ನವದೆಹಲಿ: ದೆಹಲಿ ಸರ್ಕಾರ 'ಅಬಕಾರಿ ನೀತಿ' ಜಾರಿಗೊಳಿಸಿದ್ದ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಾರಿಗೆ ಸಚಿವ ಕೈಲಾಶ್ ಗೆಹಲೋತ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ.
ಈ ಬಗ್ಗೆ ಸುದ್ದಿ ಸಂಸ್ಥೆ 'ಪಿಟಿಐ' ವರದಿ ಮಾಡಿದೆ.
ಇದೇ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಳುಹಿಸಿದ್ದ ಸಮನ್ಸ್ಗಳನ್ನು ಪದೇ ಪದೇ ನಿರ್ಲಕ್ಷಿಸಿದ್ದ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು, ಇ.ಡಿ ಫೆಬ್ರುವರಿ 21ರಂದು ಬಂಧಿಸಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರ ಜಾಮೀನು ಮನವಿಯನ್ನು ತಿರಸ್ಕರಿಸಿರುವ ದೆಹಲಿ ಹೈಕೋರ್ಟ್, ಏಪ್ರಿಲ್ 1ರ ವರೆಗೆ ಇ.ಡಿ ವಶಕ್ಕೆ ನೀಡಿದೆ.
ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಮಾರ್ಚ್ 31ರಂದು 'ಮಹಾರ್ಯಾಲಿ' ನಡೆಸಲು ಎಎಪಿ ಸಿದ್ಧತೆ ನಡೆಸಿದೆ.