<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ರಾಜಕೀಯ ಕೈದಿ ಎಂಬಂತೆ ಪರಿಗಣಿಸಲಾಗುತ್ತಿದೆ. ಅವರನ್ನು ಬೆದರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.</p><p>ಎಎಪಿ ರಾಜ್ಯಸಭೆ ಸದಸ್ಯ ಸಂದೀಪ್ ಪಾಠಕ್ ಅವರು, 'ಕೇಜ್ರಿವಾಲ್ ಅವರು ರಾಜಕೀಯ ಕೈದಿಯಾಗಿದ್ದಾರೆ. ಸರ್ವಾಧಿಕಾರಿಗಳು ರಾಜಕೀಯ ಕೈದಿಗಳನ್ನು ಹೇಗೆ ನಡೆಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕೇಜ್ರಿವಾಲ್ ಅವರು ಧ್ವನಿ ಎತ್ತದಂತೆ ಮಾಡಲು ಬೆದರಿಸುವ ಪ್ರಯತ್ನಗಳು ನಡೆಯುತ್ತಿವೆ' ಎಂದು ಗಂಭೀರ ಆರೋಪ ಮಾಡಿದ್ದಾರೆ.</p><p>ಎಎಪಿಯ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ಪಿತೂರಿಗೆ ಬಲಿಯಾಗಿದ್ದಾರೆ ಎಂದಿರುವ ಪಾಠಕ್, ಕೇಜ್ರಿವಾಲ್ ಅವರಿಗೆ ಕಳೆದ 30 ವರ್ಷಗಳಿಂದ ತೀವ್ರ ಸ್ವರೂಪದ ಮಧುಮೇಹ (ಸಕ್ಕರೆ ಕಾಯಿಲೆ) ಇದೆ. ಅವರು ಹೈಪೊಗ್ಲೈಸಿಮಿಯಾದಿಂದ ಬಳಲುತ್ತಿದ್ದಾರೆ ಎಂದಿದ್ದಾರೆ.</p><p>'ಜೂನ್ 3ರಿಂದ ಜುಲೈ 7ರ ವರೆಗಿನ ನ್ಯಾಯಾಂಗ ಬಂಧನದ ಅವಧಿಯಲ್ಲಿ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣವು 34 ಬಾರಿ ಕುಸಿದಿದೆ. ಇದು ಗಂಭೀರವಾದ ವಿಚಾರ. ಅವರು ಸಾಮಾನ್ಯ ವ್ಯಕ್ತಿಯಲ್ಲ. ಜನರಿಂದ ಚುನಾಯಿತರಾಗಿರುವ ಮುಖ್ಯಮಂತ್ರಿ' ಎಂದು ಉಲ್ಲೇಖಿಸಿದ್ದಾರೆ.</p><p>ಇದೇ ವಿಚಾರವಾಗಿ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ದೆಹಲಿಯ ಜಂತರ್ಮಂತರ್ನಲ್ಲಿ ಜುಲೈ 30ರಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲು ನಿರ್ಧರಿಸಿದೆ ಎಂದೂ ಪಾಠಕ್ ಹೇಳಿದ್ದಾರೆ.</p>.ಹದಗೆಟ್ಟ ಕೇಜ್ರಿವಾಲ್ ಆರೋಗ್ಯ: ಜುಲೈ 30ರಂದು 'ಇಂಡಿಯಾ' ಮೈತ್ರಿಕೂಟದಿಂದ ರ್ಯಾಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ರಾಜಕೀಯ ಕೈದಿ ಎಂಬಂತೆ ಪರಿಗಣಿಸಲಾಗುತ್ತಿದೆ. ಅವರನ್ನು ಬೆದರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.</p><p>ಎಎಪಿ ರಾಜ್ಯಸಭೆ ಸದಸ್ಯ ಸಂದೀಪ್ ಪಾಠಕ್ ಅವರು, 'ಕೇಜ್ರಿವಾಲ್ ಅವರು ರಾಜಕೀಯ ಕೈದಿಯಾಗಿದ್ದಾರೆ. ಸರ್ವಾಧಿಕಾರಿಗಳು ರಾಜಕೀಯ ಕೈದಿಗಳನ್ನು ಹೇಗೆ ನಡೆಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕೇಜ್ರಿವಾಲ್ ಅವರು ಧ್ವನಿ ಎತ್ತದಂತೆ ಮಾಡಲು ಬೆದರಿಸುವ ಪ್ರಯತ್ನಗಳು ನಡೆಯುತ್ತಿವೆ' ಎಂದು ಗಂಭೀರ ಆರೋಪ ಮಾಡಿದ್ದಾರೆ.</p><p>ಎಎಪಿಯ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ಪಿತೂರಿಗೆ ಬಲಿಯಾಗಿದ್ದಾರೆ ಎಂದಿರುವ ಪಾಠಕ್, ಕೇಜ್ರಿವಾಲ್ ಅವರಿಗೆ ಕಳೆದ 30 ವರ್ಷಗಳಿಂದ ತೀವ್ರ ಸ್ವರೂಪದ ಮಧುಮೇಹ (ಸಕ್ಕರೆ ಕಾಯಿಲೆ) ಇದೆ. ಅವರು ಹೈಪೊಗ್ಲೈಸಿಮಿಯಾದಿಂದ ಬಳಲುತ್ತಿದ್ದಾರೆ ಎಂದಿದ್ದಾರೆ.</p><p>'ಜೂನ್ 3ರಿಂದ ಜುಲೈ 7ರ ವರೆಗಿನ ನ್ಯಾಯಾಂಗ ಬಂಧನದ ಅವಧಿಯಲ್ಲಿ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣವು 34 ಬಾರಿ ಕುಸಿದಿದೆ. ಇದು ಗಂಭೀರವಾದ ವಿಚಾರ. ಅವರು ಸಾಮಾನ್ಯ ವ್ಯಕ್ತಿಯಲ್ಲ. ಜನರಿಂದ ಚುನಾಯಿತರಾಗಿರುವ ಮುಖ್ಯಮಂತ್ರಿ' ಎಂದು ಉಲ್ಲೇಖಿಸಿದ್ದಾರೆ.</p><p>ಇದೇ ವಿಚಾರವಾಗಿ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ದೆಹಲಿಯ ಜಂತರ್ಮಂತರ್ನಲ್ಲಿ ಜುಲೈ 30ರಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲು ನಿರ್ಧರಿಸಿದೆ ಎಂದೂ ಪಾಠಕ್ ಹೇಳಿದ್ದಾರೆ.</p>.ಹದಗೆಟ್ಟ ಕೇಜ್ರಿವಾಲ್ ಆರೋಗ್ಯ: ಜುಲೈ 30ರಂದು 'ಇಂಡಿಯಾ' ಮೈತ್ರಿಕೂಟದಿಂದ ರ್ಯಾಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>