ನವದೆಹಲಿ: ರಾಜ್ಯಸಭೆಯ ಕಲಾಪಕ್ಕೆ ಅಡ್ಡಿಪಡಿಸಿರುವುದಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರನ್ನು ಈ ವಾರದ ಕಲಾಪದ ಉಳಿದಿರುವ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ಸಿಂಗ್ ತಿಳಿಸಿದ್ದಾರೆ.
ಸಂಜಯ್ ಸಿಂಗ್ ಅವರು, ಸಭಾಧ್ಯಕ್ಷರ ಮೇಜಿಗೆ ಕಾಗದ ಎಸೆದು ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ಉಪ ಸಭಾಪತಿ ಶಿಸ್ತು ಕ್ರಮ ಕೈಗೊಂಡಿದ್ದಾರೆ.