<p><strong>ಬಾಲೇಶ್ವರ(ಒಡಿಶಾ):</strong> ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ಕೊಲೆಯಾದ ಮಹಿಳೆಯ ಮೃತದೇಹವನ್ನು ಸೈಕಲ್ನಲ್ಲಿ ತಂದು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ ಘಟನೆ ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ನಡೆದಿದೆ.</p><p>ಮೃತರನ್ನು ಹರಿಪುರ ಗ್ರಾಮದ ಕಮಲಾ ಸೇಥಿ ಎಂದು ಗುರುತಿಸಲಾಗಿದೆ. ಭಾನುವಾರ ನಡೆದ ಗಲಾಟೆಯಲ್ಲಿ ಕಮಲಾ ಕೊಲೆಯಾಗಿದ್ದರು. ಘಟನೆಯಲ್ಲಿ ಅವರ ಅತ್ತಿಗೆ ಶಕುಂತಲಾ ಸೇಥಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರಕರಣವು ಗಂಭೀರವಾಗಿದ್ದರೂ ಸಹ, ಆರೋಪಿಗಳ ವಿರುದ್ಧ ಪೊಲೀಸರು ಶೀಘ್ರ ಕ್ರಮ ಕೈಗೊಂಡಿಲ್ಲ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.</p><p>‘ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಪ್ರತಿಭಟನೆಯ ಸಂಕೇತವಾಗಿ ಮೃತದೇಹವನ್ನು ಸೈಕಲ್ ಮೇಲೆ 15 ಕಿಲೋಮೀಟರ್ ದೂರದಲ್ಲಿರುವ ಪೊಲೀಸ್ ಠಾಣೆಗೆ ತರಲು ನಿರ್ಧರಿಸಿದೆವು’ ಎಂದು ಕುಟುಂಬದ ಸದಸ್ಯ ಹೇಮಂತ್ ಸೇಥಿ ಹೇಳಿದ್ದಾರೆ.</p><p>ಸೈಕಲ್ ಮೇಲೆ ಮೃತದೇಹವನ್ನು ಹೊತ್ತುಕೊಂಡು ಬರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಲೇಶ್ವರ(ಒಡಿಶಾ):</strong> ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ಕೊಲೆಯಾದ ಮಹಿಳೆಯ ಮೃತದೇಹವನ್ನು ಸೈಕಲ್ನಲ್ಲಿ ತಂದು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ ಘಟನೆ ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ನಡೆದಿದೆ.</p><p>ಮೃತರನ್ನು ಹರಿಪುರ ಗ್ರಾಮದ ಕಮಲಾ ಸೇಥಿ ಎಂದು ಗುರುತಿಸಲಾಗಿದೆ. ಭಾನುವಾರ ನಡೆದ ಗಲಾಟೆಯಲ್ಲಿ ಕಮಲಾ ಕೊಲೆಯಾಗಿದ್ದರು. ಘಟನೆಯಲ್ಲಿ ಅವರ ಅತ್ತಿಗೆ ಶಕುಂತಲಾ ಸೇಥಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರಕರಣವು ಗಂಭೀರವಾಗಿದ್ದರೂ ಸಹ, ಆರೋಪಿಗಳ ವಿರುದ್ಧ ಪೊಲೀಸರು ಶೀಘ್ರ ಕ್ರಮ ಕೈಗೊಂಡಿಲ್ಲ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.</p><p>‘ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಪ್ರತಿಭಟನೆಯ ಸಂಕೇತವಾಗಿ ಮೃತದೇಹವನ್ನು ಸೈಕಲ್ ಮೇಲೆ 15 ಕಿಲೋಮೀಟರ್ ದೂರದಲ್ಲಿರುವ ಪೊಲೀಸ್ ಠಾಣೆಗೆ ತರಲು ನಿರ್ಧರಿಸಿದೆವು’ ಎಂದು ಕುಟುಂಬದ ಸದಸ್ಯ ಹೇಮಂತ್ ಸೇಥಿ ಹೇಳಿದ್ದಾರೆ.</p><p>ಸೈಕಲ್ ಮೇಲೆ ಮೃತದೇಹವನ್ನು ಹೊತ್ತುಕೊಂಡು ಬರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>