<p><strong>ಚಂಡೀಗಡ:</strong> ಲಂಚ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್ನ ಭಟಿಂಡಾ ಗ್ರಾಮಾಂತರ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಿತ್ ರತನ್ ಕೋಟ್ಫಟ್ಟಾ ಅವರನ್ನು ಬಂಧಿಸಲಾಗಿದೆ. </p>.<p>₹4 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಅಮಿತ್ ರತನ್ ಅವರನ್ನು ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಭಟಿಂಡಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ. </p>.<p>2022ರ ಮೇ 24ರಂದು ಲಂಚದ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಸಂಪುಟದಿಂದ ವಜಾಗೊಳಿಸಿದ್ದರು. </p>.<p>ಆರೋಗ್ಯ ಇಲಾಖೆಯ ಟೆಂಡರ್ಗಳು ಮತ್ತು ಖರೀದಿ ಪ್ರಕ್ರಿಯೆಗಳಲ್ಲಿ ಶೇ 1ರಷ್ಟು ಕಮಿಷನ್ಗೆ ಸಚಿವರು ಬೇಡಿಕೆಯಿಟ್ಟಿದ್ದರು ಎನ್ನುವ ಆರೋಪ ಕೇಳಿಬಂದ ತಕ್ಷಣವೇ ಮಾನ್ ಅವರು ತಮ್ಮ ಸಹೋದ್ಯೋಗಿಯನ್ನು ಸಂಪುಟದಿಂದ ಕೈಬಿಟ್ಟಿದ್ದರು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದರು. </p>.<p>ಗುತ್ತಿಗೆದಾರರಿಂದ ಹಣ ಸುಲಿಗೆ ಮಾಡುವ ಸಂಚು ರೂಪಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಪಂಜಾಬ್ನ ತೋಟಗಾರಿಕೆ ಮತ್ತು ಆಹಾರ ಸಂಸ್ಕರಣೆ ಸಚಿವ ಫೌಜಾ ಸಿಂಗ್ ಸರಾರಿ ಅವರು ಜ.7ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಲಂಚ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್ನ ಭಟಿಂಡಾ ಗ್ರಾಮಾಂತರ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಿತ್ ರತನ್ ಕೋಟ್ಫಟ್ಟಾ ಅವರನ್ನು ಬಂಧಿಸಲಾಗಿದೆ. </p>.<p>₹4 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಅಮಿತ್ ರತನ್ ಅವರನ್ನು ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಭಟಿಂಡಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ. </p>.<p>2022ರ ಮೇ 24ರಂದು ಲಂಚದ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಸಂಪುಟದಿಂದ ವಜಾಗೊಳಿಸಿದ್ದರು. </p>.<p>ಆರೋಗ್ಯ ಇಲಾಖೆಯ ಟೆಂಡರ್ಗಳು ಮತ್ತು ಖರೀದಿ ಪ್ರಕ್ರಿಯೆಗಳಲ್ಲಿ ಶೇ 1ರಷ್ಟು ಕಮಿಷನ್ಗೆ ಸಚಿವರು ಬೇಡಿಕೆಯಿಟ್ಟಿದ್ದರು ಎನ್ನುವ ಆರೋಪ ಕೇಳಿಬಂದ ತಕ್ಷಣವೇ ಮಾನ್ ಅವರು ತಮ್ಮ ಸಹೋದ್ಯೋಗಿಯನ್ನು ಸಂಪುಟದಿಂದ ಕೈಬಿಟ್ಟಿದ್ದರು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದರು. </p>.<p>ಗುತ್ತಿಗೆದಾರರಿಂದ ಹಣ ಸುಲಿಗೆ ಮಾಡುವ ಸಂಚು ರೂಪಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಪಂಜಾಬ್ನ ತೋಟಗಾರಿಕೆ ಮತ್ತು ಆಹಾರ ಸಂಸ್ಕರಣೆ ಸಚಿವ ಫೌಜಾ ಸಿಂಗ್ ಸರಾರಿ ಅವರು ಜ.7ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>