<p><strong>ನವದೆಹಲಿ</strong>: ಸದನ ಕಲಾಪದ ಫೋಟೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದ ಎಎಪಿ ಶಾಸಕ ಜರನೈಲ್ ಸಿಂಗ್ ಅವರಿಗೆ, ದೆಹಲಿ ವಿಧಾನಸಭೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಹಕ್ಕುಚ್ಯುತಿ ಮಂಡಿಸುವ ಎಚ್ಚರಿಕೆ ನೀಡಿದರು. ಜಾಲತಾಣದಿಂದ ಫೋಟೊವನ್ನು ತೆಗೆದುಹಾಕುವಂತೆ ತಾಕೀತು ಮಾಡಿದರು.</p>.<p>ಜಾಲತಾಣದಲ್ಲಿ ಕಲಾಪದ ಫೋಟೊ ಹಂಚಿಕೊಂಡಿದ್ದ ತಿಲಕ್ ನಗರ ಕ್ಷೇತ್ರದ ಶಾಸಕ ಜರನೈಲ್ ಸಿಂಗ್, ‘ದೆಹಲಿ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಸಚಿವರ ಉಪಸ್ಥಿತಿ ಇಲ್ಲದೆ ಕಲಾಪ ನಡೆಯುತ್ತಿದೆ. ಸರ್ಕಾರದ ಪರವಾಗಿ ಉತ್ತರಿಸುವವರು ಯಾರು?’ ಎಂದು ಹೇಳಿದ್ದರು. </p>.<p>ಬಿಜೆಪಿ ನಾಯಕರು ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿ, ಜರನೈಲ್ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದರು.</p>.<p>ಈ ವೇಳೆ ಸಿಂಗ್, ‘ವಿಧಾನಸಭೆ ಅಧಿವೇಶನದ ವಿಡಿಯೊಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳಬಹುದು ಎಂದಾದರೆ, ಕಲಾಪದ ಫೋಟೊವನ್ನು ಏಕೆ ಪೋಸ್ಟ್ ಮಾಡಬಾರದು’ ಎಂದು ಸಮರ್ಥಿಸಿಕೊಂಡರು.</p>.<p>ನಂತರ ಸ್ಪೀಕರ್ ಅವರು ನಿಯಮಗಳನ್ನು ಉಲ್ಲೇಖಿಸಿ, ತಮ್ಮ ಅನುಮತಿಯ ಮೇರೆಗೆ ಅಧಿವೇಶನದ ವಿಡಿಯೊಗಳನ್ನು ನೇರ ಪ್ರಸಾರ ಮಾಡಲಾಗುತ್ತದೆ. ಆದರೆ ಸಿಂಗ್, ಯಾವುದೇ ಅನುಮತಿ ಇಲ್ಲದೆ ಕಲಾಪದ ಫೋಟೊವನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಕ್ಷಮೆಯಾಚಿಸಬೇಕು ಎಂದು ಹೇಳಿದರು.</p>.<p>ನಂತರ ಸಿಂಗ್ ಅವರು ತಮ್ಮ ನಡೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಆದರೆ ಜಾಲತಾಣದಿಂದ ತಕ್ಷಣವೇ ಫೋಟೊವನ್ನು ಅಳಿಸಿರಲಿಲ್ಲ. ಇದಕ್ಕೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಸ್ಪೀಕರ್ ಹಕ್ಕುಚ್ಯುತಿ ಮಂಡಿಸುವ ಎಚ್ಚರಿಕೆ ನೀಡಿದರು. ನಂತರ ಸಿಂಗ್ ಫೋಟೊವನ್ನು ಜಾಲತಾಣದಿಂದ ಅಳಿಸಿಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸದನ ಕಲಾಪದ ಫೋಟೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದ ಎಎಪಿ ಶಾಸಕ ಜರನೈಲ್ ಸಿಂಗ್ ಅವರಿಗೆ, ದೆಹಲಿ ವಿಧಾನಸಭೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಹಕ್ಕುಚ್ಯುತಿ ಮಂಡಿಸುವ ಎಚ್ಚರಿಕೆ ನೀಡಿದರು. ಜಾಲತಾಣದಿಂದ ಫೋಟೊವನ್ನು ತೆಗೆದುಹಾಕುವಂತೆ ತಾಕೀತು ಮಾಡಿದರು.</p>.<p>ಜಾಲತಾಣದಲ್ಲಿ ಕಲಾಪದ ಫೋಟೊ ಹಂಚಿಕೊಂಡಿದ್ದ ತಿಲಕ್ ನಗರ ಕ್ಷೇತ್ರದ ಶಾಸಕ ಜರನೈಲ್ ಸಿಂಗ್, ‘ದೆಹಲಿ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಸಚಿವರ ಉಪಸ್ಥಿತಿ ಇಲ್ಲದೆ ಕಲಾಪ ನಡೆಯುತ್ತಿದೆ. ಸರ್ಕಾರದ ಪರವಾಗಿ ಉತ್ತರಿಸುವವರು ಯಾರು?’ ಎಂದು ಹೇಳಿದ್ದರು. </p>.<p>ಬಿಜೆಪಿ ನಾಯಕರು ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿ, ಜರನೈಲ್ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದರು.</p>.<p>ಈ ವೇಳೆ ಸಿಂಗ್, ‘ವಿಧಾನಸಭೆ ಅಧಿವೇಶನದ ವಿಡಿಯೊಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳಬಹುದು ಎಂದಾದರೆ, ಕಲಾಪದ ಫೋಟೊವನ್ನು ಏಕೆ ಪೋಸ್ಟ್ ಮಾಡಬಾರದು’ ಎಂದು ಸಮರ್ಥಿಸಿಕೊಂಡರು.</p>.<p>ನಂತರ ಸ್ಪೀಕರ್ ಅವರು ನಿಯಮಗಳನ್ನು ಉಲ್ಲೇಖಿಸಿ, ತಮ್ಮ ಅನುಮತಿಯ ಮೇರೆಗೆ ಅಧಿವೇಶನದ ವಿಡಿಯೊಗಳನ್ನು ನೇರ ಪ್ರಸಾರ ಮಾಡಲಾಗುತ್ತದೆ. ಆದರೆ ಸಿಂಗ್, ಯಾವುದೇ ಅನುಮತಿ ಇಲ್ಲದೆ ಕಲಾಪದ ಫೋಟೊವನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಕ್ಷಮೆಯಾಚಿಸಬೇಕು ಎಂದು ಹೇಳಿದರು.</p>.<p>ನಂತರ ಸಿಂಗ್ ಅವರು ತಮ್ಮ ನಡೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಆದರೆ ಜಾಲತಾಣದಿಂದ ತಕ್ಷಣವೇ ಫೋಟೊವನ್ನು ಅಳಿಸಿರಲಿಲ್ಲ. ಇದಕ್ಕೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಸ್ಪೀಕರ್ ಹಕ್ಕುಚ್ಯುತಿ ಮಂಡಿಸುವ ಎಚ್ಚರಿಕೆ ನೀಡಿದರು. ನಂತರ ಸಿಂಗ್ ಫೋಟೊವನ್ನು ಜಾಲತಾಣದಿಂದ ಅಳಿಸಿಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>