<p><strong>ನವದೆಹಲಿ/ರಾಯಗಢ</strong>: ‘ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಬಲಿಷ್ಠವಾಗಿಯೇ ಇದೆ. ಕೆಲ ಅಂಗಪಕ್ಷಗಳು ದೂರ ಹೋಗಿರುವುದು ಮೈತ್ರಿಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಹೇಳಿದ್ದಾರೆ.</p>.<p>‘ವಿಪಕ್ಷಗಳ ಸಾಮೂಹಿಕ ಶಕ್ತಿಯು ಬಿಜೆಪಿಯ ಚಿಂತೆ ಹೆಚ್ಚಿಸಿದೆ. ಈ ಕಾರಣಕ್ಕಾಗಿಯೇ ಅದು ‘ಇಂಡಿಯಾ’ದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತೆ ಎನ್ಡಿಎ ತೆಕ್ಕೆಗೆ ಹೋಗಿರುವುದು ‘ಇಂಡಿಯಾ’ದ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಉದ್ಭವಿಸುವಂತೆ ಮಾಡಿದೆಯೇ ಎಂಬುದಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ‘ಇಂಡಿಯಾ‘ದೊಂದಿಗೇ ಇದ್ದಾರೆ. ಸ್ಥಾನಗಳ ಹಂಚಿಕೆ ವಿಚಾರವಾಗಿ ಅವರೊಂದಿಗಿನ ಮಾತುಕತೆ ಫಲಪ್ರದವಾಗಲಿದೆ ಎಂಬ ವಿಶ್ವಾಸ ಇದೆ’ ಎಂದೂ ಹೇಳಿದ್ದಾರೆ.</p>.<p>‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ 370 ಸ್ಥಾನ ಗೆಲ್ಲಲಿದೆ ಹಾಗೂ ಎನ್ಡಿಎ 400ರ ಗಡಿ ದಾಟಲಿದೆ ಎಂಬುದಾಗಿ ಬಿಜೆಪಿ ಹೇಳುತ್ತಿದೆ. ಇದು ವಾಸ್ತವವನ್ನು ಅರಿಯದೇ ಆಡುವ ಮಾತು’ ಎಂದಿದ್ದಾರೆ.</p>.<p>‘ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ ಜೋಡೊ ನ್ಯಾಯ ಯಾತ್ರೆಯು, ಸ್ಥಾನಗಳ ಹಂಚಿಕೆ ಕುರಿತಾಗಿ ಮಿತ್ರ ಪಕ್ಷಗಳೊಂದಿಗೆ ನಡೆಸಬೇಕಾದ ಮಾತುಕತೆ ಮೇಲೆ ಪರಿಣಾಮ ಬೀರಿದೆ ಎಂಬ ಮಾತಿನಲ್ಲಿ ಹುರುಳಿಲ್ಲ. ಯಾತ್ರೆ ಜೊತೆಜೊತೆಗೆ, ಮಿತ್ರ ಪಕ್ಷಗಳೊಂದಿಗೆ ಈ ವಿಷಯವಾಗಿ ಮಾತುಕತೆಯೂ ನಡೆಯುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ರಾಯಗಢ</strong>: ‘ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಬಲಿಷ್ಠವಾಗಿಯೇ ಇದೆ. ಕೆಲ ಅಂಗಪಕ್ಷಗಳು ದೂರ ಹೋಗಿರುವುದು ಮೈತ್ರಿಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಹೇಳಿದ್ದಾರೆ.</p>.<p>‘ವಿಪಕ್ಷಗಳ ಸಾಮೂಹಿಕ ಶಕ್ತಿಯು ಬಿಜೆಪಿಯ ಚಿಂತೆ ಹೆಚ್ಚಿಸಿದೆ. ಈ ಕಾರಣಕ್ಕಾಗಿಯೇ ಅದು ‘ಇಂಡಿಯಾ’ದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತೆ ಎನ್ಡಿಎ ತೆಕ್ಕೆಗೆ ಹೋಗಿರುವುದು ‘ಇಂಡಿಯಾ’ದ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಉದ್ಭವಿಸುವಂತೆ ಮಾಡಿದೆಯೇ ಎಂಬುದಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ‘ಇಂಡಿಯಾ‘ದೊಂದಿಗೇ ಇದ್ದಾರೆ. ಸ್ಥಾನಗಳ ಹಂಚಿಕೆ ವಿಚಾರವಾಗಿ ಅವರೊಂದಿಗಿನ ಮಾತುಕತೆ ಫಲಪ್ರದವಾಗಲಿದೆ ಎಂಬ ವಿಶ್ವಾಸ ಇದೆ’ ಎಂದೂ ಹೇಳಿದ್ದಾರೆ.</p>.<p>‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ 370 ಸ್ಥಾನ ಗೆಲ್ಲಲಿದೆ ಹಾಗೂ ಎನ್ಡಿಎ 400ರ ಗಡಿ ದಾಟಲಿದೆ ಎಂಬುದಾಗಿ ಬಿಜೆಪಿ ಹೇಳುತ್ತಿದೆ. ಇದು ವಾಸ್ತವವನ್ನು ಅರಿಯದೇ ಆಡುವ ಮಾತು’ ಎಂದಿದ್ದಾರೆ.</p>.<p>‘ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ ಜೋಡೊ ನ್ಯಾಯ ಯಾತ್ರೆಯು, ಸ್ಥಾನಗಳ ಹಂಚಿಕೆ ಕುರಿತಾಗಿ ಮಿತ್ರ ಪಕ್ಷಗಳೊಂದಿಗೆ ನಡೆಸಬೇಕಾದ ಮಾತುಕತೆ ಮೇಲೆ ಪರಿಣಾಮ ಬೀರಿದೆ ಎಂಬ ಮಾತಿನಲ್ಲಿ ಹುರುಳಿಲ್ಲ. ಯಾತ್ರೆ ಜೊತೆಜೊತೆಗೆ, ಮಿತ್ರ ಪಕ್ಷಗಳೊಂದಿಗೆ ಈ ವಿಷಯವಾಗಿ ಮಾತುಕತೆಯೂ ನಡೆಯುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>