<p><strong>ನವದೆಹಲಿ:</strong> ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಬಿಜೆಪಿ ಸರ್ಕಾರವು ನಾಲ್ವರು ಎಎಪಿ ಶಾಸಕರನ್ನು ಅಮಾನತುಗೊಳಿಸಿದೆ.</p><p>ವಿಧಾನಸಭೆಯ ಚಳಿಗಾಲದ ಅಧಿವೇಶನದ ಉಳಿದ ಮೂರು ದಿನಗಳವರೆಗೆ ಎಎಪಿ ಶಾಸಕರಾದ ಸಂಜೀವ್ ಝಾ, ಸೋಮ್ ದತ್, ಕುಲದೀಪ್ ಕುಮಾರ್ ಮತ್ತು ಜರ್ನೈಲ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ.</p><p>ಅಧಿವೇಶನವನ್ನು ಉದ್ದೇಶಿಸಿ ಸಕ್ಸೇನಾ ಅವರು ಭಾಷಣ ಮಾಡುತ್ತಿದ್ದ ವೇಳೆ ಎಎಪಿ ಶಾಸಕರು ದೆಹಲಿಯ ವಾಯುಮಾಲಿನ್ಯದ ಬಗ್ಗೆ ಪ್ರಸ್ತಾಪಿಸಿ ಭಾಷಣಕ್ಕೆ ಅಡ್ಡಿಪಡಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಭಾಧ್ಯಕ್ಷ ವಿಜೇಂದರ್ ಗುಪ್ತಾ ಅವರು ವಿಪಕ್ಷ ನಾಯಕರನ್ನು ಸದನದಿಂದ ಹೊರಗೆ ಕರೆದೊಯ್ಯಲು ಮಾರ್ಷಲ್ಗಳಿಗೆ ಆದೇಶಿಸಿದ್ದರು.</p><p>ಸಕ್ಸೇನಾ ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸಂಜೀವ್ ಝಾ, ಕುಲದೀಪ್ ಕುಮಾರ್, ಸೋಮ್ ದತ್ ಮತ್ತು ಜರ್ನೈಲ್ ಸಿಂಗ್ ಅವರನ್ನು ಅಧಿವೇಶನದ ಉಳಿದ ಮೂರು ದಿನಗಳವರೆಗೆ ಅಮಾನತುಗೊಳಿಸಬೇಕು ಎಂದು ಲೋಕೋಪಯೋಗಿ ಸಚಿವ ಪರ್ವೇಶ್ ಸಾಹಿಬ್ ಸಿಂಗ್ ನಿರ್ಣಯ ಮಂಡಿಸಿದರು. ಸದನವು ಈ ನಿರ್ಣಯವನ್ನು ಅಂಗೀಕರಿಸಿತು.</p><p>ಸೂಕ್ತ ಕಾರಣವಿಲ್ಲದೆ ಸದನದಲ್ಲಿ ಗದ್ದಲ ಉಂಟು ಮಾಡುವ ಮೂಲಕ ಎಎಪಿ ಶಾಸಕರು ಸದನ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಸ್ಪೀಕರ್ ಗುಪ್ತಾ ಹೇಳಿದ್ದಾರೆ. </p><p>'ಸದನದಲ್ಲಿ ವಾಯುಮಾಲಿನ್ಯದ ಬಗ್ಗೆ ಪ್ರಸ್ತಾಪಿಸಿದ್ದಕ್ಕಾಗಿ ನಮ್ಮನ್ನು ಅಮಾನತುಗೊಳಿಸಲಾಗಿದೆ’ ಎಂದು ಸರ್ಕಾರದ ಕ್ರಮವನ್ನು ಸಂಜೀವ್ ಝಾ ಖಂಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಬಿಜೆಪಿ ಸರ್ಕಾರವು ನಾಲ್ವರು ಎಎಪಿ ಶಾಸಕರನ್ನು ಅಮಾನತುಗೊಳಿಸಿದೆ.</p><p>ವಿಧಾನಸಭೆಯ ಚಳಿಗಾಲದ ಅಧಿವೇಶನದ ಉಳಿದ ಮೂರು ದಿನಗಳವರೆಗೆ ಎಎಪಿ ಶಾಸಕರಾದ ಸಂಜೀವ್ ಝಾ, ಸೋಮ್ ದತ್, ಕುಲದೀಪ್ ಕುಮಾರ್ ಮತ್ತು ಜರ್ನೈಲ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ.</p><p>ಅಧಿವೇಶನವನ್ನು ಉದ್ದೇಶಿಸಿ ಸಕ್ಸೇನಾ ಅವರು ಭಾಷಣ ಮಾಡುತ್ತಿದ್ದ ವೇಳೆ ಎಎಪಿ ಶಾಸಕರು ದೆಹಲಿಯ ವಾಯುಮಾಲಿನ್ಯದ ಬಗ್ಗೆ ಪ್ರಸ್ತಾಪಿಸಿ ಭಾಷಣಕ್ಕೆ ಅಡ್ಡಿಪಡಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಭಾಧ್ಯಕ್ಷ ವಿಜೇಂದರ್ ಗುಪ್ತಾ ಅವರು ವಿಪಕ್ಷ ನಾಯಕರನ್ನು ಸದನದಿಂದ ಹೊರಗೆ ಕರೆದೊಯ್ಯಲು ಮಾರ್ಷಲ್ಗಳಿಗೆ ಆದೇಶಿಸಿದ್ದರು.</p><p>ಸಕ್ಸೇನಾ ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸಂಜೀವ್ ಝಾ, ಕುಲದೀಪ್ ಕುಮಾರ್, ಸೋಮ್ ದತ್ ಮತ್ತು ಜರ್ನೈಲ್ ಸಿಂಗ್ ಅವರನ್ನು ಅಧಿವೇಶನದ ಉಳಿದ ಮೂರು ದಿನಗಳವರೆಗೆ ಅಮಾನತುಗೊಳಿಸಬೇಕು ಎಂದು ಲೋಕೋಪಯೋಗಿ ಸಚಿವ ಪರ್ವೇಶ್ ಸಾಹಿಬ್ ಸಿಂಗ್ ನಿರ್ಣಯ ಮಂಡಿಸಿದರು. ಸದನವು ಈ ನಿರ್ಣಯವನ್ನು ಅಂಗೀಕರಿಸಿತು.</p><p>ಸೂಕ್ತ ಕಾರಣವಿಲ್ಲದೆ ಸದನದಲ್ಲಿ ಗದ್ದಲ ಉಂಟು ಮಾಡುವ ಮೂಲಕ ಎಎಪಿ ಶಾಸಕರು ಸದನ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಸ್ಪೀಕರ್ ಗುಪ್ತಾ ಹೇಳಿದ್ದಾರೆ. </p><p>'ಸದನದಲ್ಲಿ ವಾಯುಮಾಲಿನ್ಯದ ಬಗ್ಗೆ ಪ್ರಸ್ತಾಪಿಸಿದ್ದಕ್ಕಾಗಿ ನಮ್ಮನ್ನು ಅಮಾನತುಗೊಳಿಸಲಾಗಿದೆ’ ಎಂದು ಸರ್ಕಾರದ ಕ್ರಮವನ್ನು ಸಂಜೀವ್ ಝಾ ಖಂಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>