ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಮಾತನಾಡಿ, ‘ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ, ಮಹಿಳೆಯರಿಗೆ ಭದ್ರತೆ ಒದಗಿಸುತ್ತೇವೆ, ಭ್ರಷ್ಟರನ್ನು ಓಡಿಸುತ್ತೇವೆ ಎಂದು ಹೇಳಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಆದರೆ ಇಂದು ಅದೇ ಪಕ್ಷ ದೇಶದ ಅತ್ಯಂತ ಭ್ರಷ್ಟ ಪಕ್ಷವಾಗಿದೆ’ ಎಂದು ಕಿಡಿಕಾರಿದರು.