<p><strong>ನವದೆಹಲಿ:</strong> 2024ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.</p> <p>ಎಎಪಿ ಶಾಸಕ ದಿಲೀಪ್ ಪಾಂಡೆ ಬರೆದು ಹಾಡಿರುವ ' ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ' (ಜೈಲಿಗೆ ಉತ್ತರ ಮತಗಳಲ್ಲಿ ನೀಡುತ್ತೇವೆ) ಗೀತೆಯನ್ನು ಎಎಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಬಿಡುಗಡೆ ಮಾಡಿದರು. ಹಾಡಿಕೆ 'Jail Ka Jawab Vote Se' ಎಂಬ ಶೀರ್ಷಿಕೆ ನೀಡಲಾಗಿದೆ.</p>. <p>'ನಮ್ಮ ಪ್ರಚಾರ ಗೀತೆಗಳು ಯಾವಾಗಲೂ ಸಾಮಾನ್ಯ ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ಈ ಹಾಡು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಹಾಡಿನ ಸಾಹಿತ್ಯವು ಇಂದಿನ ದಿನಗಳಲ್ಲಿ ಏನಾಗುತ್ತಿದೆ ಎಂಬುದರ ನೈಜತೆಯನ್ನು ಬಿಂಬಿಸುತ್ತದೆ' ಎಂದು ಪಾಂಡೆ ಹೇಳಿದ್ದಾರೆ.</p> <p>ಅಲ್ಲದೇ ಭವಿಷ್ಯದಲ್ಲಿ ಜನರು ಎದುರಿಸಬಹುದಾದ ಅಪಾಯಗಳನ್ನು ಈ ಹಾಡು ಚಿತ್ರಿಸುತ್ತದೆ ಎಂದು ಅವರು ಹೇಳಿದ್ದಾರೆ.</p> <p>ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಪ್ರಸ್ತುತ ಅವರು ತಿಹಾರ್ ಜೈಲಿನಲ್ಲಿದ್ದಾರೆ.</p> .ಲೋಕಸಭಾ ಚುನಾವಣೆ: ಕಾಂಗ್ರೆಸ್ ಪ್ರಚಾರ ಗೀತೆ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2024ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.</p> <p>ಎಎಪಿ ಶಾಸಕ ದಿಲೀಪ್ ಪಾಂಡೆ ಬರೆದು ಹಾಡಿರುವ ' ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ' (ಜೈಲಿಗೆ ಉತ್ತರ ಮತಗಳಲ್ಲಿ ನೀಡುತ್ತೇವೆ) ಗೀತೆಯನ್ನು ಎಎಪಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಬಿಡುಗಡೆ ಮಾಡಿದರು. ಹಾಡಿಕೆ 'Jail Ka Jawab Vote Se' ಎಂಬ ಶೀರ್ಷಿಕೆ ನೀಡಲಾಗಿದೆ.</p>. <p>'ನಮ್ಮ ಪ್ರಚಾರ ಗೀತೆಗಳು ಯಾವಾಗಲೂ ಸಾಮಾನ್ಯ ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ಈ ಹಾಡು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಹಾಡಿನ ಸಾಹಿತ್ಯವು ಇಂದಿನ ದಿನಗಳಲ್ಲಿ ಏನಾಗುತ್ತಿದೆ ಎಂಬುದರ ನೈಜತೆಯನ್ನು ಬಿಂಬಿಸುತ್ತದೆ' ಎಂದು ಪಾಂಡೆ ಹೇಳಿದ್ದಾರೆ.</p> <p>ಅಲ್ಲದೇ ಭವಿಷ್ಯದಲ್ಲಿ ಜನರು ಎದುರಿಸಬಹುದಾದ ಅಪಾಯಗಳನ್ನು ಈ ಹಾಡು ಚಿತ್ರಿಸುತ್ತದೆ ಎಂದು ಅವರು ಹೇಳಿದ್ದಾರೆ.</p> <p>ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಪ್ರಸ್ತುತ ಅವರು ತಿಹಾರ್ ಜೈಲಿನಲ್ಲಿದ್ದಾರೆ.</p> .ಲೋಕಸಭಾ ಚುನಾವಣೆ: ಕಾಂಗ್ರೆಸ್ ಪ್ರಚಾರ ಗೀತೆ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>