<p><strong>ನವದೆಹಲಿ:</strong> ಶ್ರೀಮಂತ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ₹1 ಕೋಟಿ ಕಳ್ಳತನ ಮಾಡಿದ ಘಟನೆಯು ರಾಷ್ಟ್ರರಾಜಧಾನಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಜರುಗಿದೆ. </p><p>ಸಂಜಯ್ ಅಗರ್ವಾಲ್ ಎಂಬ ಉದ್ಯಮಿಯ ಮನೆಯಲ್ಲಿ ಕೆಲಸಕ್ಕಿದ್ದ, ಬಿಹಾರ ಮೂಲದ ಅನಿಲ್ ಕುಮಾರ್ ಅಲಿಯಾಸ್ ಕರಣ್(21) ಹಾಗೂ ದೀಪಕ್ ಕುಮಾರ್(26) ಎಂಬುವವರು ಹಣದ ಆಸೆಗಾಗಿ ಕಳ್ಳತನ ಮಾಡಿ, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. </p><p>ಶಾಲಿಮಾರ್ ಬಾಗ್ ಪ್ರದೇಶದಲ್ಲಿರುವ ತನ್ನ ಮನೆಯಲ್ಲಿ ಹೊಸದಾಗಿ ಮನೆಗೆಲಸಕ್ಕೆ ಸೇರಿದ್ದ ಅನಿಲ್ ಕಾಣೆಯಾಗಿದ್ದು, ₹1.25 ಕೋಟಿ ಹಣ ಕೂಡ ನಾಪತ್ತೆಯಾಗಿದೆ ಎಂದು ಮೇ.6ರಂದು ಸಂಜಯ್ ಅಗರ್ವಾಲ್ ಅವರು ದೂರು ದಾಖಲಿಸಿದ್ದರು. </p><p>ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರಿಗೆ, ಗಾಜಿಯಾಬಾದ್ ಬಳಿ ದಾಳಿಯಲ್ಲಿ ಆರೋಪಿ ಅನಿಲ್ ಸೆರೆಸಿಕ್ಕಿದ್ದಾನೆ.</p><p>ವಿಚಾರಣೆಯ ವೇಳೆ ಕಳ್ಳತನ ಮಾಡಿರುವುದಾಗಿ ಆರೋಪಿ ಅನಿಲ್ ತಪ್ಪೊಪ್ಪಿಕೊಂಡಿದ್ದು, ಈ ವೇಳೆ ಇನ್ನೊಬ್ಬ ಆರೋಪಿ ದೀಪಕ್ ಕುಮಾರ್ ಕೂಡ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಷ್ಮ ಸಿಂಗ್ ಮಾಹಿತಿ ನೀಡಿದ್ದಾರೆ. </p><p>ಪ್ರಕರಣದ ಇನ್ನೊಬ್ಬ ಆರೋಪಿ ದೀಪಕ್ ಕುಮಾರ್ನನ್ನು ಕೂಡ ಗಾಜಿಯಾಬಾದ್ ಬಳಿಯ ವಸತಿ ಪ್ರದೇಶದಲ್ಲಿ ಬಂಧಿಸಲಾಗಿದೆ. </p><p>ಆರೋಪಿಗಳಿಂದ ₹1.06 ಕೋಟಿ ನಗದು, ಮೂರು ಬ್ಯಾಗ್ಗಳನ್ನು ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶ್ರೀಮಂತ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ₹1 ಕೋಟಿ ಕಳ್ಳತನ ಮಾಡಿದ ಘಟನೆಯು ರಾಷ್ಟ್ರರಾಜಧಾನಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಜರುಗಿದೆ. </p><p>ಸಂಜಯ್ ಅಗರ್ವಾಲ್ ಎಂಬ ಉದ್ಯಮಿಯ ಮನೆಯಲ್ಲಿ ಕೆಲಸಕ್ಕಿದ್ದ, ಬಿಹಾರ ಮೂಲದ ಅನಿಲ್ ಕುಮಾರ್ ಅಲಿಯಾಸ್ ಕರಣ್(21) ಹಾಗೂ ದೀಪಕ್ ಕುಮಾರ್(26) ಎಂಬುವವರು ಹಣದ ಆಸೆಗಾಗಿ ಕಳ್ಳತನ ಮಾಡಿ, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. </p><p>ಶಾಲಿಮಾರ್ ಬಾಗ್ ಪ್ರದೇಶದಲ್ಲಿರುವ ತನ್ನ ಮನೆಯಲ್ಲಿ ಹೊಸದಾಗಿ ಮನೆಗೆಲಸಕ್ಕೆ ಸೇರಿದ್ದ ಅನಿಲ್ ಕಾಣೆಯಾಗಿದ್ದು, ₹1.25 ಕೋಟಿ ಹಣ ಕೂಡ ನಾಪತ್ತೆಯಾಗಿದೆ ಎಂದು ಮೇ.6ರಂದು ಸಂಜಯ್ ಅಗರ್ವಾಲ್ ಅವರು ದೂರು ದಾಖಲಿಸಿದ್ದರು. </p><p>ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರಿಗೆ, ಗಾಜಿಯಾಬಾದ್ ಬಳಿ ದಾಳಿಯಲ್ಲಿ ಆರೋಪಿ ಅನಿಲ್ ಸೆರೆಸಿಕ್ಕಿದ್ದಾನೆ.</p><p>ವಿಚಾರಣೆಯ ವೇಳೆ ಕಳ್ಳತನ ಮಾಡಿರುವುದಾಗಿ ಆರೋಪಿ ಅನಿಲ್ ತಪ್ಪೊಪ್ಪಿಕೊಂಡಿದ್ದು, ಈ ವೇಳೆ ಇನ್ನೊಬ್ಬ ಆರೋಪಿ ದೀಪಕ್ ಕುಮಾರ್ ಕೂಡ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಷ್ಮ ಸಿಂಗ್ ಮಾಹಿತಿ ನೀಡಿದ್ದಾರೆ. </p><p>ಪ್ರಕರಣದ ಇನ್ನೊಬ್ಬ ಆರೋಪಿ ದೀಪಕ್ ಕುಮಾರ್ನನ್ನು ಕೂಡ ಗಾಜಿಯಾಬಾದ್ ಬಳಿಯ ವಸತಿ ಪ್ರದೇಶದಲ್ಲಿ ಬಂಧಿಸಲಾಗಿದೆ. </p><p>ಆರೋಪಿಗಳಿಂದ ₹1.06 ಕೋಟಿ ನಗದು, ಮೂರು ಬ್ಯಾಗ್ಗಳನ್ನು ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>