<p><strong>ನವದೆಹಲಿ</strong>: ‘ಆಮ್ ಆದ್ಮಿ ಪಕ್ಷವು (ಎಎಪಿ) ‘ಮೋದಿ ಇಳಿಸಿ, ದೇಶ ಉಳಿಸಿ’ (ಮೋದಿ ಹಠಾವೋ, ದೇಶ್ ಬಚಾವೋ) ಎನ್ನುವ ಪೋಸ್ಟರ್ ಅಭಿಯಾನವನ್ನು ಗುರುವಾರದಂದು ದೇಶದಾದ್ಯಂತ ಹಮ್ಮಿಕೊಂಡಿತ್ತು. 22 ರಾಜ್ಯಗಳಲ್ಲಿ ಈ ಪೋಸ್ಟರ್ಗಳನ್ನು ಅಂಟಿಸಲಾಗಿದೆ’ ಎಂದು ದೆಹಲಿ ಘಟಕದ ಸಂಚಾಲಕ, ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.</p>.<p>‘ಬಿಜೆಪಿಯು ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಸಂದೇಶವನ್ನು ದೇಶದಾದ್ಯಂತ ಜನರಿಗೆ ತಿಳಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ರೈತರಿಗೆ ನೀಡಿದ್ದ ಭರವಸೆಯನ್ನೂ ಕೇಂದ್ರ ಈವರೆಗೂ ಈಡೇರಿಸಿಲ್ಲ. ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲಿದೆ ಬಿಜೆಪಿಯು ಪ್ರಜಾಪ್ರಭುತ್ವವನ್ನೇ ನಾಶಪಡಿಸಲು ಮುಂದಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಿರೋಧವನ್ನು ಸಹಿಸದೆ, ಗೌರವಿಸದೆ ಅಧಿಕಾರದಲ್ಲಿ ಇರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಟ್ಟುಹಿಡಿದಿದ್ದಾರೆ. ಈ ಪ್ರವೃತ್ತಿಯು ಭಾರತದ ಪ್ರಜಾತಂತ್ರ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಒಡ್ಡುವ ಬೆದರಿಕೆಯಾಗಿದೆ. ಜೊತೆಗೆ, ಕೇಂದ್ರ ತನಿಖಾ ಸಂಸ್ಥೆಗಳ ಸ್ವತಂತ್ರ ಅಸ್ತಿತ್ವ ಹಾಗೂ ನ್ಯಾಯಾಂಗ ಪ್ರಕ್ರಿಯೆ ಕುರಿತು ಇರುವ ನಂಬಿಕೆಯನ್ನು ಕೇಂದ್ರ ಸರ್ಕಾರವು ಹಾಳುಗೆಡುವುತ್ತಿದೆ’ ಎಂದು ದೂರಿದರು.</p>.<p>‘ಏಪ್ರಿಲ್ 10ರಂದು ದೇಶದಾದ್ಯಂತ ಇರುವ ವಿಶ್ವವಿದ್ಯಾಲಯಗಳಲ್ಲಿ ಇದೇ ರೀತಿಯ ಪೋಸ್ಟರ್ಗಳನ್ನು ಅಂಟಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಆಮ್ ಆದ್ಮಿ ಪಕ್ಷವು (ಎಎಪಿ) ‘ಮೋದಿ ಇಳಿಸಿ, ದೇಶ ಉಳಿಸಿ’ (ಮೋದಿ ಹಠಾವೋ, ದೇಶ್ ಬಚಾವೋ) ಎನ್ನುವ ಪೋಸ್ಟರ್ ಅಭಿಯಾನವನ್ನು ಗುರುವಾರದಂದು ದೇಶದಾದ್ಯಂತ ಹಮ್ಮಿಕೊಂಡಿತ್ತು. 22 ರಾಜ್ಯಗಳಲ್ಲಿ ಈ ಪೋಸ್ಟರ್ಗಳನ್ನು ಅಂಟಿಸಲಾಗಿದೆ’ ಎಂದು ದೆಹಲಿ ಘಟಕದ ಸಂಚಾಲಕ, ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.</p>.<p>‘ಬಿಜೆಪಿಯು ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಸಂದೇಶವನ್ನು ದೇಶದಾದ್ಯಂತ ಜನರಿಗೆ ತಿಳಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ರೈತರಿಗೆ ನೀಡಿದ್ದ ಭರವಸೆಯನ್ನೂ ಕೇಂದ್ರ ಈವರೆಗೂ ಈಡೇರಿಸಿಲ್ಲ. ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲಿದೆ ಬಿಜೆಪಿಯು ಪ್ರಜಾಪ್ರಭುತ್ವವನ್ನೇ ನಾಶಪಡಿಸಲು ಮುಂದಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಿರೋಧವನ್ನು ಸಹಿಸದೆ, ಗೌರವಿಸದೆ ಅಧಿಕಾರದಲ್ಲಿ ಇರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಟ್ಟುಹಿಡಿದಿದ್ದಾರೆ. ಈ ಪ್ರವೃತ್ತಿಯು ಭಾರತದ ಪ್ರಜಾತಂತ್ರ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಒಡ್ಡುವ ಬೆದರಿಕೆಯಾಗಿದೆ. ಜೊತೆಗೆ, ಕೇಂದ್ರ ತನಿಖಾ ಸಂಸ್ಥೆಗಳ ಸ್ವತಂತ್ರ ಅಸ್ತಿತ್ವ ಹಾಗೂ ನ್ಯಾಯಾಂಗ ಪ್ರಕ್ರಿಯೆ ಕುರಿತು ಇರುವ ನಂಬಿಕೆಯನ್ನು ಕೇಂದ್ರ ಸರ್ಕಾರವು ಹಾಳುಗೆಡುವುತ್ತಿದೆ’ ಎಂದು ದೂರಿದರು.</p>.<p>‘ಏಪ್ರಿಲ್ 10ರಂದು ದೇಶದಾದ್ಯಂತ ಇರುವ ವಿಶ್ವವಿದ್ಯಾಲಯಗಳಲ್ಲಿ ಇದೇ ರೀತಿಯ ಪೋಸ್ಟರ್ಗಳನ್ನು ಅಂಟಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>