<p><strong>ಕೊಚ್ಚಿ</strong>: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇರಳದಲ್ಲಿ ಟ್ವೆಂಟಿ-20 ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಭಾನುವಾರ ಘೋಷಿಸಿದ್ದಾರೆ.</p>.<p>ಈ ಮೈತ್ರಿಕೂಟಕ್ಕೆ ‘ಜನ ಕಲ್ಯಾಣ ಮೈತ್ರಿ’(ಪೀಪಲ್ಸ್ ವೆಲ್ಫೇರ್ ಅಲಯನ್ಸ್–ಪಿಡಬ್ಲ್ಯೂಎ) ಎಂದು ಹೆಸರಿಡಲಾಗಿದೆ.</p>.<p>‘ಟ್ವೆಂಟಿ20’ ಅಸಾಂಪ್ರದಾಯಿಕ ರಾಜಕೀಯ ಪಕ್ಷವಾಗಿದ್ದು, ಲಾಭರಹಿತ ದತ್ತಿ ಸಂಸ್ಥೆಯಾಗಿ ಪ್ರಾರಂಭವಾಯಿತು. ಅದರ ವಾರ್ಷಿಕೋತ್ಸವದಲ್ಲಿ ಅರವಿಂದ ಕೇಜ್ರಿವಾಲ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.</p>.<p>ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೇಜ್ರಿವಾಲ್ ಘೋಷಿಸಿದರು.</p>.<p>‘ದೆಹಲಿಯಲ್ಲಿ ದಿನದ 24 ಗಂಟೆಯ ವಿದ್ಯುತ್ ಪೂರೈಕೆಯಿಂದಾಗಿ ಜನರೇಟರ್ ಅಂಗಡಿಗಳನ್ನು ಮುಚ್ಚಲಾಗಿದೆ’ ಎಂದು ಅವರು ಸಮಾರಂಭವೊಂದರಲ್ಲಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/kejriwal-to-visit-kerala-to-participate-in-twenty20-political-party-event-933409.html" target="_blank"><strong>‘</strong>ಟ್ವೆಂಟಿ20’ ಪಕ್ಷದ ವಾರ್ಷಿಕೋತ್ಸವ! ಮೇ 15ಕ್ಕೆ ಕೇಜ್ರಿವಾಲ್ ಕೇರಳಕ್ಕೆ</a></p>.<p>ರಾಜಕೀಯ ರಂಗದ ‘ಸ್ಟಾರ್ಟ್ ಅಪ್’ ರೀತಿ ಕಾರ್ಯನಿರ್ವಹಿಸುತ್ತಿರುವ ಟ್ವೆಂಟಿ20, ಈಗಾಗಲೇ ಕೇರಳದ ಕಿಝಕ್ಕಂಬಲಂ ಗ್ರಾಮ ಪಂಚಾಯಿತಿಯನ್ನು ಗೆಲ್ಲುವ ಮೂಲಕ ಛಾಪು ಮೂಡಿಸಿದೆ. ಪ್ರಸ್ತುತ, ಟ್ವೆಂಟಿ20ಯು ಕಿಝಕ್ಕಂಬಲಂ ಗ್ರಾಮ ಪಂಚಾಯಿತಿಯ ಸುತ್ತಲ ನಾಲ್ಕು ಪಂಚಾಯಿತಿಗಳಲ್ಲಿ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇರಳದಲ್ಲಿ ಟ್ವೆಂಟಿ-20 ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಭಾನುವಾರ ಘೋಷಿಸಿದ್ದಾರೆ.</p>.<p>ಈ ಮೈತ್ರಿಕೂಟಕ್ಕೆ ‘ಜನ ಕಲ್ಯಾಣ ಮೈತ್ರಿ’(ಪೀಪಲ್ಸ್ ವೆಲ್ಫೇರ್ ಅಲಯನ್ಸ್–ಪಿಡಬ್ಲ್ಯೂಎ) ಎಂದು ಹೆಸರಿಡಲಾಗಿದೆ.</p>.<p>‘ಟ್ವೆಂಟಿ20’ ಅಸಾಂಪ್ರದಾಯಿಕ ರಾಜಕೀಯ ಪಕ್ಷವಾಗಿದ್ದು, ಲಾಭರಹಿತ ದತ್ತಿ ಸಂಸ್ಥೆಯಾಗಿ ಪ್ರಾರಂಭವಾಯಿತು. ಅದರ ವಾರ್ಷಿಕೋತ್ಸವದಲ್ಲಿ ಅರವಿಂದ ಕೇಜ್ರಿವಾಲ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.</p>.<p>ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೇಜ್ರಿವಾಲ್ ಘೋಷಿಸಿದರು.</p>.<p>‘ದೆಹಲಿಯಲ್ಲಿ ದಿನದ 24 ಗಂಟೆಯ ವಿದ್ಯುತ್ ಪೂರೈಕೆಯಿಂದಾಗಿ ಜನರೇಟರ್ ಅಂಗಡಿಗಳನ್ನು ಮುಚ್ಚಲಾಗಿದೆ’ ಎಂದು ಅವರು ಸಮಾರಂಭವೊಂದರಲ್ಲಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/kejriwal-to-visit-kerala-to-participate-in-twenty20-political-party-event-933409.html" target="_blank"><strong>‘</strong>ಟ್ವೆಂಟಿ20’ ಪಕ್ಷದ ವಾರ್ಷಿಕೋತ್ಸವ! ಮೇ 15ಕ್ಕೆ ಕೇಜ್ರಿವಾಲ್ ಕೇರಳಕ್ಕೆ</a></p>.<p>ರಾಜಕೀಯ ರಂಗದ ‘ಸ್ಟಾರ್ಟ್ ಅಪ್’ ರೀತಿ ಕಾರ್ಯನಿರ್ವಹಿಸುತ್ತಿರುವ ಟ್ವೆಂಟಿ20, ಈಗಾಗಲೇ ಕೇರಳದ ಕಿಝಕ್ಕಂಬಲಂ ಗ್ರಾಮ ಪಂಚಾಯಿತಿಯನ್ನು ಗೆಲ್ಲುವ ಮೂಲಕ ಛಾಪು ಮೂಡಿಸಿದೆ. ಪ್ರಸ್ತುತ, ಟ್ವೆಂಟಿ20ಯು ಕಿಝಕ್ಕಂಬಲಂ ಗ್ರಾಮ ಪಂಚಾಯಿತಿಯ ಸುತ್ತಲ ನಾಲ್ಕು ಪಂಚಾಯಿತಿಗಳಲ್ಲಿ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>