ಈ ಸಂಬಂಧ ಥಣಿಸಂದ್ರ ನಿವಾಸಿ ಮ್ಯಾಥ್ಯೂ ಥಾಮಸ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ‘ಈ ಕುರಿತು ಸುಪ್ರಿಂ ಕೋರ್ಟ್ ವಿಚಾರಣೆ ನಡೆಸುವುದೇ ಸೂಕ್ತ’ ಎಂದಿತು. ಈ ಸಲಹೆಯನ್ನು ಸ್ವೀಕರಿಸಿದ ಅರ್ಜಿದಾರರು, ಅರ್ಜಿ ಹಿಂಪಡೆಯುವುದಾಗಿ ತಿಳಿಸಿದರು.