<p><strong>ನವದೆಹಲಿ</strong>: ಎಎಪಿ ತೊರೆದು ಬಿಜೆಪಿಯೊಂದಿಗೆ ವಿಲೀನಗೊಳ್ಳುವುದಾಗಿ ಇತ್ತೀಚೆಗೆ ಘೋಷಿಸಿದ ಪಕ್ಷದ ಏಳು ರಾಜ್ಯಸಭಾ ಸದಸ್ಯರನ್ನು ಅನರ್ಹಗೊಳಿಸುವಂತೆ ಕೋರಿ ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅರ್ಜಿ ಸಲ್ಲಿಸಿರುವುದಾಗಿ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಭಾನುವಾರ ತಿಳಿಸಿದ್ದಾರೆ.</p><p>ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಗತ್ಯವಿದ್ದರೆ ಈ ವಿಷಯದಲ್ಲಿ ಪಕ್ಷವು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಏಳು ಸಂಸದರ ಈ ಕ್ರಮವು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.</p><p>ಏಳು ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಎಎಪಿಯು ರಾಜ್ಯಸಭಾ ಅಧ್ಯಕ್ಷರನ್ನು ಒತ್ತಾಯಿಸಿದೆ. ಅವರೆಲ್ಲ ಎಎಪಿ ಟಿಕೆಟ್ ಮೇಲೆ ಮೇಲ್ಮನೆಗೆ ಆಯ್ಕೆಯಾಗಿದ್ದರು. ಆದರೆ ನಂತರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ನಿರ್ಧರಿಸಿದ್ದಾರೆ ಎಂದು ಎಎಪಿ ತಿಳಿಸಿದೆ.</p><p>ಶುಕ್ರವಾರ, ಎಎಪಿಯ ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್, ಹರ್ಭಜನ್ ಸಿಂಗ್, ರಾಜೇಂದ್ರ ಗುಪ್ತಾ, ವಿಕ್ರಮ್ ಸಾಹ್ನಿ ಮತ್ತು ಸ್ವಾತಿ ಮಲಿವಾಲ್ ಅವರು ಪಕ್ಷ ತೊರೆದು ಬಿಜೆಪಿಯಲ್ಲಿ ವಿಲೀನಗೊಳ್ಳುವುದಾಗಿ ಘೋಷಿಸಿದ್ದರು. ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ತನ್ನ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ದೂರ ಸರಿದಿದೆ ಎಂದು ಅವರು ಆರೋಪಿಸಿದ್ದರು.</p><p>'ಸಂವಿಧಾನದ ಪ್ರಕಾರ, ಒಂದು ಪಕ್ಷದ ಒಟ್ಟು ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳ್ಳಬಹುದು' ಎಂದು ಚಡ್ಡಾ ಹೇಳಿದ್ದರು. ಇದಕ್ಕೆ ಪಕ್ಷಾಂತರ ವಿರೋಧಿ ಕಾಯ್ದೆ ಅಡ್ಡ ಬರುವುದಿಲ್ಲ ಎಂದು ವಾದಿಸಿದ್ದರು. ರಾಜ್ಯಸಭೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದ್ದು, 7 ಸಂಸದರು ಹೋಗುತ್ತಿರುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದಿದ್ದರು.</p><p>ಈ ವಾದ ತಳ್ಳಿ ಹಾಕಿರುವ ಸಿಂಗ್, ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ಸುಪ್ರೀಂ ಕೋರ್ಟ್ನ ಹಲವು ತೀರ್ಪುಗಳು ಪಕ್ಷಾಂತರಗಳು ಹೇಗೆ ಅನರ್ಹತೆಗೆ ಕಾರಣವಾಗಬಹುದು ಎಂಬುದನ್ನು ಸ್ಪಷ್ಟಪಡಿಸಿವೆ ಎಂದು ಹೇಳಿದ್ದಾರೆ.