<p><strong>ನವದೆಹಲಿ:</strong> ದೆಹಲಿಯ ಕಾನೂನು ಸಚಿವ ಕಪಿಲ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಎಪಿ ಶಾಸಕರನ್ನು ಸ್ಪೀಕರ್ ವಿಜೇಂದರ್ ಗುಪ್ತಾ ಅಮಾನತುಗೊಳಿಸಿದ್ದಾರೆ. </p><p>ಎಎಪಿ ಶಾಸಕರು ಕಪಿಲ್ ಮಿಶ್ರಾ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಕನಿಷ್ಠ ಏಳು ಮಂದಿ ಎಎಪಿ ಶಾಸಕರನ್ನು ಅಮಾನತುಗೊಳಿಸಿದ್ದಾರೆ ಎಂದು ವರದಿಯಾಗಿದೆ. </p><p>ಕುಲದೀಪ್ ಕುಮಾರ್, ಸಂಜೀವ್ ಝಾ, ಮುಖೇಶ್ ಅಹ್ಲಾವತ್, ಸುರೇಂದ್ರ ಕುಮಾರ್, ಜರ್ನೈಲ್ ಸಿಂಗ್, ಆಲೆ ಮೊಹಮ್ಮದ್ ಮತ್ತು ಅನಿಲ್ ಝಾ ಅಮಾನತಾಗಿರುವ ಶಾಸಕರು. </p><p>ಅಮಾನತುಗೊಂಡ ಶಾಸಕರು ಸದನದ ಆವರಣದಲ್ಲಿಯೇ ಇದ್ದಾರೆಯೇ ಮತ್ತು ಅಮಾನತು ಆದೇಶದ ಹೊರತಾಗಿಯೂ ಪ್ರತಿಭಟನೆ ಮುಂದುವರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುವಂತೆ ಸ್ಪೀಕರ್ ಗುಪ್ತಾ ಅವರು ವಿಧಾನಸಭಾ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. </p><p> ವಿರೋಧ ಪಕ್ಷದ ನಾಯಕಿ ಆತಿಶಿ ಮಾತನಾಡಿ, ‘2020ರ ದೆಹಲಿ ಗಲಭೆಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಕಪಿಲ್ ಮಿಶ್ರಾ ಏಕೆ ಜೈಲಿನಲ್ಲಿಲ್ಲ? ನಾವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಆದರೆ, ಮಿಶ್ರಾ ಅವರನ್ನು ಬಿಜೆಪಿ ರಕ್ಷಣೆ ಮಾಡುತ್ತಿದೆ’ ಎಂದು ಕಿಡಿಕಾರಿದ್ದಾರೆ. </p><p>ದೆಹಲಿಯಲ್ಲಿ 2020ರಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕಪಿಲ್ ಮಿಶ್ರಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ದೆಹಲಿ ನ್ಯಾಯಾಲಯವು ಮಂಗಳವಾರ ಆದೇಶಿಸಿತ್ತು.</p><p>‘ಗಲಭೆ ಸಂಭವಿಸಿದಾಗ ಮಿಶ್ರಾ ಅವರು ಅಲ್ಲಿ ಇದ್ದಿದ್ದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಗೋಚರಿಸುತ್ತಿದೆ. ಆದ್ದರಿಂದ ತನಿಖೆಯ ಅಗತ್ಯವಿದೆ’ ಎಂದು ಹೆಚ್ಚುವರಿ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಹೇಳಿದ್ದರು.</p><p>ಕಪಿಲ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಯಮುನಾ ವಿಹಾರ್ನ ನಿವಾಸಿ ಮೊಹಮದ್ ಇಲ್ಯಾಸ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ಗಲಭೆಯಲ್ಲಿ ಸಚಿವರ ಯಾವುದೇ ಪಾತ್ರವಿಲ್ಲ ಎಂದು ದೆಹಲಿ ಪೊಲೀಸರು ಈ ಅರ್ಜಿಯನ್ನು ವಿರೋಧಿಸಿದ್ದರು. </p>.ದೆಹಲಿ ಗಲಭೆ ಪ್ರಕರಣ | ಸಚಿವ ಕಪಿಲ್ ಮಿಶ್ರಾ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ.