ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ದಾಟುತ್ತಿದ್ದ ಆನೆಗಳ ಹಿಂಡಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ: ಮೂರು ಆನೆ ಸಾವು

Published 15 ಜೂನ್ 2023, 4:49 IST
Last Updated 15 ಜೂನ್ 2023, 4:49 IST
ಅಕ್ಷರ ಗಾತ್ರ

ಪಲಮನೇರ್( ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ವೇಗವಾಗಿ ಬಂದ ಲಾರಿಯೊಂದು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ ಎಂದು ಅರಣ್ಯಾಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಚಿತ್ತೂರು ಜಿಲ್ಲೆಯ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿಯ ಜಗಮರ್ಲಾ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ಹೆದ್ದಾರಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಲಾರಿ ಚಾಲಕ ಕುಡಿದ ಅಮಲಿನಲ್ಲಿ ಡಿಕ್ಕಿ ಹೊಡೆದಿದ್ದಾನೆ. ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅರಣ್ಯಾಧಿಕಾರಿ ಚೈತನ್ಯ ಕುಮಾರ್ ರೆಡ್ಡಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮೃತ ಆನೆಗಳಲ್ಲಿ ಒಂದು ಹೆಣ್ಣು ಹಾಗೂ ಎರಡು ಗಂಡು ಆನೆಗಳು ಸೇರಿವೆ.

ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ರೆಡ್ಡಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT