ಚಂಡೀಗಢ: ಎಎಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಹರಿಯಾಣದಲ್ಲಿ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಎಎಪಿಯ ಹರಿಯಾಣ ಮುಖ್ಯಸ್ಥ ಸುಶಿಲ್ ಗುಪ್ತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಹಾಗೂ ಹರಿಯಾಣದಲ್ಲಿ ಬದಲಾವಣೆ ತರಲು ಜನ ಬಯಸಿದ್ದಾರೆ ಎಂದು ಅವರು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಹರಿಯಾಣದಲ್ಲಿ ಎಲ್ಲ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.