ನವದೆಹಲಿ: ದೆಹಲಿ ಸರ್ಕಾರದ ಸೇವಾ ವಿಭಾಗದ ಕಾರ್ಯದರ್ಶಿ ಅಭಿಷೇಕ್ ಮೋರೆ ವರ್ಗಾವಣೆ ವಿವಾದ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಚಿವರು ಶುಕ್ರವಾರ ಪ್ರತ್ಯೇಕವಾಗಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ಅಧಿಕಾರ ಇರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಆರೋಪ, ಪ್ರತ್ಯಾರೋಪ ನಡೆದಿದೆ.
ಸರ್ಕಾರ ಉರುಳಿಸಲು ಪಿತೂರಿ ನಡೆಯುತ್ತಿದೆ ಎಂದು ಕೇಜ್ರಿವಾಲ್ ದೂರಿದರೆ, ‘ಎಎಪಿಯು ನಿಯಮಾವಳಿಗಳನ್ನು ಉಲ್ಲಂಘಿಸುತ್ತಿದೆ’ ಎಂದು ಲೆಫ್ಟಿನೆಂಟ್ ಗವರ್ನರ್ ಆರೋಪಿಸಿದ್ದಾರೆ.