<p><strong>ನವದೆಹಲಿ</strong>: ‘ಆಧಾರ್ ಗುರುತಿನ ಚೀಟಿ ಹೊಂದಿಲ್ಲದವರನ್ನು ಮತದಾನ ಮಾಡದಂತೆ ತಡೆಯುವುದಿಲ್ಲ’ ಎಂದು ಚುನಾವಣಾ ಆಯೋಗವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೋಮವಾರ ಭರವಸೆ ನೀಡಿದೆ. </p><p>ಪಶ್ಚಿಮ ಬಂಗಾಳದಲ್ಲಿ ಹಲವು ಆಧಾರ್ ಗುರುತಿನ ಪತ್ರಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ಕುರಿತು ಕಳವಳಗೊಂಡಿದ್ದ ಟಿಎಂಸಿ, ತನ್ನ ರಾಜ್ಯಸಭಾ ಸದಸ್ಯರಾದ ಸುಖೇಂದು ಶೇಖರ್ ರೇ, ಡೋಲಾ ಸೇನ್, ಸಾಕೆತ್ ಗೋಖಲೆ ಮತ್ತು ಲೋಕಸಭಾ ಸಂಸದರಾದ ಪ್ರತಿಮಾ ಮಂಡೊಲ್ ಹಾಗೂ ಸಾಜ್ದಾ ಅಹಮದ್ ಅವರನ್ನು ಒಳಗೊಂಡಿದ್ದ ನಿಯೋಗವನ್ನು ಮುಖ್ಯ ಚುನಾವಣಾ ಆಯುಕ್ತ ಬಳಿ ಕಳಿಸಿತ್ತು. </p><p>‘ಮತದಾರರು ತಮ್ಮ ಮತದಾರರ ಗುರುತಿನ ಚೀಟಿ ಅಥವಾ ಇತರ ಯಾವುದೇ ನಿರ್ದಿಷ್ಟ ಗುರುತಿನ ದಾಖಲೆಗಳನ್ನು ತೋರಿಸಿ ಮತ ಚಲಾಯಿಸಬಹುದು’ ಎಂದು ಆಯೋಗ ನಿಯೋಗಕ್ಕೆ ತಿಳಿಸಿದೆ.</p><p>ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸುಖೇಂದು ಶೇಖರ್ ಅವರು, ‘ಆಧಾರ್ ಗುರುತಿನ ಪತ್ರಗಳು ಇಲ್ಲದಿದ್ದರೂ ಮತದಾನ ಮಾಡಲು ಮತದಾರರಿಗೆ ಅನುವು ಮಾಡಲಾಗುವುದು ಎಂದು ಚುನಾವಣಾ ಆಯೋಗ ಭರವಸೆ ನೀಡಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಆಧಾರ್ ಗುರುತಿನ ಚೀಟಿ ಹೊಂದಿಲ್ಲದವರನ್ನು ಮತದಾನ ಮಾಡದಂತೆ ತಡೆಯುವುದಿಲ್ಲ’ ಎಂದು ಚುನಾವಣಾ ಆಯೋಗವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೋಮವಾರ ಭರವಸೆ ನೀಡಿದೆ. </p><p>ಪಶ್ಚಿಮ ಬಂಗಾಳದಲ್ಲಿ ಹಲವು ಆಧಾರ್ ಗುರುತಿನ ಪತ್ರಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ಕುರಿತು ಕಳವಳಗೊಂಡಿದ್ದ ಟಿಎಂಸಿ, ತನ್ನ ರಾಜ್ಯಸಭಾ ಸದಸ್ಯರಾದ ಸುಖೇಂದು ಶೇಖರ್ ರೇ, ಡೋಲಾ ಸೇನ್, ಸಾಕೆತ್ ಗೋಖಲೆ ಮತ್ತು ಲೋಕಸಭಾ ಸಂಸದರಾದ ಪ್ರತಿಮಾ ಮಂಡೊಲ್ ಹಾಗೂ ಸಾಜ್ದಾ ಅಹಮದ್ ಅವರನ್ನು ಒಳಗೊಂಡಿದ್ದ ನಿಯೋಗವನ್ನು ಮುಖ್ಯ ಚುನಾವಣಾ ಆಯುಕ್ತ ಬಳಿ ಕಳಿಸಿತ್ತು. </p><p>‘ಮತದಾರರು ತಮ್ಮ ಮತದಾರರ ಗುರುತಿನ ಚೀಟಿ ಅಥವಾ ಇತರ ಯಾವುದೇ ನಿರ್ದಿಷ್ಟ ಗುರುತಿನ ದಾಖಲೆಗಳನ್ನು ತೋರಿಸಿ ಮತ ಚಲಾಯಿಸಬಹುದು’ ಎಂದು ಆಯೋಗ ನಿಯೋಗಕ್ಕೆ ತಿಳಿಸಿದೆ.</p><p>ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸುಖೇಂದು ಶೇಖರ್ ಅವರು, ‘ಆಧಾರ್ ಗುರುತಿನ ಪತ್ರಗಳು ಇಲ್ಲದಿದ್ದರೂ ಮತದಾನ ಮಾಡಲು ಮತದಾರರಿಗೆ ಅನುವು ಮಾಡಲಾಗುವುದು ಎಂದು ಚುನಾವಣಾ ಆಯೋಗ ಭರವಸೆ ನೀಡಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>