</p><p>ಸಂವಿಧಾನದ 10ನೇ ಪರಿಚ್ಛೇದವನ್ನು ಉಲ್ಲೇಖಿಸಿದ ಸಿಂಗ್, ‘ಇದು ಸಂಸದರು ಮಾಡಿರುವ ರಾಜಕೀಯ ಪಕ್ಷಾಂತರಗಳನ್ನು ಸ್ಪಷ್ಟವಾಗಿ ಅನುಮತಿಸುವುದಿಲ್ಲ’ಎಂದು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಎಪಿ ತೊರೆದು ಬಿಜೆಪಿಯೊಂದಿಗೆ ವಿಲೀನಗೊಳ್ಳುವುದಾಗಿ ಇತ್ತೀಚೆಗೆ ಘೋಷಿಸಿದ ಪಕ್ಷದ ಏಳು ರಾಜ್ಯಸಭಾ ಸದಸ್ಯರನ್ನು ಅನರ್ಹಗೊಳಿಸುವಂತೆ ಕೋರಿ ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅರ್ಜಿ ಸಲ್ಲಿಸಿರುವುದಾಗಿ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಭಾನುವಾರ ತಿಳಿಸಿದ್ದಾರೆ.</p><p>ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಗತ್ಯವಿದ್ದರೆ ಈ ವಿಷಯದಲ್ಲಿ ಪಕ್ಷವು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಏಳು ಸಂಸದರ ಈ ಕ್ರಮವು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.</p><p>ಏಳು ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಎಎಪಿಯು ರಾಜ್ಯಸಭಾ ಅಧ್ಯಕ್ಷರನ್ನು ಒತ್ತಾಯಿಸಿದೆ. ಅವರೆಲ್ಲ ಎಎಪಿ ಟಿಕೆಟ್ ಮೇಲೆ ಮೇಲ್ಮನೆಗೆ ಆಯ್ಕೆಯಾಗಿದ್ದರು. ಆದರೆ ನಂತರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ನಿರ್ಧರಿಸಿದ್ದಾರೆ ಎಂದು ಎಎಪಿ ತಿಳಿಸಿದೆ.</p><p>ಶುಕ್ರವಾರ, ಎಎಪಿಯ ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್, ಹರ್ಭಜನ್ ಸಿಂಗ್, ರಾಜೇಂದ್ರ ಗುಪ್ತಾ, ವಿಕ್ರಮ್ ಸಾಹ್ನಿ ಮತ್ತು ಸ್ವಾತಿ ಮಲಿವಾಲ್ ಅವರು ಪಕ್ಷ ತೊರೆದು ಬಿಜೆಪಿಯಲ್ಲಿ ವಿಲೀನಗೊಳ್ಳುವುದಾಗಿ ಘೋಷಿಸಿದ್ದರು. ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ತನ್ನ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ದೂರ ಸರಿದಿದೆ ಎಂದು ಅವರು ಆರೋಪಿಸಿದ್ದರು.</p><p>'ಸಂವಿಧಾನದ ಪ್ರಕಾರ, ಒಂದು ಪಕ್ಷದ ಒಟ್ಟು ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳ್ಳಬಹುದು' ಎಂದು ಚಡ್ಡಾ ಹೇಳಿದ್ದರು. ಇದಕ್ಕೆ ಪಕ್ಷಾಂತರ ವಿರೋಧಿ ಕಾಯ್ದೆ ಅಡ್ಡ ಬರುವುದಿಲ್ಲ ಎಂದು ವಾದಿಸಿದ್ದರು. ರಾಜ್ಯಸಭೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದ್ದು, 7 ಸಂಸದರು ಹೋಗುತ್ತಿರುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದಿದ್ದರು.</p><p>ಈ ವಾದ ತಳ್ಳಿ ಹಾಕಿರುವ ಸಿಂಗ್, ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ಸುಪ್ರೀಂ ಕೋರ್ಟ್ನ ಹಲವು ತೀರ್ಪುಗಳು ಪಕ್ಷಾಂತರಗಳು ಹೇಗೆ ಅನರ್ಹತೆಗೆ ಕಾರಣವಾಗಬಹುದು ಎಂಬುದನ್ನು ಸ್ಪಷ್ಟಪಡಿಸಿವೆ ಎಂದು ಹೇಳಿದ್ದಾರೆ.</p><p>ಸಂವಿಧಾನದ 10ನೇ ಪರಿಚ್ಛೇದವನ್ನು ಉಲ್ಲೇಖಿಸಿದ ಸಿಂಗ್, ‘ಇದು ಸಂಸದರು ಮಾಡಿರುವ ರಾಜಕೀಯ ಪಕ್ಷಾಂತರಗಳನ್ನು ಸ್ಪಷ್ಟವಾಗಿ ಅನುಮತಿಸುವುದಿಲ್ಲ’ಎಂದು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>