<p><strong>ಲಖನೌ:</strong> ನ್ಯಾಯಯುತ ಚುನಾವಣೆಗಳನ್ನು ನಡೆಸಲು ಮತ್ತು ನಕಲಿ ಆಧಾರ್ ಕಾರ್ಡ್ಗಳನ್ನು ಸೃಷ್ಟಿಸಿ ನಕಲಿ ಮತಗಳನ್ನು ಚಲಾಯಿಸುವುದನ್ನು ತಡೆಯಲು ಆಧಾರ್ ಕಾರ್ಡ್ಗಳಿಗೆ ಚಿಪ್ ಅಳವಡಿಸುವುದು ಸೂಕ್ತ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.</p><p>ಔರೈಯಾ ಜಿಲ್ಲೆಯ ಪ್ರಮುಖ ಪಕ್ಷದ ನಾಯಕರೊಂದಿಗೆ ಚುನಾವಣಾ ಸಿದ್ಧತೆಗಳ ಕುರಿತು ಅಖಿಲೇಶ್ ಯಾದವ್ ಅವರು ಚರ್ಚೆ ನಡೆಸಿದ್ದಾರೆ. </p><p>ಇದೇ ವೇಳೆ ಮಾತನಾಡಿದ ಅವರು, ‘ದೇಶದಾದ್ಯಂತ ಜಾತಿ ಜನಗಣತಿಯನ್ನು ಪ್ರಾರಂಭಿಸಿದರೆ, ಮೀಸಲಾತಿಯನ್ನು ಸರಿಯಾಗಿ ಜಾರಿಗೆ ತರಲಾಗುತ್ತದೆ ಮತ್ತು ‘ಪಿಡಿಎ’ ಅಂದರೆ, ಪಿಚ್ಡೆ (ಹಿಂದುಳಿದ) ಸಮುದಾಯದ ಜನರ ಸಮಸ್ಯೆಗಳನ್ನು ಪರಿಹರಿಸಿದಂತಾಗುತ್ತದೆ’ ಎಂದು ಯಾದವ್ ಹೇಳಿದ್ದಾರೆ.</p><p>2024ರ ಲೋಕಸಭೆ ಚುನಾವಣೆಯಲ್ಲಿ ಪಿಡಿಎ ಸಮುದಾಯದ ಸದಸ್ಯರ ಕಠಿಣ ಪರಿಶ್ರಮದಿಂದ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನೆರವಾಯಿತು. ನಮ್ಮ ಪಕ್ಷವು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತರ ಪರವಾಗಿದೆ ಎಂದು ಯಾದವ್ ಪುನರುಚ್ಚರಿಸಿದ್ದಾರೆ.</p><p>‘ಬಿಜೆಪಿ ಸರ್ಕಾರ ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕುವ ಮೂಲಕ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವವನ್ನು ದುರ್ಬಲಗೊಳಿಸುತ್ತಿದೆ. ಜತೆಗೆ, ಚುನಾವಣಾ ಆಯೋಗ ಸೇರಿದಂತೆ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ನಾಶಮಾಡಲು ವ್ಯವಸ್ಥಿತ ಪಿತೂರಿಗಳನ್ನು ನಡೆಸಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ. </p><p>‘ನಮ್ಮ ಪಕ್ಷದ ಕಾರ್ಯಕರ್ತರು ಮತದಾರರ ಪಟ್ಟಿಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ತಮ್ಮ ಬೆಂಬಲಿಗರ ಮತಗಳನ್ನು ಕ್ರೋಢೀಕರಣ ಮಾಡಬೇಕು. ಜತೆಗೆ, ಬೂತ್ ಮಟ್ಟದಿಂದಲೇ ಸಂಘಟನೆಯನ್ನು ಬಲಪಡಿಸುವುದರ ಜತೆಗೆ ಬಿಜೆಪಿಗರ ಸುಳ್ಳುಗಳನ್ನು ಬಹಿರಂಗಪಡಿಸುವ ಕೆಲಸ ಮಾಡಬೇಕು’ ಎಂದು ಯಾದವ್ ಕರೆ ಕೊಟ್ಟಿದ್ದಾರೆ. </p><p>2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ನ್ಯಾಯಯುತ ಚುನಾವಣೆಗಳನ್ನು ನಡೆಸಲು ಮತ್ತು ನಕಲಿ ಆಧಾರ್ ಕಾರ್ಡ್ಗಳನ್ನು ಸೃಷ್ಟಿಸಿ ನಕಲಿ ಮತಗಳನ್ನು ಚಲಾಯಿಸುವುದನ್ನು ತಡೆಯಲು ಆಧಾರ್ ಕಾರ್ಡ್ಗಳಿಗೆ ಚಿಪ್ ಅಳವಡಿಸುವುದು ಸೂಕ್ತ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.