<p><strong>ಚಂಡೀಗಢ(ಪಂಜಾಬ್):</strong> ಲುಧಿಯಾನ ಪಶ್ಚಿಮ ಕ್ಷೇತ್ರ ಉಪಚುನಾವಣೆಗೆ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರನ್ನು ಅಭ್ಯರ್ಥಿಯಾಗಿ ಎಎಪಿ ಘೋಷಿಸಿದ್ದು, ಅರೋರ ಅವರ ಸ್ಥಾನವನ್ನು ಅರವಿಂದ ಕೇಜ್ರಿವಾಲ್ ಅವರು ಅಲಂಕರಿಸುವ ಸಾಧ್ಯತೆಯಿದೆ ಎಂಬ ಅನುಮಾನವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿವೆ.</p><p>ಕಳೆದ ತಿಂಗಳು ಎಎಪಿ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ತೆರವಾದ ಲುಧಿಯಾನ ಪಶ್ಚಿಮ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಎಎಪಿ ಅಭ್ಯರ್ಥಿ ಘೋಷಿಸಿದೆ.</p><p>ಫೆಬ್ರುವರಿ 5ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ಅವರು ವಿರುದ್ಧ ಕೇಜ್ರಿವಾಲ್ ಸೋತಿದ್ದರು.</p><p>ಲುಧಿಯಾನ ಉಪ ಚುನಾವಣೆಗೆ ಎಎಪಿ ಅಭ್ಯರ್ಥಿ ಆಯ್ಕೆ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪಂಜಾಬ್ ಕಾಂಗ್ರೆಸ್ ಶಾಸಕ ಸುಖಪಲ್ ಸಿಂಗ್ ಖೈರಾ, ಕೇಜ್ರಿವಾಲ್ ರಾಜ್ಯಸಭೆಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ.</p><p>ಇನ್ನು, ‘ಅರೋರಾ ಅವರ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ಅಥವಾ ಮನೀಶ್ ಸಿಸೋಡಿಯಾ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ’ ಎಂದು ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಹೇಳಿದ್ದಾರೆ.</p><p>ಏನತ್ಮಧ್ಯೆ, ಕೇಜ್ರಿವಾಲ್ ರಾಜ್ಯಸಭಾ ಪ್ರವೇಶದ ಕುರಿತು ವಿರೋಧ ಪಕ್ಷಗಳ ಹೇಳಿಕೆಯನ್ನು ಪಂಜಾಬ್ನ ಎಎಪಿ ವಕ್ತಾರ ನೀಲ್ ಗರ್ಗ್ ತಳ್ಳಿಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ(ಪಂಜಾಬ್):</strong> ಲುಧಿಯಾನ ಪಶ್ಚಿಮ ಕ್ಷೇತ್ರ ಉಪಚುನಾವಣೆಗೆ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರನ್ನು ಅಭ್ಯರ್ಥಿಯಾಗಿ ಎಎಪಿ ಘೋಷಿಸಿದ್ದು, ಅರೋರ ಅವರ ಸ್ಥಾನವನ್ನು ಅರವಿಂದ ಕೇಜ್ರಿವಾಲ್ ಅವರು ಅಲಂಕರಿಸುವ ಸಾಧ್ಯತೆಯಿದೆ ಎಂಬ ಅನುಮಾನವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿವೆ.</p><p>ಕಳೆದ ತಿಂಗಳು ಎಎಪಿ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ತೆರವಾದ ಲುಧಿಯಾನ ಪಶ್ಚಿಮ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಎಎಪಿ ಅಭ್ಯರ್ಥಿ ಘೋಷಿಸಿದೆ.</p><p>ಫೆಬ್ರುವರಿ 5ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ಅವರು ವಿರುದ್ಧ ಕೇಜ್ರಿವಾಲ್ ಸೋತಿದ್ದರು.</p><p>ಲುಧಿಯಾನ ಉಪ ಚುನಾವಣೆಗೆ ಎಎಪಿ ಅಭ್ಯರ್ಥಿ ಆಯ್ಕೆ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪಂಜಾಬ್ ಕಾಂಗ್ರೆಸ್ ಶಾಸಕ ಸುಖಪಲ್ ಸಿಂಗ್ ಖೈರಾ, ಕೇಜ್ರಿವಾಲ್ ರಾಜ್ಯಸಭೆಗೆ ಪ್ರವೇಶಿಸುವುದು ಖಚಿತ ಎಂದಿದ್ದಾರೆ.</p><p>ಇನ್ನು, ‘ಅರೋರಾ ಅವರ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ಅಥವಾ ಮನೀಶ್ ಸಿಸೋಡಿಯಾ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ’ ಎಂದು ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಹೇಳಿದ್ದಾರೆ.</p><p>ಏನತ್ಮಧ್ಯೆ, ಕೇಜ್ರಿವಾಲ್ ರಾಜ್ಯಸಭಾ ಪ್ರವೇಶದ ಕುರಿತು ವಿರೋಧ ಪಕ್ಷಗಳ ಹೇಳಿಕೆಯನ್ನು ಪಂಜಾಬ್ನ ಎಎಪಿ ವಕ್ತಾರ ನೀಲ್ ಗರ್ಗ್ ತಳ್ಳಿಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>