<p><strong>ದಿಯು:</strong> ಅತ್ಯಂತ ಪ್ರಾಮಾಣಿಕವಾಗಿ ಇರುವುದಾಗಿ ಹೇಳಿ ಅಧಿಕಾರಕ್ಕೇರಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭ್ರಷ್ಟಾಚಾರದ ದ್ಯೋತಕವಾಗಿ ಬದಲಾಗಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಗುರುವಾರ ಆರೋಪಿಸಿದ್ದಾರೆ.</p><p>ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರ ದೆಹಲಿಯಲ್ಲಿ ಮೊಹಲ್ಲಾ ಕ್ಲಿನಿಕ್ಗಳನ್ನು ತೆರೆಯುವ ವೇಳೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ದೆಹಲಿ ಲೆಫ್ಟಿನಂಟ್ ಗವರ್ನರ್ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದಾರೆ. ಇದನ್ನು ಉಲ್ಲೇಖಿಸಿ ಠಾಕೂರ್ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, 'ತಮ್ಮನ್ನು ತಾವು ಅತ್ಯಂತ ಪ್ರಾಮಾಣಿಕರೆಂದು ಹೇಳಿಕೊಂಡು ರಾಜಕೀಯಕ್ಕೆ ಬಂದ ಕೇಜ್ರಿವಾಲ್ ಮತ್ತು ಅವರ ಸರ್ಕಾರ ಇದೀಗ, ಭ್ರಷ್ಟಾಚಾರದ ದ್ಯೋತಕವಾಗಿ ಬದಲಾಗಿದ್ದಾರೆ' ಎಂದು ದೂರಿದ್ದಾರೆ.</p><p>ಮೊಹಲ್ಲಾ ಕ್ಲಿನಿಕ್ ವಿಚಾರವಾಗಿ ಹರಿಹಾಯ್ದಿರುವ ಬಿಜೆಪಿ ನಾಯಕ, 'ಮೊದಲು ನಕಲಿ ಔಷಧ ಹಗರಣ ಬೆಳಕಿಗೆ ಬಂದಿತು. ಇದೀಗ ನಕಲಿ ಆರೋಗ್ಯ ತಪಾಸಣೆ ಬಹಿರಂಗಗೊಂಡಿದೆ. ಇದು ಜನರ ಬದುಕಿನ ಮೇಲಿನ ದಾಳಿಯಾಗಿದೆ. ಸರ್ಕಾರವೇ ನಕಲಿಯಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಲೋಕಸಭೆ ಚುನಾವಣೆ: ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ಯತ್ನ- ಕೇಜ್ರಿವಾಲ್ ಆರೋಪ.ವಿಚಾರಣೆಗೆ ಅರವಿಂದ ಕೇಜ್ರಿವಾಲ್ ಗೈರು: ಪ್ರಶ್ನಾವಳಿಗೆ ಕೋರಿಕೆ.<p>ದೆಹಲಿಯಲ್ಲಿ ಮದ್ಯ ನೀತಿ ಜಾರಿಗೊಳಿಸಿದ್ದ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಕೇಜ್ರಿವಾಲ್ ಅವರಿಗೆ ಮೂರು ಬಾರಿ ಸಮನ್ಸ್ ಜಾರಿ ಮಾಡಿದೆ. ಆದರೂ ಅವರು ವಿಚಾರಣೆಗೆ ಹಾಜರಾಗಿಲ್ಲ.</p><p>ಇದರ ವಿರುದ್ಧವೂ ಕಿಡಿಕಾರಿರುವ ಠಾಕೂರ್, 'ಒಂದಾದ ಮೇಲೊಂದು ಹಗರಣಗಳು ಬಯಲಾಗುತ್ತಿವೆ. ತಮ್ಮನ್ನು ತಾವು ಪ್ರಾಮಾಣಿಕರು ಎಂದು ಹೇಳಿಕೊಂಡ ಒಬ್ಬ ನಾಯಕನೂ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿಲ್ಲ. ಉಪ ಮುಖ್ಯಮಂತ್ರಿ, ಸಚಿವರು ಹಾಗೂ ಸಂಸದರು ಜೈಲಿನಲ್ಲಿದ್ದಾರೆ' ಎಂದು ಚಾಟಿ ಬೀಸಿದ್ದಾರೆ.</p><p>'ಕೇಜ್ರಿವಾಲ್ ಇ.