ದೆಹಲಿ ಚುನಾವಣೆ ಭಾರತ–ಪಾಕ್ ನಡುವಿನ ಸ್ಪರ್ಧೆ: ಬಿಜೆಪಿ ನಾಯಕ ಕಪಿಲ್ ಮಿಶ್ರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಕಾನೂನು ಸಚಿವ ಕಪಿಲ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಎಪಿ ಶಾಸಕರನ್ನು ಸ್ಪೀಕರ್ ವಿಜೇಂದರ್ ಗುಪ್ತಾ ಅಮಾನತುಗೊಳಿಸಿದ್ದಾರೆ. </p><p>ಎಎಪಿ ಶಾಸಕರು ಕಪಿಲ್ ಮಿಶ್ರಾ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಕನಿಷ್ಠ ಏಳು ಮಂದಿ ಎಎಪಿ ಶಾಸಕರನ್ನು ಅಮಾನತುಗೊಳಿಸಿದ್ದಾರೆ ಎಂದು ವರದಿಯಾಗಿದೆ. </p><p>ಕುಲದೀಪ್ ಕುಮಾರ್, ಸಂಜೀವ್ ಝಾ, ಮುಖೇಶ್ ಅಹ್ಲಾವತ್, ಸುರೇಂದ್ರ ಕುಮಾರ್, ಜರ್ನೈಲ್ ಸಿಂಗ್, ಆಲೆ ಮೊಹಮ್ಮದ್ ಮತ್ತು ಅನಿಲ್ ಝಾ ಅಮಾನತಾಗಿರುವ ಶಾಸಕರು. </p><p>ಅಮಾನತುಗೊಂಡ ಶಾಸಕರು ಸದನದ ಆವರಣದಲ್ಲಿಯೇ ಇದ್ದಾರೆಯೇ ಮತ್ತು ಅಮಾನತು ಆದೇಶದ ಹೊರತಾಗಿಯೂ ಪ್ರತಿಭಟನೆ ಮುಂದುವರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುವಂತೆ ಸ್ಪೀಕರ್ ಗುಪ್ತಾ ಅವರು ವಿಧಾನಸಭಾ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. </p><p> ವಿರೋಧ ಪಕ್ಷದ ನಾಯಕಿ ಆತಿಶಿ ಮಾತನಾಡಿ, ‘2020ರ ದೆಹಲಿ ಗಲಭೆಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಕಪಿಲ್ ಮಿಶ್ರಾ ಏಕೆ ಜೈಲಿನಲ್ಲಿಲ್ಲ? ನಾವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಆದರೆ, ಮಿಶ್ರಾ ಅವರನ್ನು ಬಿಜೆಪಿ ರಕ್ಷಣೆ ಮಾಡುತ್ತಿದೆ’ ಎಂದು ಕಿಡಿಕಾರಿದ್ದಾರೆ. </p><p>ದೆಹಲಿಯಲ್ಲಿ 2020ರಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕಪಿಲ್ ಮಿಶ್ರಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ದೆಹಲಿ ನ್ಯಾಯಾಲಯವು ಮಂಗಳವಾರ ಆದೇಶಿಸಿತ್ತು.</p><p>‘ಗಲಭೆ ಸಂಭವಿಸಿದಾಗ ಮಿಶ್ರಾ ಅವರು ಅಲ್ಲಿ ಇದ್ದಿದ್ದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಗೋಚರಿಸುತ್ತಿದೆ. ಆದ್ದರಿಂದ ತನಿಖೆಯ ಅಗತ್ಯವಿದೆ’ ಎಂದು ಹೆಚ್ಚುವರಿ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಹೇಳಿದ್ದರು.</p><p>ಕಪಿಲ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಯಮುನಾ ವಿಹಾರ್ನ ನಿವಾಸಿ ಮೊಹಮದ್ ಇಲ್ಯಾಸ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ಗಲಭೆಯಲ್ಲಿ ಸಚಿವರ ಯಾವುದೇ ಪಾತ್ರವಿಲ್ಲ ಎಂದು ದೆಹಲಿ ಪೊಲೀಸರು ಈ ಅರ್ಜಿಯನ್ನು ವಿರೋಧಿಸಿದ್ದರು. </p>.ದೆಹಲಿ ಗಲಭೆ ಪ್ರಕರಣ | ಸಚಿವ ಕಪಿಲ್ ಮಿಶ್ರಾ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ.ದೆಹಲಿ ಚುನಾವಣೆ ಭಾರತ–ಪಾಕ್ ನಡುವಿನ ಸ್ಪರ್ಧೆ: ಬಿಜೆಪಿ ನಾಯಕ ಕಪಿಲ್ ಮಿಶ್ರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>