<p><strong>ನವದೆಹಲಿ:</strong> ಆಮ್ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.</p><p>ನಾಮಪತ್ರ ಸಲ್ಲಿಸುವುದಕ್ಕೂ ಮೊದಲು, ಕೇಜ್ರಿವಾಲ್ ತಮ್ಮ ಪತ್ನಿ ಸುನಿತಾ ಅವರೊಂದಿಗೆ ಆಂಜನೇಯ ಮತ್ತು ವಾಲ್ಮೀಕಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ಅವರು ಪಕ್ಷದ ಕಚೇರಿಯಿಂದ ನವದೆಹಲಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ 'ಪಾದಯಾತ್ರೆ' ನಡೆಸಿ ನಾಮಪತ್ರ ಸಲ್ಲಿಸಿದರು.</p>.<p>'ಪಾದಯಾತ್ರೆ'ಯಲ್ಲಿ ಸಾವಿರಾರು ಜನ ಎಎಪಿ ಕಾರ್ಯಕರ್ತರು ಭಾಗವಹಿಸಿದ್ದರು.</p><p>ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ಜನರಲ್ಲಿ ಕೆಲಸದ ಆಧಾರದ ಮೇಲೆ ಮತ ಹಾಕಲು ಕೇಳುತ್ತಿದ್ದೇನೆ, ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಇದೆ ಎಂದರು.</p><p>ಇದೇ ವೇಳೆ ವಿರೋಧ ಪಕ್ಷ ಬಿಜೆಪಿ ವಿರುದ್ಧ ಅವರು ಟೀಕೆ ಮಾಡಿದರು.</p>.ದೆಹಲಿ ವಿಧಾನಸಭಾ ಚುನಾವಣೆ: ಕೇಜ್ರಿವಾಲ್ ನವದೆಹಲಿ, ಅತಿಶಿ ಕಲ್ಕಾಜಿಯಿಂದ ಸ್ಪರ್ಧೆ.ದೆಹಲಿ ವಿಧಾನಸಭಾ ಚುನಾವಣೆ: 70 ಅಭ್ಯರ್ಥಿಗಳ ಘೋಷಿಸಿದ ಎಎಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಮ್ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.</p><p>ನಾಮಪತ್ರ ಸಲ್ಲಿಸುವುದಕ್ಕೂ ಮೊದಲು, ಕೇಜ್ರಿವಾಲ್ ತಮ್ಮ ಪತ್ನಿ ಸುನಿತಾ ಅವರೊಂದಿಗೆ ಆಂಜನೇಯ ಮತ್ತು ವಾಲ್ಮೀಕಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ಅವರು ಪಕ್ಷದ ಕಚೇರಿಯಿಂದ ನವದೆಹಲಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ 'ಪಾದಯಾತ್ರೆ' ನಡೆಸಿ ನಾಮಪತ್ರ ಸಲ್ಲಿಸಿದರು.</p>.<p>'ಪಾದಯಾತ್ರೆ'ಯಲ್ಲಿ ಸಾವಿರಾರು ಜನ ಎಎಪಿ ಕಾರ್ಯಕರ್ತರು ಭಾಗವಹಿಸಿದ್ದರು.</p><p>ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ಜನರಲ್ಲಿ ಕೆಲಸದ ಆಧಾರದ ಮೇಲೆ ಮತ ಹಾಕಲು ಕೇಳುತ್ತಿದ್ದೇನೆ, ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಇದೆ ಎಂದರು.</p><p>ಇದೇ ವೇಳೆ ವಿರೋಧ ಪಕ್ಷ ಬಿಜೆಪಿ ವಿರುದ್ಧ ಅವರು ಟೀಕೆ ಮಾಡಿದರು.</p>.ದೆಹಲಿ ವಿಧಾನಸಭಾ ಚುನಾವಣೆ: ಕೇಜ್ರಿವಾಲ್ ನವದೆಹಲಿ, ಅತಿಶಿ ಕಲ್ಕಾಜಿಯಿಂದ ಸ್ಪರ್ಧೆ.ದೆಹಲಿ ವಿಧಾನಸಭಾ ಚುನಾವಣೆ: 70 ಅಭ್ಯರ್ಥಿಗಳ ಘೋಷಿಸಿದ ಎಎಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>