</p><p>ಔರೈಯಾ ಜಿಲ್ಲೆಯ ಪ್ರಮುಖ ಪಕ್ಷದ ನಾಯಕರೊಂದಿಗೆ ಚುನಾವಣಾ ಸಿದ್ಧತೆಗಳ ಕುರಿತು ಅಖಿಲೇಶ್ ಯಾದವ್ ಅವರು ಚರ್ಚೆ ನಡೆಸಿದ್ದಾರೆ. </p><p>ಇದೇ ವೇಳೆ ಮಾತನಾಡಿದ ಅವರು, ‘ದೇಶದಾದ್ಯಂತ ಜಾತಿ ಜನಗಣತಿಯನ್ನು ಪ್ರಾರಂಭಿಸಿದರೆ, ಮೀಸಲಾತಿಯನ್ನು ಸರಿಯಾಗಿ ಜಾರಿಗೆ ತರಲಾಗುತ್ತದೆ ಮತ್ತು ‘ಪಿಡಿಎ’ ಅಂದರೆ, ಪಿಚ್ಡೆ (ಹಿಂದುಳಿದ) ಸಮುದಾಯದ ಜನರ ಸಮಸ್ಯೆಗಳನ್ನು ಪರಿಹರಿಸಿದಂತಾಗುತ್ತದೆ’ ಎಂದು ಯಾದವ್ ಹೇಳಿದ್ದಾರೆ.</p><p>2024ರ ಲೋಕಸಭೆ ಚುನಾವಣೆಯಲ್ಲಿ ಪಿಡಿಎ ಸಮುದಾಯದ ಸದಸ್ಯರ ಕಠಿಣ ಪರಿಶ್ರಮದಿಂದ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನೆರವಾಯಿತು. ನಮ್ಮ ಪಕ್ಷವು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತರ ಪರವಾಗಿದೆ ಎಂದು ಯಾದವ್ ಪುನರುಚ್ಚರಿಸಿದ್ದಾರೆ.</p><p>‘ಬಿಜೆಪಿ ಸರ್ಕಾರ ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕುವ ಮೂಲಕ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವವನ್ನು ದುರ್ಬಲಗೊಳಿಸುತ್ತಿದೆ. ಜತೆಗೆ, ಚುನಾವಣಾ ಆಯೋಗ ಸೇರಿದಂತೆ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ನಾಶಮಾಡಲು ವ್ಯವಸ್ಥಿತ ಪಿತೂರಿಗಳನ್ನು ನಡೆಸಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ. </p><p>‘ನಮ್ಮ ಪಕ್ಷದ ಕಾರ್ಯಕರ್ತರು ಮತದಾರರ ಪಟ್ಟಿಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ತಮ್ಮ ಬೆಂಬಲಿಗರ ಮತಗಳನ್ನು ಕ್ರೋಢೀಕರಣ ಮಾಡಬೇಕು. ಜತೆಗೆ, ಬೂತ್ ಮಟ್ಟದಿಂದಲೇ ಸಂಘಟನೆಯನ್ನು ಬಲಪಡಿಸುವುದರ ಜತೆಗೆ ಬಿಜೆಪಿಗರ ಸುಳ್ಳುಗಳನ್ನು ಬಹಿರಂಗಪಡಿಸುವ ಕೆಲಸ ಮಾಡಬೇಕು’ ಎಂದು ಯಾದವ್ ಕರೆ ಕೊಟ್ಟಿದ್ದಾರೆ. </p><p>2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>