<p><strong>ಚಂಡೀಗಢ:</strong> ಪಂಜಾಬ್ನ ಎಎಪಿ ನಾಯಕಿ ಅನ್ಮೊಲ್ ಗಗನ್ ಮಾನ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.</p><p>ರಾಜೀನಾಮೆ ಬಗ್ಗೆ ಎಕ್ಸ್ ನಲ್ಲಿ ಅವರು ಬರೆದಕೊಂಡಿದ್ದಾರೆ. ರಾಜಕೀಯ ತೊರೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.</p>.ರಾಜಕೀಯ ಬೆಳವಣಿಗೆ: 'ಇಂಡಿಯಾ' ಮೈತ್ರಿಯಿಂದ ಹೊರಬಂದ ಎಎಪಿ; ಕಾಂಗ್ರೆಸ್ಗೆ ಶಾಕ್.<p>ಖರಾರ್ ಕ್ಷೇತ್ರದ ಶಾಸಕಿಯಾಗಿರುವ ಅವರು, ಪಂಜಾಬ್ ವಿಧಾನಸಭೆ ಸ್ಪೀಕರ್ ಕುಲ್ಟರ್ ಸಿಂಗ್ ಸಂಧ್ವಾನ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.</p><p>‘ನನ್ನ ಹೃದಯ ಭಾರವಾಗಿದೆ. ನಾನು ರಾಜಕೀಯ ತೊರೆಯಲು ನಿರ್ಧರಿಸಿರುವೆ. ಶಾಸಕ್ಕೆ ಸ್ಥಾನಕ್ಕೆ ನಾನು ನೀಡಿರುವ ರಾಜೀನಾಮೆ ಸ್ಪೀಕರ್ ಅಂಗೀಕರಿಸಬೇಕು’ ಎಂದು ಹೇಳಿದ್ದಾರೆ.</p>.ಆಟೊಗಳಿಗೆ ಪರ್ಮಿಟ್ ನೀಡದೇ ದಂಡ ಸರಿಯಲ್ಲ: ಎಎಪಿ.<p>‘ಪಕ್ಷಕ್ಕೆ ನನ್ನ ಶುಭಾಶಯಗಳು. ಪಂಜಾಬ್ ಸರ್ಕಾರ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತದೆ ಎಂದು ನಾನು ಭಾವಿಸುವೆ’ ಎಂದು ಪಂಜಾಬಿ ಭಾಷೆಯಲ್ಲಿ ಮಾಡಿದ ಎಕ್ಸ್ ಪೋಸ್ಟ್ನಲ್ಲಿ ಅವರು ತಿಳಿಸಿದ್ದಾರೆ.</p><p>ಗಾಯಕಿಯಾಗಿರುವ ಅವರು ಎಎಪಿ ಪಕ್ಷ ಸೇರಿ 2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಚುನಾಯಿತರಾಗಿದ್ದರು.</p><p>ಸಚಿವೆಯಾಗಿಯೂ ಕೆಲಸ ನಿರ್ವಹಿಸಿದ್ದ ಅವರು, ಪ್ರವಾಸೋದ್ಯಮ, ಸಂಸ್ಕೃತಿ, ಬಂಡವಾಳ ಪ್ರೋತ್ಸಾಹ, ಕಾರ್ಮಿಕ ಹಾಗೂ ಆತಿಥ್ಯ ಖಾತೆಗಳನ್ನು ನಿರ್ವಹಿಸಿದ್ದರು. ಆದರೆ ಒಂದು ವರ್ಷಗಳ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುವಾಗ ಅವರನ್ನು ಕೈಬಿಡಲಾಗಿತ್ತು.</p> .ಗುಜರಾತ್: ಪಂಚಾಯತ್ ಸದಸ್ಯನ ಮೇಲೆ ಹಲ್ಲೆ: ಎಎಪಿ ಶಾಸಕನ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಪಂಜಾಬ್ನ ಎಎಪಿ ನಾಯಕಿ ಅನ್ಮೊಲ್ ಗಗನ್ ಮಾನ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.</p><p>ರಾಜೀನಾಮೆ ಬಗ್ಗೆ ಎಕ್ಸ್ ನಲ್ಲಿ ಅವರು ಬರೆದಕೊಂಡಿದ್ದಾರೆ. ರಾಜಕೀಯ ತೊರೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.</p>.ರಾಜಕೀಯ ಬೆಳವಣಿಗೆ: 'ಇಂಡಿಯಾ' ಮೈತ್ರಿಯಿಂದ ಹೊರಬಂದ ಎಎಪಿ; ಕಾಂಗ್ರೆಸ್ಗೆ ಶಾಕ್.<p>ಖರಾರ್ ಕ್ಷೇತ್ರದ ಶಾಸಕಿಯಾಗಿರುವ ಅವರು, ಪಂಜಾಬ್ ವಿಧಾನಸಭೆ ಸ್ಪೀಕರ್ ಕುಲ್ಟರ್ ಸಿಂಗ್ ಸಂಧ್ವಾನ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.</p><p>‘ನನ್ನ ಹೃದಯ ಭಾರವಾಗಿದೆ. ನಾನು ರಾಜಕೀಯ ತೊರೆಯಲು ನಿರ್ಧರಿಸಿರುವೆ. ಶಾಸಕ್ಕೆ ಸ್ಥಾನಕ್ಕೆ ನಾನು ನೀಡಿರುವ ರಾಜೀನಾಮೆ ಸ್ಪೀಕರ್ ಅಂಗೀಕರಿಸಬೇಕು’ ಎಂದು ಹೇಳಿದ್ದಾರೆ.</p>.ಆಟೊಗಳಿಗೆ ಪರ್ಮಿಟ್ ನೀಡದೇ ದಂಡ ಸರಿಯಲ್ಲ: ಎಎಪಿ.<p>‘ಪಕ್ಷಕ್ಕೆ ನನ್ನ ಶುಭಾಶಯಗಳು. ಪಂಜಾಬ್ ಸರ್ಕಾರ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತದೆ ಎಂದು ನಾನು ಭಾವಿಸುವೆ’ ಎಂದು ಪಂಜಾಬಿ ಭಾಷೆಯಲ್ಲಿ ಮಾಡಿದ ಎಕ್ಸ್ ಪೋಸ್ಟ್ನಲ್ಲಿ ಅವರು ತಿಳಿಸಿದ್ದಾರೆ.</p><p>ಗಾಯಕಿಯಾಗಿರುವ ಅವರು ಎಎಪಿ ಪಕ್ಷ ಸೇರಿ 2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಚುನಾಯಿತರಾಗಿದ್ದರು.</p><p>ಸಚಿವೆಯಾಗಿಯೂ ಕೆಲಸ ನಿರ್ವಹಿಸಿದ್ದ ಅವರು, ಪ್ರವಾಸೋದ್ಯಮ, ಸಂಸ್ಕೃತಿ, ಬಂಡವಾಳ ಪ್ರೋತ್ಸಾಹ, ಕಾರ್ಮಿಕ ಹಾಗೂ ಆತಿಥ್ಯ ಖಾತೆಗಳನ್ನು ನಿರ್ವಹಿಸಿದ್ದರು. ಆದರೆ ಒಂದು ವರ್ಷಗಳ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುವಾಗ ಅವರನ್ನು ಕೈಬಿಡಲಾಗಿತ್ತು.</p> .ಗುಜರಾತ್: ಪಂಚಾಯತ್ ಸದಸ್ಯನ ಮೇಲೆ ಹಲ್ಲೆ: ಎಎಪಿ ಶಾಸಕನ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>