ಡಿ ಎದುರು ಹಾಜರಾಗಲು ಹೆದರುತ್ತಿರುವುದೇಕೆ? ಅವರು ಕಾನೂನಿಗಿಂತ ದೊಡ್ಡವರೇ?' ಎಂದೂ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಿಯು:</strong> ಅತ್ಯಂತ ಪ್ರಾಮಾಣಿಕವಾಗಿ ಇರುವುದಾಗಿ ಹೇಳಿ ಅಧಿಕಾರಕ್ಕೇರಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭ್ರಷ್ಟಾಚಾರದ ದ್ಯೋತಕವಾಗಿ ಬದಲಾಗಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಗುರುವಾರ ಆರೋಪಿಸಿದ್ದಾರೆ.</p><p>ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರ ದೆಹಲಿಯಲ್ಲಿ ಮೊಹಲ್ಲಾ ಕ್ಲಿನಿಕ್ಗಳನ್ನು ತೆರೆಯುವ ವೇಳೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ದೆಹಲಿ ಲೆಫ್ಟಿನಂಟ್ ಗವರ್ನರ್ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದಾರೆ. ಇದನ್ನು ಉಲ್ಲೇಖಿಸಿ ಠಾಕೂರ್ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, 'ತಮ್ಮನ್ನು ತಾವು ಅತ್ಯಂತ ಪ್ರಾಮಾಣಿಕರೆಂದು ಹೇಳಿಕೊಂಡು ರಾಜಕೀಯಕ್ಕೆ ಬಂದ ಕೇಜ್ರಿವಾಲ್ ಮತ್ತು ಅವರ ಸರ್ಕಾರ ಇದೀಗ, ಭ್ರಷ್ಟಾಚಾರದ ದ್ಯೋತಕವಾಗಿ ಬದಲಾಗಿದ್ದಾರೆ' ಎಂದು ದೂರಿದ್ದಾರೆ.</p><p>ಮೊಹಲ್ಲಾ ಕ್ಲಿನಿಕ್ ವಿಚಾರವಾಗಿ ಹರಿಹಾಯ್ದಿರುವ ಬಿಜೆಪಿ ನಾಯಕ, 'ಮೊದಲು ನಕಲಿ ಔಷಧ ಹಗರಣ ಬೆಳಕಿಗೆ ಬಂದಿತು. ಇದೀಗ ನಕಲಿ ಆರೋಗ್ಯ ತಪಾಸಣೆ ಬಹಿರಂಗಗೊಂಡಿದೆ. ಇದು ಜನರ ಬದುಕಿನ ಮೇಲಿನ ದಾಳಿಯಾಗಿದೆ. ಸರ್ಕಾರವೇ ನಕಲಿಯಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಲೋಕಸಭೆ ಚುನಾವಣೆ: ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ಯತ್ನ- ಕೇಜ್ರಿವಾಲ್ ಆರೋಪ.ವಿಚಾರಣೆಗೆ ಅರವಿಂದ ಕೇಜ್ರಿವಾಲ್ ಗೈರು: ಪ್ರಶ್ನಾವಳಿಗೆ ಕೋರಿಕೆ.<p>ದೆಹಲಿಯಲ್ಲಿ ಮದ್ಯ ನೀತಿ ಜಾರಿಗೊಳಿಸಿದ್ದ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಕೇಜ್ರಿವಾಲ್ ಅವರಿಗೆ ಮೂರು ಬಾರಿ ಸಮನ್ಸ್ ಜಾರಿ ಮಾಡಿದೆ. ಆದರೂ ಅವರು ವಿಚಾರಣೆಗೆ ಹಾಜರಾಗಿಲ್ಲ.</p><p>ಇದರ ವಿರುದ್ಧವೂ ಕಿಡಿಕಾರಿರುವ ಠಾಕೂರ್, 'ಒಂದಾದ ಮೇಲೊಂದು ಹಗರಣಗಳು ಬಯಲಾಗುತ್ತಿವೆ. ತಮ್ಮನ್ನು ತಾವು ಪ್ರಾಮಾಣಿಕರು ಎಂದು ಹೇಳಿಕೊಂಡ ಒಬ್ಬ ನಾಯಕನೂ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿಲ್ಲ. ಉಪ ಮುಖ್ಯಮಂತ್ರಿ, ಸಚಿವರು ಹಾಗೂ ಸಂಸದರು ಜೈಲಿನಲ್ಲಿದ್ದಾರೆ' ಎಂದು ಚಾಟಿ ಬೀಸಿದ್ದಾರೆ.</p><p>'ಕೇಜ್ರಿವಾಲ್ ಇ.ಡಿ ಎದುರು ಹಾಜರಾಗಲು ಹೆದರುತ್ತಿರುವುದೇಕೆ? ಅವರು ಕಾನೂನಿಗಿಂತ ದೊಡ್ಡವರೇ?' ಎಂದೂ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>