ್ಲ. ಆದರೆ ಇತ್ತೀಚೆಗೆ, ಕಾಶ್ಮೀರದಲ್ಲಿ ವಾಸವಾಗಿದ್ದ ಕೆಲವು ಕಾಶ್ಮೀರಿ ಪಂಡಿತರ ಕುಟುಂಬಗಳು, ಮಹಿಳೆಯರು, ಮಕ್ಕಳು ಜಮ್ಮುವಿಗೆ ಸ್ಥಳಾಂತರಗೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಚಳಿಗಾಲದ ರಜೆ ಇರುವುದರಿಂದ ಜಮ್ಮುವಿಗೆ ತೆರಳಿದ್ದಾರೆ’ ಎಂದು ನಿತ್ಯಾನಂದ ರೈ ಅವರು ರಾಜ್ಯಸಭೆಗೆ ಲಿಖಿತ ರೂಪದಲ್ಲಿ ಉತ್ತರಿಸಿದರು.