<p><strong>ನವದೆಹಲಿ</strong>: ಎಎಪಿಯ ಶಾಸಕ ಮತ್ತು ರಾಷ್ಟ್ರ ರಾಜಧಾನಿಯ ಪ್ರಮುಖ ದಲಿತ ನಾಯಕ ರಾಜೇಂದ್ರ ಪಾಲ್ ಗೌತಮ್ ಅವರು ಶುಕ್ರವಾರ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.</p>.<p>ಆಮ್ ಆದ್ಮಿ ಪಕ್ಷವು ಸಾಮಾಜಿಕ ನ್ಯಾಯ ಕಾರ್ಯಸೂಚಿಯನ್ನು ಅನುಸರಿಸುತ್ತಿಲ್ಲ ಎಂದು ಅವರು ಇದೇ ವೇಳೆ ವಾಗ್ದಾಳಿ ನಡೆಸಿದರು.</p>.<p>ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೌತಮ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮತ್ತು ದೆಹಲಿ ಘಟಕದ ಅಧ್ಯಕ್ಷ ದೇವೇಂದರ್ ಯಾದವ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.</p>.<p>ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಹೊತ್ತಿನಲ್ಲೇ ರಾಜೇಂದ್ರ ಕೈ ಪಾಳಯಕ್ಕೆ ಸೇರ್ಪಡೆಯಾಗಿದ್ದಾರೆ. ವಕೀಲರಾಗಿದ್ದ ಅವರು 2014ರಲ್ಲಿ ಎಎಪಿಗೆ ಸೇರ್ಪಡೆಗೊಂಡು, ಸೀಮಾಪುರಿ ವಿಧಾನಸಭಾ ಕ್ಷೇತ್ರದಿಂದ 2015 ಹಾಗೂ 2020ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಎಪಿಯ ಶಾಸಕ ಮತ್ತು ರಾಷ್ಟ್ರ ರಾಜಧಾನಿಯ ಪ್ರಮುಖ ದಲಿತ ನಾಯಕ ರಾಜೇಂದ್ರ ಪಾಲ್ ಗೌತಮ್ ಅವರು ಶುಕ್ರವಾರ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.</p>.<p>ಆಮ್ ಆದ್ಮಿ ಪಕ್ಷವು ಸಾಮಾಜಿಕ ನ್ಯಾಯ ಕಾರ್ಯಸೂಚಿಯನ್ನು ಅನುಸರಿಸುತ್ತಿಲ್ಲ ಎಂದು ಅವರು ಇದೇ ವೇಳೆ ವಾಗ್ದಾಳಿ ನಡೆಸಿದರು.</p>.<p>ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೌತಮ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಮತ್ತು ದೆಹಲಿ ಘಟಕದ ಅಧ್ಯಕ್ಷ ದೇವೇಂದರ್ ಯಾದವ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು.</p>.<p>ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಹೊತ್ತಿನಲ್ಲೇ ರಾಜೇಂದ್ರ ಕೈ ಪಾಳಯಕ್ಕೆ ಸೇರ್ಪಡೆಯಾಗಿದ್ದಾರೆ. ವಕೀಲರಾಗಿದ್ದ ಅವರು 2014ರಲ್ಲಿ ಎಎಪಿಗೆ ಸೇರ್ಪಡೆಗೊಂಡು, ಸೀಮಾಪುರಿ ವಿಧಾನಸಭಾ ಕ್ಷೇತ್ರದಿಂದ 2015 ಹಾಗೂ 2020ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>