<p><strong>ಚಂಡೀಗಢ:</strong> 2013ರ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣದಲ್ಲಿ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ ಮತ್ತು ಇತರ ಏಳು ಜನರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ. ದೂರುದಾರರು ಮತ್ತು ಆರೋಪಿಗಳ ಮಧ್ಯೆ ರಾಜಿ ಆಗಿರುವ ಕಾರಣದಿಂದ ಈ ತೀರ್ಪು ಬಂದಿದೆ.</p>.<p>ನ್ಯಾಯಮೂರ್ತಿ ತ್ರಿಭುವನ್ ದಹಿಯಾ ಅವರ ಪೀಠವು ಅರ್ಜಿಯನ್ನು ಪುರಸ್ಕರಿಸುತ್ತಾ, ಪಂಜಾಬ್ನ ತರನ್ ತಾರನ್ನ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. ಕಳೆದ ಸೆಪ್ಟೆಂಬರ್ನಲ್ಲಿ ಆ ನ್ಯಾಯಾಲಯವು ಶಾಸಕ ಮತ್ತು ಇತರ ಏಳು ಮಂದಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.</p>.<p class="title">ಅಲ್ಲದೆ, 2013 ಮಾರ್ಚ್ನಲ್ಲಿ ತರನ್ ತಾರನ್ ಪೊಲೀಸ್ ಠಾಣೆಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ಕೂಡಾ ಹೈಕೋರ್ಟ್ ರದ್ದು ಮಾಡಿದೆ. </p>.<p>ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಸೇರಿದ ದೂರುದಾರ ಮಹಿಳೆ, 2013ರ ಮಾರ್ಚ್ 3ರಂದು ಮಂಜಿಂದರ್ ಮತ್ತು ತರನ್ ತಾರನ್ನ ಕೆಲವು ಪೊಲೀಸ್ ಸಿಬ್ಬಂದಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಮಂಜಿಂದರ್ ಸಿಂಗ್ ಟ್ಯಾಕ್ಸಿ ಚಾಲಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> 2013ರ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣದಲ್ಲಿ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ ಮತ್ತು ಇತರ ಏಳು ಜನರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ. ದೂರುದಾರರು ಮತ್ತು ಆರೋಪಿಗಳ ಮಧ್ಯೆ ರಾಜಿ ಆಗಿರುವ ಕಾರಣದಿಂದ ಈ ತೀರ್ಪು ಬಂದಿದೆ.</p>.<p>ನ್ಯಾಯಮೂರ್ತಿ ತ್ರಿಭುವನ್ ದಹಿಯಾ ಅವರ ಪೀಠವು ಅರ್ಜಿಯನ್ನು ಪುರಸ್ಕರಿಸುತ್ತಾ, ಪಂಜಾಬ್ನ ತರನ್ ತಾರನ್ನ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. ಕಳೆದ ಸೆಪ್ಟೆಂಬರ್ನಲ್ಲಿ ಆ ನ್ಯಾಯಾಲಯವು ಶಾಸಕ ಮತ್ತು ಇತರ ಏಳು ಮಂದಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.</p>.<p class="title">ಅಲ್ಲದೆ, 2013 ಮಾರ್ಚ್ನಲ್ಲಿ ತರನ್ ತಾರನ್ ಪೊಲೀಸ್ ಠಾಣೆಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ಕೂಡಾ ಹೈಕೋರ್ಟ್ ರದ್ದು ಮಾಡಿದೆ. </p>.<p>ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಸೇರಿದ ದೂರುದಾರ ಮಹಿಳೆ, 2013ರ ಮಾರ್ಚ್ 3ರಂದು ಮಂಜಿಂದರ್ ಮತ್ತು ತರನ್ ತಾರನ್ನ ಕೆಲವು ಪೊಲೀಸ್ ಸಿಬ್ಬಂದಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಮಂಜಿಂದರ್ ಸಿಂಗ್ ಟ್ಯಾಕ್ಸಿ ಚಾಲಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>