<p><strong>ನವದೆಹಲಿ:</strong> ಎಎಪಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಎಎಪಿಯ ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರಾಯ್ ತಿಳಿಸಿದರು.</p>.<p>ಈ ಮೂಲಕ ಅವರು, ಮುಂದಿನ ವರ್ಷ ದೆಹಲಿ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂಬ ಸುಳಿವು ನೀಡಿದರು.</p>.<p>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆಯಲ್ಲಿ ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರ ಸಭೆ ಗುರುವಾರ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ಪಕ್ಷವು ‘ಇಂಡಿಯಾ’ ಮೈತ್ರಿಕೂಟಕ್ಕೆ ಪೂರ್ಣ ಬೆಂಬಲ ನೀಡಿದೆ ಎಂದು ಗೋಪಾಲ್ ಅವರು ಪಿಟಿಐಗೆ ಪ್ರತಿಕ್ರಿಯಿಸಿದರು.</p>.<p>‘ಇಂಡಿಯಾ ಮೈತ್ರಿಯು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾತ್ರ. ಹಲವು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದವು. ಎಎಪಿ ಸಹ ಅದರ ಭಾಗವಾಗಿತ್ತು. ಆದರೆ, ಸದ್ಯಕ್ಕೆ ದೆಹಲಿ ವಿಧಾಸನಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಮೈತ್ರಿ ಇಲ್ಲ’ ಎಂದು ಅವರು ಉತ್ತರಿಸಿದರು.</p>.<p>ಲೋಕಸಭೆ ಚುನಾವಣೆಯಲ್ಲಿ ದೆಹಲಿ ಕ್ಷೇತ್ರಗಳಲ್ಲಿ ಎಎಪಿ– ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳಿಗೆ ಸೋಲಾಯಿತು. ಬಿಜೆಪಿ ಸತತ ಮೂರನೇ ಬಾರಿಗೆ ದೆಹಲಿಯ ಎಲ್ಲ ಏಳು ಕ್ಷೇತ್ರಗಳನ್ನು ಜಯಿಸುವ ಮೂಲಕ ‘ಹ್ಯಾಟ್ರಿಕ್ ಕ್ಲೀನ್ ಸ್ವೀಪ್’ ಸಾಧನೆ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎಎಪಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಎಎಪಿಯ ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರಾಯ್ ತಿಳಿಸಿದರು.</p>.<p>ಈ ಮೂಲಕ ಅವರು, ಮುಂದಿನ ವರ್ಷ ದೆಹಲಿ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂಬ ಸುಳಿವು ನೀಡಿದರು.</p>.<p>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆಯಲ್ಲಿ ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರ ಸಭೆ ಗುರುವಾರ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ಪಕ್ಷವು ‘ಇಂಡಿಯಾ’ ಮೈತ್ರಿಕೂಟಕ್ಕೆ ಪೂರ್ಣ ಬೆಂಬಲ ನೀಡಿದೆ ಎಂದು ಗೋಪಾಲ್ ಅವರು ಪಿಟಿಐಗೆ ಪ್ರತಿಕ್ರಿಯಿಸಿದರು.</p>.<p>‘ಇಂಡಿಯಾ ಮೈತ್ರಿಯು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾತ್ರ. ಹಲವು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದವು. ಎಎಪಿ ಸಹ ಅದರ ಭಾಗವಾಗಿತ್ತು. ಆದರೆ, ಸದ್ಯಕ್ಕೆ ದೆಹಲಿ ವಿಧಾಸನಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಮೈತ್ರಿ ಇಲ್ಲ’ ಎಂದು ಅವರು ಉತ್ತರಿಸಿದರು.</p>.<p>ಲೋಕಸಭೆ ಚುನಾವಣೆಯಲ್ಲಿ ದೆಹಲಿ ಕ್ಷೇತ್ರಗಳಲ್ಲಿ ಎಎಪಿ– ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳಿಗೆ ಸೋಲಾಯಿತು. ಬಿಜೆಪಿ ಸತತ ಮೂರನೇ ಬಾರಿಗೆ ದೆಹಲಿಯ ಎಲ್ಲ ಏಳು ಕ್ಷೇತ್ರಗಳನ್ನು ಜಯಿಸುವ ಮೂಲಕ ‘ಹ್ಯಾಟ್ರಿಕ್ ಕ್ಲೀನ್ ಸ್ವೀಪ್’ ಸಾಧನೆ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>